ಅಂದು ರಾಜಕೀಯ- ಇಂದು ಪ್ರಾಣಸಂಕಟ-ಮುಂದು ಸರಕಾರಕ್ಕೆ ಖೋತಾ!

ಬಸ್‌ಸ್ಟಾಂಡ್‌ ವಠಾರ, ಆಕಾಶವಾಣಿ ಜಂಕ್ಷನ್‌, ಮಹೇಶ್‌ ಡಿವೈಡರ್‌ ಅಪಘಾತ ವಲಯ

Team Udayavani, Apr 18, 2022, 12:27 PM IST

bramhavara

ಬ್ರಹ್ಮಾವರ: ಬ್ರಹ್ಮಾವರದಲ್ಲಿ ರಾ.ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ಕಾಮಗಾರಿ ಆರಂಭವಾಗುವಾಗ ತಂದ ಒತ್ತಡದ ದುಷ್ಪರಿಣಾಮವನ್ನು ಇಂದು ಪ್ರತಿನಿತ್ಯ ಸಾವಿರಾರು ಮಂದಿ ಅನುಭವಿಸುತ್ತಿದ್ದಾರೆ.

ಮುಖ್ಯವಾಗಿ ಬಸ್‌ಸ್ಟಾಂಡ್‌ ವಠಾರ, ಆಕಾಶವಾಣಿ ಮತ್ತು ಮಹೇಶ್‌ ಆಸ್ಪತ್ರೆ ಡಿವೈಡರ್‌ ಅಪಾಯಕಾರಿ ಸ್ಥಳಗಳಾಗಿ ಜನರನ್ನು ಕಾಡುತ್ತಿದೆ. ಬಸ್‌ಸ್ಟಾಂಡ್‌ನಿಂದ ಸ್ವಲ್ಪ ಹಿಂದೆ ಪ್ರಾರಂಭಗೊಂಡಿದ್ದ ಅಂಡರ್‌ಪಾಸ್‌ ಕಾಮಗಾರಿಯನ್ನು ಒತ್ತಡದ ಕಾರಣ ಸಮುದಾಯ ಆರೋಗ್ಯ ಕೇಂದ್ರದ ಎದುರಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿಯೂ ಮಂಜೂರಾದ ಅಂಡರ್‌ ಪಾಸ್‌ ಬದಲಿಗೆ ಚಿಕ್ಕದಾದ ಕ್ಯಾಟಲ್‌ ಪಾಸ್‌ ನಿರ್ಮಿಸಲಾಯಿತು. ಪರಿಣಾಮ ಬಸ್‌ಸ್ಟಾಂಡ್‌, ಕ್ಯಾಟಲ್‌ಪಾಸ್‌, ಆಕಾಶವಾಣಿ ಅಪಘಾತ ವಲಯಗಳಾಗಿ ಮಾರ್ಪಾಡಾಗಿದೆ.

ಗೊಂದಲ, ಆತಂಕ

ಬಸ್‌ಸ್ಟಾಂಡ್‌ ಬಳಿ ಪೇಟೆ ಹಾಗೂ ಕುಂಜಾಲು ಕಡೆಯಿಂದ ಬರುವ, ಹೋಗುವ ವಾಹನಗಳು, ಸರ್ವಿಸ್‌ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಕೇಂದ್ರೀಕರಿಸುವುದರಿಂದ ತೀವ್ರ ಗೊಂದಲವಾಗುತ್ತಿದೆ.

ಆಕಾಶವಾಣಿ ಬಳಿ ರಾ.ಹೆ., ಬಾರಕೂರು ರಸ್ತೆ, ಸಂತೆ ಮಾರುಕಟ್ಟೆ ರಸ್ತೆ, ಸರ್ವಿಸ್‌ ರಸ್ತೆಗಳು ಕೂಡುವುದರಿಂದ ಭಯದ ವಾತಾವರಣ ಸೃಷ್ಟಿಯಾಗುತ್ತದೆ. ಜತೆಗೆ ದಿಬ್ಬದ ರೀತಿ ಒಮ್ಮೆಲೇ ರಸ್ತೆ ಎತ್ತರಿಸಿದ್ದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಜತೆಗೆ ಮುಂಬಯಿ, ಹುಬ್ಬಳ್ಳಿ, ಬೆಳಗಾಂ ಮೊದಲಾದ ಕಡೆ ತೆರಳುವ ಬಸ್‌ಗಳು ಹೆದ್ದಾರಿಯಲ್ಲೇ ನಿಲ್ಲುವುದರಿಂದ ಇತರ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.

ಆಶ್ರಯ ಹೊಟೇಲ್‌ ಕಡೆಯಿಂದ ಪೇಟೆಗೆ ಬರುವ ವಾಹನಗಳು ಬ್ಯಾರಿಕೇಡ್‌ ನಡುವೆ ಸಂಚರಿಸುತ್ತಿರುವುದು ಭಾರೀ ಅಪಾಯಕ್ಕೆ ಎಡೆ ಮಾಡುತ್ತಿದೆ. ಇನ್ನು ಕ್ಯಾಟಲ್‌ ಪಾಸ್‌ ಬಳಿ ವಾಹನ ಸವಾರರ ಪರದಾಟ ಹೇಳತೀರದು.

ಕುಂಜಾಲು ಸರ್ಕಲ್‌, ಕೆ.ಜಿ. ರೋಡ್‌ ಜಂಕ್ಷನ್‌ ಹಾಗೂ ಧರ್ಮಾವರಂ ಡಿವೈಡರ್‌ ಕೂಡಾ ಅಪಾಯಕಾರಿ ಸ್ಥಳಗಳಾಗಿ ಬದಲಾಗುತ್ತಿದೆ.

ಟ್ರಾಫಿಕ್‌ ನಿರ್ವಹಣೆಗೆ ಹಲವು ಕ್ರಮ

ಬ್ರಹ್ಮಾವರದಲ್ಲಿ ಟ್ರಾಫಿಕ್‌ ಸಮಸ್ಯೆ ನಿರ್ವಹಣೆಗೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಸ್‌ಸ್ಟಾಂಡ್‌, ಆಕಾಶವಾಣಿ ಬಳಿ ಹೆಚ್ಚುವರಿ ಪೊಲೀಸ್‌ ಸಿಬಂದಿ ನಿಯೋಜಿಸಲಾಗಿದೆ. ಸಂಜೆ ಅನಂತರವೂ ಉಡುಪಿಯಿಂದ ಕುಂದಾಪುರ ಕಡೆ ತೆರಳುವ ಎಲ್ಲ ಬಸ್‌ಗಳು ಸ್ಟಾಂಡ್‌ ಒಳಗೆ ಬರುವಂತೆ ಮಾಡಲಾಗಿದೆ. ಗುರುನಾಥ್‌ ಹಾದಿಮನಿ, ಪೊಲೀಸ್‌ ಉಪನಿರೀಕ್ಷಕರು, ಬ್ರಹ್ಮಾವರ

ಪ್ರವೀಣ್‌ ಮುದ್ದೂರು

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.