ಯೋಜನೆಗಳನ್ನು ರೂಪಿಸುವಲ್ಲಿ ಮೈಸೂರು ಜಿಲ್ಲಾ ಒಕ್ಕೂಟ ಮಾದರಿಯಾಗಿದೆ: ಎಸ್.ಟಿ.ಸೋಮಶೇಖರ್


Team Udayavani, Apr 19, 2022, 7:51 PM IST

Untitled-1

ಪಿರಿಯಾಪಟ್ಟಣ : ಮೈಸೂರು ಜಿಲ್ಲಾ ಹಾಲು ಒಕ್ಕೂಟವು ಉತ್ಪಾದಕರಿಗೆ ಉತ್ತಮ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಇತರರಿಗೆ ಮಾದರಿಯಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘಿಸಿದರು.

ಪಟ್ಟಣದ ಜೂನಿಯರ್ ಕಾಲೇಜ್ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ  ಸಂಘಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಉಪ ಕಚೇರಿ ಮತ್ತು ರಾಸು ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಾದ್ಯಂತ 15 ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿದ್ದು, ಮೈಸೂರು ಹಾಲು ಒಕ್ಕೂಟವು ರೈತರಿಗೆ ಸಹಕಾರಿಯಾಗುವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿದ್ದು, ಉತ್ಪಾದಕರಿಗೆ ಆರ್ಥಿಕ ಸದೃಢತೆಗೆ ಹೆಚ್ಚಿನ ಸಾಲ ಸೌಲಭ್ಯ ನೀಡಿ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ವಿಮೆ, ಯಶಸ್ವಿನಿ ಯೋಜನೆ, ಹೈನುಗಾರಿಕೆಗೆ ವಿವಿಧ ಬ್ಯಾಂಕುಗಳ ಸಾಲ ಕೊಡಿಸುವ ಮಹತ್ವದ ಯೋಜನೆಗಳನ್ನು ಜಾರಿಗೋಳಿಸಿದೆ. ರಾಜ್ಯದ ಮುಖ್ಯಮಂತ್ರಿಗಳು 33 ಲಕ್ಷ ರೈತರಿಗೆ 24 ಸಾವಿರ ಕೋಟಿ ಸಾಲ ನೀಡಲು ಕ್ರಮ ಕೈಗೊಂಡಿದ್ದು, ಇದರಲ್ಲಿ 1,480 ಕೋಟಿ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲು ಮುಂದಾಗಿದ್ದಾರೆ ಅಲ್ಲದೆ ರಾಗಿ ಕರಿದಿಸಲು 480 ಕೋಟಿ ಹಣವನ್ನು ಬಿಡುಗಡೆಗೊಳಿಸಲಾಗಿದೆ ಆದ್ದರಿಂದ ರೈತರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ ಹೈನುಗಾರಿಕೆಯಿಂದ ಜೀವನ ಸಾರ್ಥಕಗೊಳಿಸಲು ಸಾಧ್ಯವಾಗಿದ್ದು ಇದರಿಂದ ಅನೇಕ ಕುಟುಂಬಗಳು ಇಂದಿಗೂ ಹೈನುಗಾರಿಕೆಗೆ ಒತ್ತು ನೀಡುತ್ತಿದೆ. ಮತ್ತು ಕೋವಿಡ್ ನಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೂಡ ಮೈಸೂರು ಹಾಲು ಒಕ್ಕೂಟವು ರೈತರ ಹಿತ ಕಾಯುವ ಕಾರ್ಯ ಮಾಡಿದೆ ಎಂದರು.

ಶಾಸಕ ಕೆ.ಮಹದೇವ್ ಮಾತನಾಡಿ ಎಸ್.ಬಿ.ಐ ಬ್ಯಾಂಕಿನಲ್ಲಿ ಹೈನುಗಾರಿಕೆ ಮಾಡಲಿಚ್ಚಿಸುವವರಿಗೆ 5 ಸಾಲಿನಲ್ಲಿ ರಾಸುಗಳಿಗೆ ಸಾಲ ನೀಡಲು ಮನವಿ ಮಾಡಲಾಗಿದೆ. ಈ ಹಿಂದೆ ತಾಲ್ಲೂಕಿನಲ್ಲಿ 40 ಸಾವಿರ ಉತ್ಪಾದನೆಯಾಗುತ್ತಿತ್ತು ಆದರೆ ಪ್ರಸ್ತುತ 1 ಲಕ್ಷಕ್ಕೂ ಅಧಿಕ ಹಾಲು ಉತ್ಪಾದನೆಯಾಗುತ್ತಿದೆ  ಇದನ್ನು 2 ಲಕ್ಷಕ್ಕೆ ತಲುಪಿಸುವ ಗುರಿ ನಮ್ಮದಾಗಿದೆ. ಇದಕ್ಕಾಗಿ 70ರಿಂದ 80 ಹಾಲು ಉತ್ಪಾದಕರ ಸಂಘಗಳು, 42 ಹಾಲು ಉತ್ಪಾದಕ ಕೇಂದ್ರಗಳು ಶ್ರಮಿಸುತ್ತಿದೆ ಮತ್ತು ಮೈಮುಲ್ ನಿಂದ ಯುಎಸ್ಬಿ ಬ್ಯಾಂಕ್ ತೆರೆಯುವ ಯೋಜನೆ ಇದೆ. ತಾಲೂಕಿನಲ್ಲಿಯೂ ಪಶು ಆಹಾರ ಘಟಕವನ್ನು ಸ್ಥಾಪನೆ  ಮಾಡುವುದರ ಜೊತೆಗೆ 250 ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿನಿಲಯ ನಿರ್ಮಿಸುವುದನ್ನು ಗುರಿ ಹೊಂದಿದ್ದೇವೆ. ಈ ಕಾರ್ಯಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಇದನ್ನು ಪ್ರತಿಯೊಬ್ಬರು ಅರ್ಥಯಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಮೈಮುಲ್  ಅಧ್ಯಕ್ಷ ಪಿ.ಎಂ.ಪ್ರಸನ್ನ, ನಿರ್ದೇಶಕರಾದ ಸೋಮಶೇಖರ್, ಮಹೇಶ್, ಹಿರೇಗೌಡ, ಓಂಪ್ರಕಾಶ್, ಕುಮಾರ್, ದ್ರಾಕ್ಷಯಿಣಿ, ಒಂಪ್ರಕಾಶ್, ಉಮಾಶಂಕರ್, ಲೀಲಾ, ಶಿವಾಗಾಮಿ, ರಾಜೇಂದ್ರ, ಪುರಸಭೆ ಅಧ್ಯಕ್ಷೆ ನಾಗರತ್ನ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಬಿ.ಎನ್.ಷಡಕ್ಷರ ಮೂರ್ತಿ, ವಿಜಯ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

 

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.