ಹುಬ್ಬಳ್ಳಿ ಗಲಭೆ ಖಂಡಿಸಿ ಶ್ರೀರಾಮಸೇನೆ ಪ್ರತಿಭಟನೆ
Team Udayavani, Apr 20, 2022, 2:44 PM IST
ಯಡ್ರಾಮಿ: ಹುಬ್ಬಳ್ಳಿಯಲ್ಲಿ ಹಿಂದೂ ದೇವಸ್ಥಾನಗಳು, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಶ್ರೀರಾಮ ಸೇನೆ ಹಾಗೂ ಹಿಂದೂ ಪರ ಸಂಘಟನೆಗಳು ತಾಲೂಕಿನ ನಾಗರಳ್ಳಿ ಕ್ರಾಸ್ನ ಶ್ರೀ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಗ್ರಾಮದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಶ್ರೀ ಬಸವೇಶ್ವರ ವೃತ್ತದವರೆಗೆ ಗಲಭೆಕೋರರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ಜಾಥಾ ನಡೆಸಿದರು.
ಈ ವೇಳೆ ತಾಲೂಕು ಶ್ರೀರಾಮ ಸೇನೆ ಅಧ್ಯಕ್ಷ ಸಿದ್ಧು ಹಂಗರಗಿ ಮಾತನಾಡಿ, ದೇಶದಲ್ಲಾಗಲಿ, ರಾಜ್ಯದಲ್ಲಾಗಲಿ ಡಾ| ಬಾಬಾಸಾಹೇಬ ಅಂಬೇಡ್ಕರ್ ನೀಡಿದ ಸಂವಿಧಾನ ಒಪ್ಪಕೊಳ್ಳದವರಿಂದ ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದವರನ್ನು ಪೊಲೀಸನವರು ಈಗಾಗಲೇ ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೇ ಶ್ರೀರಾಮ ಸೇನೆ ಬರುವ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದಕ್ಕೂ ಮುನ್ನ ಬಿಜೆಪಿ ಮುಖಂಡ ರಮೇಶ ಸಾಹು ಸೂಗೂರ ಮಾತನಾಡಿ, ಹಿಂದೂಗಳು ಹಾಗೂ ಹಿಂದೂ ದೇವಾಲಯಗಳ ಮೇಲೆ ಆಕ್ರಮಣ ಮಾಡುವ ದ್ರೋಹಿಗಳನ್ನು ಕೂಡಲೇ ರಾಜ್ಯ ಸರ್ಕಾರ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.
ಶ್ರೀರಾಮ ಸೇನೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರುದ್ರಗೌಡ ಬಿರಾದಾರ, ರಮೇಶ ಸಾಹು ಸೂಗೂರ, ಪ್ರದೀಪ ಕುಳಗೇರಿ, ವಿರೂಪಾಕ್ಷಿ ಪಾಟೀಲ,ಗುರುಪಾದಗೌಡ ಬಿರಾದಾರ, ಬಸಲಿಂಗ ಸಾಹು ಕುಳಗೇರಿ, ಸುರೇಶ ಸಾಹು ನಾಗರಾಳ, ಸೀತಾರಾಮ ಚೌಹ್ವಾಣ, ಶರಣಕುಮಾರ ಕುಳೆಕುಮಟಗಿ, ಪ್ರಮೋದ ಸಾಹು, ಈರಣ್ಣ ಹೆಳವರ, ವೀರೇಶ ಹಿರೇಮಠ, ಕಾಶಿ ಕುಳಗೇರಿ, ಸಂತೋಷ ಹೊನ್ನಳ್ಳಿ, ಗ್ರಾಮ ಲೆಕ್ಕಿಗ ಮಹಿಬೂಬ ಟೇಲರ್, ಜಗನ್ನಾಥ ಹಾಗೂ ಬಿಜೆಪಿ, ಹಿಂದೂಪರ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ