ಅಭೂತಪೂರ್ವ ಯಶಸ್ಸು ಕಂಡ ಆರೋಗ್ಯ ಮೇಳ

ಆರೋಗ್ಯ ಭಾಗ್ಯದ ಮುಂದೆ ಯಾವ ಭಾಗ್ಯವೂ ಇಲ್ಲ: ಶಾಸಕ ರಾಮಣ್ಣ ಲಮಾಣಿ 

Team Udayavani, Apr 20, 2022, 3:59 PM IST

16

ಲಕ್ಷ್ಮೇಶ್ವರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿತು. ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ತಂಡೋಪ ತಂಡವಾಗಿ ಆಗಮಿಸಿದ ಸಾರ್ವಜನಿಕರು ಆರೋಗ್ಯ ಮೇಳದ ಸದುಪಯೋಗ ಪಡೆದುಕೊಂಡರು. ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕು ಮಟ್ಟದ ಆರೋಗ್ಯ ಮೇಳವನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.

ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದ ಶಾಸಕ ರಾಮಣ್ಣ ಲಮಾಣಿ ಅವರು, ಆರೋಗ್ಯ ಭಾಗ್ಯದ ಮುಂದೆ ಯಾವ ಭಾಗ್ಯವೂ ಇಲ್ಲ. ಆರೋಗ್ಯಪೂರ್ಣ ಸ್ವಸ್ಥ ಸಮಾಜ ನಿರ್ಮಾಣದ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗೆ ಉಚಿತ ಆರೋಗ್ಯ ಸೇವೆ ನೀಡಲು ಮುಂದಾಗಿವೆ. ಆರೋಗ್ಯ ಸಮಸ್ಯೆಗಳನ್ನು ಮೂಲದಲ್ಲಿಯೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡುವುದು ಮೇಳದ ಉದ್ದೇಶ. ಜನರು ಇಂತಹ ಯೋಜನೆಯ ಪ್ರಯೋಜನ ಪಡೆದುಕೊಂಡು ಆರೋಗ್ಯಕರ-ಕುಟುಂಬ ಮತ್ತು ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದರು.

ಜಿಲ್ಲಾ ವೈದ್ಯಾಧಿಕಾರಿ ಡಾ|ಜಗದೀಶ ನುಚ್ಚಿನ ಮಾತನಾಡಿ, ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗೆ ಸ್ಟಂಟ್‌ ಅಳವಡಿಸಲು ಹಾಗೂ ಮೊಣಕಾಲು ಚಿಪ್ಪು ಅಳವಡಿಸಲು ಆಗುತ್ತಿದ್ದ ವೆಚ್ಚವನ್ನು ಗಣನೀಯವಾಗಿ ಕಡಿಮೆಗೊಳಿಸುವ ಮೂಲಕ ಕೇಂದ್ರ ಸರಕಾರ ಬಡವರಿಗೆ ಸೌಲಭ್ಯ ದೊರೆಯುವಂತೆ ಮಾಡಿದೆ. ಅದೇ ರೀತಿ, ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆ ಅಡಿ ಪ್ರತಿ ವರ್ಷ ಒಬ್ಬ ವ್ಯಕ್ತಿಗೆ 5 ಲಕ್ಷದವರೆಗೆ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಿವೆ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಪ್ರತಿಯೊಬ್ಬರೂ ತಮ್ಮ ಜೀವನ ಶೈಲಿ, ಆಹಾರ ಪದ್ಧತಿ ಬದಲಾಯಿಸಿಕೊಳ್ಳಬೇಕೆಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಅಶ್ವಿ‌ನಿ ಅಂಕಲಕೋಟಿ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ-ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಯುಷ್‌ ಇಲಾಖೆ, ಆರೋಗ್ಯ ಕಾರ್ಡ್‌ ಸಂಬಂಧಿತ ಮಾಹಿತಿ ನೀಡುವ ಮಳಿಗೆಗಳನ್ನು ತೆರೆಯಲಾಗಿತ್ತು. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಪಾರ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು, ಚಿಕಿತ್ಸೆ, ಸಲಹೆ ಪಡೆದರು.

ಮೇಳದಲ್ಲಿ ಒಟ್ಟು 957 ಜನರು ಆರೋಗ್ಯ ಮೇಳದ ಸದುಪಯೋಗಪಡೆದುಕೊಂದಿದ್ದಾರೆ. ಒಟ್ಟು 810 ಜನರಿಗೆ ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ ಸ್ಥಳದಲ್ಲಿಯೇ ವಿತರಿಸಲಾಗಿದೆ. 405 ಕ್ಕೂ ಹೆಚ್ಚು ಎನ್‌ಸಿಡಿ, ಗುಣಪಡಿಸಲಾಗದ ರೋಗಿಗಳಿಗೆ ಸೂಕ್ತ ಸಲಹೆ-ಸೂಚನೆ ನೀಡಿ, ತಪಾಸಣೆ ಮಾಡಿ ಔಷಧೋಪಚಾರ ನೀಡಲಾಗಿದೆ.

ಡಾ|ಪರ್ವತಗೌಡ ಹಿರೇಗೌಡ್ರ ಅವರು ನೀಡಿದ ಅಕ್ಯೂಪಂಕ್ಚರ್‌ ಚಿಕಿತ್ಸೆಗೆ ಜನರು ಮುಗಿಬಿದ್ದ ದೃಶ್ಯ ಕಂಡುಬಂದಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಪರಶು ರಾಮ ಸತ್ತಿಗೇರಿ, ತಾಲೂಕು ವೈದ್ಯಾಧಿಕಾರಿ ಡಾ|ಸುಭಾಸಚಂದ್ರ ದಾಯಗೊಂಡ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಕಾಂತ ಕಾಟೇವಾಲೆ, ತಾಲೂಕು ನೋಡೆಲ್‌ ಅಧಿಕಾರಿ ಡಾ.ಆರುಂದತಿ ಕುಲಕರ್ಣಿ, ವಿವಿಧ ರೋಗಗಳ ತಜ್ಞ ವೈದ್ಯರಾದ ಡಾ.ವಿಜಯದತ್ತ ಎಂ., ಡಾ.ದೇವೆಂದ್ರಪ್ಪ ಕೆ., ಡಾ.ಬಿಜಾಪೂರ, ಡಾ.ವೆಂಕಟೇಶ ರಾಥೋಡ, ಡಾ.ತಾರಾಚಂದ, ಡಾ.ಸುನೀತಾ ಪಾಟೀಲ, ಡಾ.ನಿಖೀತಾ ಕೊಣ್ಣೂರ, ಡಾ.ಗೋಪಾಲರಾಜ, ಡಾ.ಪಿ.ಜಿ.ಸಜ್ಜನರ, ಡಾ.ಗುರುರಾಜ, ಡಾ.ಪುಷ್ಪಾ ಹಿರೇಮಠ ಅವರು ರೋಗಿಗಳ ತಪಾಸಣೆ ಮಾಡಿ ಸಲಹೆ ನೀಡಿದರು.

ಚಂಬಣ್ಣ ಬಾಳಿಕಾಯಿ, ಪುರಸಭೆ ಸದಸ್ಯರು, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ವಿಜಯ ಕುಂಬಾರ, ಪ್ರವೀಣ ಬೋಮಲೆ, ರಾಮಣ್ಣ ರಿತ್ತಿ, ಅನಿಲ ಮುಳಗುಂದ ಇತರರು ಹಾಜರಿದ್ದರು. ಬಿ.ಎಸ್‌.ಹಿರೇಮಠ, ಕೃಷ್ಣಕುಮಾರ ಕುಲಕರ್ಣಿ, ಶಿವಯ್ಯ ಕುಲಕರ್ಣಿ ನಿರ್ವಹಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.