ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸಭೆ: 2024ರ ಜನವರಿಯಲ್ಲಿ ಪ್ರಾಣಪ್ರತಿಷ್ಠೆ


Team Udayavani, Apr 20, 2022, 5:55 AM IST

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸಭೆ: 2024ರ ಜನವರಿಯಲ್ಲಿ ಪ್ರಾಣಪ್ರತಿಷ್ಠೆ

ಉಡುಪಿ: ಅಯೋಧ್ಯೆಯಲ್ಲಿ ಮಂಗಳವಾರ ನಡೆದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸಭೆಯಲ್ಲಿ 2023ರ ಡಿಸೆಂಬರ್‌ ಒಳಗೆ ಮಂದಿರ ಕಾಮಗಾರಿ ನಡೆಸಿ 2024ರ ಜನವರಿಯಲ್ಲಿ ಪ್ರಾಣಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು ಎಂದು ಸಭೆಯಲ್ಲಿ ಪಾಲ್ಗೊಂಡ ಟ್ರಸ್ಟ್‌ ವಿಶ್ವಸ್ತರಾದ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು.

2023ರ ಡಿಸೆಂಬರ್‌ನಲ್ಲಿ ಪ್ರಾಣಪ್ರತಿಷ್ಠೆ ನಡೆಸುವುದೆಂದು ಹಿಂದೆ ನಿರ್ಧರಿಸಲಾಗಿತ್ತು. ಈಗ ಜನವರಿಯಲ್ಲಿ ಉತ್ತರಾಯಣ ಪರ್ವಕಾಲ ಬರುವುದರಿಂದ ಜನವರಿಯಲ್ಲಿ ಪ್ರತಿಷ್ಠಾ ವಿಧಿವಿಧಾನಗಳನ್ನು ನಡೆಸಲು ಸಭೆಯಲ್ಲಿ ಚರ್ಚೆ ನಡೆಯಿತು. ಇಲ್ಲಿ ಹಿಂದಿನಿಂದಲೂ ರಮಾನಂದ ಸಂಪ್ರದಾಯದಂತೆ ಪೂಜೆಗಳು ನಡೆಯುತ್ತಿದ್ದು ಈ ಸಂಪ್ರದಾಯದ ಮಠಾಧಿಪತಿಗಳ ನೇತೃತ್ವದಲ್ಲಿ ಪ್ರತಿಷ್ಠಾ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು. ಸ್ಥಳೀಯ ಅರ್ಚಕರಿಗೆ ಸೂಕ್ತ ಪ್ರಶಿಕ್ಷಣ ನೀಡಲು ಸಭೆ ನಿರ್ಧರಿಸಿತು ಎಂದರು.

ಕಾಮಗಾರಿ ನಡೆಸುವಾಗ ಸಿಕ್ಕಿರುವ ಅವಶೇಷಗಳನ್ನು ಸಂಗ್ರಹಿಸಿ ವಸ್ತು ಸಂಗ್ರಹಾಲಯ ನಿರ್ಮಿಸಲು ನಿರ್ಧರಿಸಲಾಗಿದೆ. ಇವು ಭಾರತದ ಹಿಂದಿನ ಪ್ರಧಾನಮಂತ್ರಿಗಳ ಜೀವನಚರಿತ್ರೆ ಕುರಿತು ಮಾಡಿದ ವಸ್ತುಸಂಗ್ರಹಾಲಯದ ಮಾದರಿಯಲ್ಲಿ ಮಾಡುವ ಕುರಿತು ಪ್ರಧಾನಿಯವರ ಆಪ್ತ ಸಲಹೆಗಾರರು ವಿವರಿಸಿದರು.

ಯೋಜನಾ ವೆಚ್ಚ ಹೆಚ್ಚಳ
ಈ ಹಿಂದೆ 400 ಕೋ.ರೂ. ವೆಚ್ಚದಲ್ಲಿ ಮಂದಿರ ನಿರ್ಮಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಭೂಸಾಮರ್ಥ್ಯದ ಅಧ್ಯಯನದ ಪ್ರಕಾರ ಅನೇಕ ಬದಲಾವಣೆ ಮಾಡಿರುವುದರಿಂದ ಹೆಚ್ಚುವರಿ ಖರ್ಚು ಮಾಡಲು ಸಭೆ ಅನುಮೋದನೆ ನೀಡಿತು. 70 ಎಕ್ರೆ ಸ್ಥಳದಲ್ಲಿ ಮಂದಿರಕ್ಕೆ ಸಂಬಂಧಿಸಿದ ನಿರ್ಮಾಣಗಳು ಮಾತ್ರ ಇರಲಿವೆ. ಯಾತ್ರೀ ನಿವಾಸಗಳನ್ನು ಇಲ್ಲಿ ನಿರ್ಮಿಸುವುದಿಲ್ಲ ಎಂದು ಸಭೆ ಸ್ಪಷ್ಟಪಡಿಸಿತು.

ಕರಸೇವೆಗೆ ಅವಕಾಶ ಇಲ್ಲ
ಸ್ವಯಂಸೇವಕರು ಕರಸೇವೆ ಮಾಡಲು ಉತ್ಸುಕರಾಗಿದ್ದರೂ ಕ್ರೇನ್‌ ಮೂಲಕ ಕೆಲಸ ನಡೆಯುವುದರಿಂದ ಇದಕ್ಕೆ ಅವಕಾಶ ಇಲ್ಲ ಎಂದು ಸಭೆ ನಿರ್ಧರಿಸಿತು. ಅಖಂಡ ಭಜನೆ ಈಗಾಗಲೇ ಆರಂಭಗೊಂಡಿದ್ದು ಭಕ್ತರು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಯಾವುದೇ ಊರಿನ ಭಕ್ತರು ಇಚ್ಛಿಸಿದರೆ ಅವರು ವಿಹಿಂಪ ಪ್ರಮುಖರಾದ ಚಂಪತ್‌ರಾಯ್‌, ಗೋಪಾಲ್‌ ಅವರನ್ನು ಸಂಪರ್ಕಿಸಬಹುದು ಎಂದು ಶ್ರೀಗಳು ತಿಳಿಸಿದರು.

ದೇವಸ್ಥಾನಕ್ಕೆ ಬಲವಾದ ಬುನಾದಿ ಹಾಕಲಾಗಿದೆ. ಜೂನ್‌ನಲ್ಲಿ 16.5 ಅಡಿ ಎತ್ತರದ ಪ್ಲಿಂತ್‌ ನಿರ್ಮಿಸುವ ಕೆಲಸ ನಡೆಯಲಿದೆ. ಜೂನ್‌ನಲ್ಲಿ ಶಿಲಾಸ್ತಂಭಗಳನ್ನು ನಿಲ್ಲಿಸಲು ಆರಂಭವಾಗುತ್ತದೆ ಎಂದು ಗೋಪಾಲ್‌ ತಿಳಿಸಿದರು.

ಶ್ರೀಗಳು ಮೊದಲು ತಾತ್ಕಾಲಿಕ ಮಂದಿರ ದಲ್ಲಿರುವ ರಾಮಲಲ್ಲಾನ ದರ್ಶನ ಪಡೆದು ಚಾಮರಸೇವೆ, ಮಂಗಳಾರತಿ ಬೆಳಗಿ ದೇಶದ ಕ್ಷೇಮ, ಸುಭಿಕ್ಷೆ, ಶಾಂತಿಗೆ ಪ್ರಾರ್ಥಿಸಿದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.