ರತ್ನಗಿರಿಯಲ್ಲಿ ಮಲ್ಪೆಯ ಬೋಟು ಮುಳುಗಡೆ : 7 ಮಂದಿ ಮೀನುಗಾರರ ರಕ್ಷಣೆ, 70 ಲಕ್ಷ ರೂ. ನಷ್ಟ
Team Udayavani, Apr 19, 2022, 5:55 AM IST
ಮಲ್ಪೆ: ಇಲ್ಲಿನ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ಬೋಟು ಮಹಾರಾಷ್ಟ್ರದ ರತ್ನಗಿರಿ ಸಮೀಪ ಮುಳುಗಡೆಗೊಂಡಿದ್ದು ಅದರಲ್ಲಿದ್ದ 7 ಮೀನುಗಾರರನ್ನು ರಕ್ಷಿಸಲಾಗಿದೆ.
ಕಡೆಕಾರು ಪಡುಕರೆ ಭಗವಾನ್ದಾಸ್ ಕೋಟ್ಯಾನ್ ಅವರಿಗೆ ಸೇರಿದ ದಿವ್ಯಶಕ್ತಿ ಆಳಸಮುದ್ರ ಬೋಟ್ ಎ. 10ರಂದು ಮಲ್ಪೆಯಿಂದ ತೆರಳಿತ್ತು. ಎ. 13ರಂದು ರಾತ್ರಿ 9.30ರ ವೇಳೆಗೆ ರತ್ನಗಿರಿಯ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಟ್ಟಿಯಾದ ವಸ್ತು ಬೋಟಿನ ತಳಭಾಗಕ್ಕೆ ತಾಗಿದ್ದು ಪರಿಣಾಮ ಬೋಟಿನ ಒಳಕ್ಕೆ ನೀರು ಬರಲಾರಂಭಿಸಿತು. ಸಮೀಪದಲ್ಲಿದ್ದ ನೀಲಾದ್ರಿ ಮತ್ತು ಸುವರ್ಣ ಛಾಯ ಬೋಟಿನವರಿಗೆ ಮಾಹಿತಿ ನೀಡಿದಾಗ, ತತ್ಕ್ಷಣ ಧಾವಿಸಿ ಬಂದ ಅವರು ಬೋಟಿನಲ್ಲಿದ್ದ ದೇವೇಂದ್ರ, ಸತೀಶ, ಮಾದಪ್ಪ, ನವೀನ, ಮಹೇಂದ್ರ, ಚಂದ್ರಕಾಂತ ಮತ್ತು ರವಿ ಅವರನ್ನು ರಕ್ಷಿಸಿದರು.
ಇದನ್ನೂ ಓದಿ:ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ: ಸೆಕ್ಷನ್ 5ರ ಜಾರಿಗೆ ಅನುಮತಿಸಿ ಹೈಕೋರ್ಟ್ ಆದೇಶ
ದಿವ್ಯಶಕ್ತಿ ಬೋಟ್ ಸಂಪೂರ್ಣ ಮುಳುಗಡೆಗೊಂಡಿದ್ದು ಅದರಲ್ಲಿ ಡೀಸೆಲ್, ಮೀನು ಹಾಗೂ ಇನ್ನಿತರ ಪರಿಕರಗಳು ಸಮುದ್ರ ಪಾಲಾಗಿವೆ. ಸುಮಾರು 70 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ