ಸ್ಥಳದಲ್ಲೇ ಪರಿಹಾರಕ್ಕೆ ಗ್ರಾಮ ವಾಸ್ತವ್ಯ ಸಹಕಾರಿ
ಹಳ್ಳಿಯ ಜನರಿಗೆ ಸಮಯಕ್ಕೆ ಸರಿಯಾಗಿ ಅಧಿಕಾರಿಗಳು ಸಿಗುವುದಿಲ್ಲ ಎಂಬ ದೂರು ದೂರ: ಕುತುಜಾ
Team Udayavani, Apr 18, 2022, 10:54 AM IST
ಅಳ್ನಾವರ: ಸ್ಥಳದಲ್ಲೇ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮವಾಸ್ತವ್ಯ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೊನ್ನಾಪುರ ಗ್ರಾಪಂ ಅಧ್ಯಕ್ಷೆ ಕುತುಜಾ ಡೊನಸಾಲ ಹೇಳಿದರು.
ಗ್ರಾಮದಲ್ಲಿ ನಡೆದ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹಳ್ಳಿ ಜನರಿಗೆ ಸಮಯಕ್ಕೆ ಸರಿಯಾಗಿ ಅಧಿ ಕಾರಿಗಳು ಸಿಗುವುದಿಲ್ಲ ಎಂಬ ದೂರು ದೂರವಾಗಿ ಸಮಸ್ಯೆಗಳಿಗೆ ಈ ಕಾರ್ಯಕ್ರಮದಿಂದ ಶೀಘ್ರ ಪರಿಹಾರ ದೊರೆಯಲಿದೆ. ಪಿಂಚಣಿ ಯೋಜನೆ ಸಾಕಷ್ಟು ಜನರಿಗೆ ಸಹಾಯ ಆಗಿದೆ ಎಂದರು.
ತಹಶೀಲ್ದಾರ್ ಅಮರೇಶ ಪಮ್ಮಾರ ಮಾತನಾಡಿ, 30 ಅರ್ಜಿಗಳು ಬಂದಿವೆ. ಅದರಲ್ಲಿ 6 ಅರ್ಜಿಗಳಿಗೆ ಸ್ಥಳದಲ್ಲಿ ಪರಿಹಾರ ನೀಡಲಾಗಿದೆ. ಪಿಂಚಣಿ ಅರ್ಜಿಗೆ ಮಂಜೂರಾತಿ ನೀಡಲಾಗಿದೆ. ಉಳಿದ ಅರ್ಜಿಗಳನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.
ರಸ್ತೆ, ಚರಂಡಿ ನಿರ್ಮಾಣ ಮುಂತಾದ ಕಾರ್ಯಗಳನ್ನು ಗ್ರಾಪಂನವರು ನಿಭಾಯಿಸಬೇಕು ಎಂದು ಪಿಡಿಒ ಅವರಿಗೆ ನಿರ್ದೇಶನ ನೀಡಿದರು. ಕೃಷಿ, ಶಿಕ್ಷಣ, ತೋಟಗಾರಿಕೆ ಮುಂತಾದ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಹೊನ್ನಾಪುರ ಹಾಗೂ ಕಲಕೇರಿ ಭಾಗದಲ್ಲಿ ಅರಣ್ಯ ಇಲಾಖೆಯವರು ಹೊಡೆದ ಟ್ರೆಂಚ್ ಕಾಮಗಾರಿಯಿಂದ ಪಕ್ಕದ ಹೊಲಗಳಿಗೆ ತೊಂದರೆ ಆಗಿದೆ ಎಂಬ ದೂರು ಕೇಳಿಬಂತು. ಗ್ರಾಮದ ಪ್ರತಿ ಮನೆಯ ನೀಲನಕ್ಷೆ ತಯಾರಿಸುವ ಕಾರ್ಯ ಸುಗಮವಾಗಿ ನಡೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
ತಹಶೀಲ್ದಾರರು ಗ್ರಾಮ ಒನ್ ಕೇಂದ್ರ, ಶಾಲೆ, ಅಂಗನವಾಡಿ, ಪಡಿತರ ಅಂಗಡಿ ಹಾಗೂ ಎಸ್ಸಿ-ಎಸ್ಟಿ ಕಾಲೋನಿಗೆ ಭೇಟಿ ನೀಡಿದರು. ಶಾಲಾ ಆವರಣದಲ್ಲಿ ಸಸಿ ನೆಡಲಾಯಿತು. ತಾಪಂ ಯೋಜನಾಧಿ ಕಾರಿ ಪ್ರಕಾಶ ಹಾಲಮತ್, ಗ್ರಾಪಂ ಉಪಾಧ್ಯಕ್ಷ ಫಾರೂಕ ಅಂಬಡಗಟ್ಟಿ, ಎಚ್.ಆರ್. ಸನದಿ, ಪಿಡಿಒ ರೇಣುಕಾ ಕೊಪ್ಪದ, ತೇಜಸ್ ದೊಡ್ಡಮನಿ, ಪರಪ್ಪ ನಾಯಕ, ಲಕ್ಷ್ಮಣ ಪತ್ತಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ