ಕಲಬುರಗಿ-ಹೈದ್ರಾಬಾದ್‌ ವಿಮಾನ ಶುರು


Team Udayavani, Apr 19, 2022, 9:45 AM IST

2flight

ಕಲಬುರಗಿ: ಈಗಾಗಲೇ ಬೆಂಗಳೂರು ಅಲ್ಲದೇ ದೆಹಲಿ, ತಿರುಪತಿ ಸೇರಿದಂತೆ ವಿವಿಧ ಮಹಾನಗರಗಳಿಗೆ ಇಲ್ಲಿನ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ ಶುರುವಾಗಿದ್ದು, ಇದಕ್ಕೆ ಈಗ ಹೈದ್ರಾಬಾದ್‌ ಸೇರ್ಪಡೆಯಾಗಿದೆ. ಕಲಬುರಗಿ ಜಿಲ್ಲೆಯ ಜನ ಅನೇಕ ವಸ್ತುಗಳ ಖರೀದಿಗೆ ಹೈದ್ರಾಬಾದ್‌ನ್ನು ನೆಚ್ಚಿಕೊಂಡಿದ್ದಾರೆ. ಹೀಗಾಗಿ ಸೋಮವಾರ ಶುರುವಾಗಿರುವ ಕಲಬುರಗಿ -ಹೈದ್ರಾಬಾದ್‌ ನಡುವಿನ ವಿಮಾನ ಸಂಚಾರ ಹೆಚ್ಚಿನ ಅನುಕೂಲವಾಗಲಿದೆ. ಸಂಸದ ಡಾ| ಉಮೇಶ ಜಾಧವ ವಿಮಾನ ಸಂಚಾರಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಲಬುರಗಿ ಹಾಗೂ ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳ ಅನುಕೂಲಕ್ಕಾಗಿ ಕಲಬುರಗಿ ವಿಮಾನ ನಿಲ್ದಾಣದಿಂದ ಹಲವು ಲೋಹದ ಹಕ್ಕಿಗಳು ಬೇರೆ ಬೇರೆ ರಾಜ್ಯಗಳಿಗೆ ಹಾರಾಡುವಂತೆ ಸರ್ಕಾರ ಮಾಡುತ್ತಿದೆ ಎಂದರು.

ಕಲಬುರಗಿ-ಗೋವಾ ನಡುವಿನ ಏರಲೈನ್ಸ್‌ ಏರ್‌ ವಿಮಾನ ಹಾರಾಟವನ್ನು ಕೇಕ್‌ ಕತ್ತರಿಸುವ ಮೂಲಕ ಚಾಲನೆ ನೀಡಿದ ಸಂಸದರು, ಕಲಬುರಗಿ ಜಿಲ್ಲೆಯ ವೃದ್ಧರು, ರೋಗಿಗಳು ತುರ್ತು ಚಿಕಿತ್ಸೆಗಾಗಿ ಹೈದ್ರಾಬಾದ್‌ಗೆ ಹಾಗೂ ಹೈದ್ರಾಬಾದ್‌ ನಿಂದ ಬೆಂಗಳೂರಿಗೆ ತೆರಳಲು ಈ ವಿಮಾನ ಅನುಕೂಲಕರವಾಗಲಿದೆ. ಹೈದ್ರಾಬಾದ್‌ನಿಂದ ಪವಿತ್ರ ಸ್ಥಳಗಳಾದ ಹಜ್‌, ಕಾಶಿ, ಆಯೋಧ್ಯಾ, ಅಮರನಾಥ, ವೈಷ್ಣೋದೇವಿ ಹಾಗೂ ವಿವಿಧ ಪುಣ್ಯ ಕ್ಷೇತ್ರಗಳಿಗೆ ತೆರಳಲು ಅನುಕೂಲಕರವಾಗಿದೆ. ಕಲಬುರಗಿ ಹಾಗೂ ವಿಭಾಗದ ಜಿಲ್ಲೆಗಳ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಯಾಣಿಕರು ಸರ್ಕಾರದ ಕೊರೊನಾ ನಿಯಮ ಪಾಲಿಸಬೇಕು. ವೃದ್ಧರಿಗೆ ಹಾಗೂ ರೋಗಿಗಳಿಗೆ ಮೊದಲ ಆದ್ಯತೆ ನೀಡಬೇಕಾಗಿ ಸಿಬ್ಬಂದಿಗೆ ಸೂಚಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಸಂಸದ ಡಾ| ಉಮೇಶ ಜಾಧವ ತಮ್ಮ ಮಗಳು ಶ್ರದ್ದಾ ಜಾಧವ ಹಾಗೂ ಪ್ರಯಾಣಿಕರ ಜತೆ ಹೈದ್ರಾಬಾದ್‌ಗೆ ವಿಮಾನದಲ್ಲಿ ಪ್ರಯಾಣ ಮಾಡಿದರು. ಪ್ರಾದೇಶಿಕ ಆಯುಕ್ತ ಡಾ| ಎನ್‌.ವಿ. ಪ್ರಸಾದ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌, ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್‌.ಜ್ಞಾನೇಂದ್ರರಾವ್‌ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.