ರಜನಿಕಾಂತ್ ರನ್ನು ಬಾಲಿವುಡ್ ಗೆ ಪರಿಚಯಿಸಿದ್ದ ಟಿ.ರಾಮ ರಾವ್ ಇನ್ನಿಲ್ಲ
70 ಚಿತ್ರಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ
Team Udayavani, Apr 20, 2022, 3:03 PM IST
ಚೆನ್ನೈ: ಪ್ರಖ್ಯಾತ ಸಿನಿಮಾ ನಿರ್ಮಾಪಕ-ನಿರ್ದೇಶಕ ತಾತಿನೇನಿ ರಾಮರಾವ್ ಬುಧವಾರ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
ಅಮಿತಾಭ್ ಬಚ್ಚನ್ ಮತ್ತು ರಜನಿಕಾಂತ್ ಸೇರಿದಂತೆ ಭಾರತೀಯ ಚಿತ್ರರಂಗದ ಟಾಪ್ ಸ್ಟಾರ್ಗಳೊಂದಿಗೆ ಕೆಲಸ ಮಾಡಿದ್ದ 84 ವರ್ಷದ ಹಿರಿಯ ನಿರ್ದೇಶಕ ಸ್ವರ್ಗಸ್ಥರಾಗಿದ್ದಾರೆ . ಅವರು ವಯೋ ಸಹಜ ಸಮಸ್ಯೆಗಳಿಂದ ನಿಧನ ಹೊಂದಿದ್ದಾರೆ. ರಾವ್ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ರಾವ್ ಅವರು 1966 ಮತ್ತು 2000 ರ ನಡುವೆ 70 ಹಿಂದಿ ಮತ್ತು ತೆಲುಗು ಚಲನಚಿತ್ರಗಳನ್ನು ನಿರ್ದೇಶಿಸಿ ದಿಗ್ಗಜ ನಟರೊಂದಿಗೆ ಕೆಲಸ ಮಾಡಿದ್ದರು.
1983 ರಲ್ಲಿ ‘ಅಂಧಾ ಕಾನೂನ್’ ಎಂಬ ಚಿತ್ರದ ಮೂಲಕ ತಮಿಳು ಸೂಪರ್ ಸ್ಟಾರ್ ರಜನಿ ಕಾಂತ್ ಅವರನ್ನು ಬಾಲಿವುಡ್ ಪ್ರವೇಶ ಮಾಡಿಸಿದ್ದರು.
ರಾವ್ ಅವರ ನಿಧನದ ವಾರ್ತೆಯನ್ನು ಹಂಚಿಕೊಂಡಿರುವ ನಟ ಅನುಪಮ್ ಖೇರ್, ಸಂತಾಪ ವ್ಯಕ್ತಪಡಿಸಿದ್ದಾರೆ. “ಹಿರಿಯ ಚಲನಚಿತ್ರ ನಿರ್ಮಾಪಕ ಮತ್ತು ಆತ್ಮೀಯ ಸ್ನೇಹಿತ ಶ್ರೀ ಟಿ ರಾಮರಾವ್ ಜಿ ಅವರ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಯಿತು. ಅವರೊಂದಿಗೆ ‘ಆಖ್ರಿರಾಸ್ತಾ’ ಮತ್ತು ‘ಸಂಸಾರ್’ ನಲ್ಲಿ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿತು!! ಅವರು ಸಹಾನುಭೂತಿ, ಕಮಾಂಡಿಂಗ್ ಮತ್ತು ಉತ್ತಮ ಹಾಸ್ಯಪ್ರಜ್ಞೆಯನ್ನು ಹೊಂದಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು! ಓಂ ಶಾಂತಿ!,” ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
MUST WATCH
ಹೊಸ ಸೇರ್ಪಡೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು