ಟೆಂಡರ್‌ ಪರಿಶೀಲನ ಆಯೋಗಕ್ಕೆ ಮುಕ್ತ ಸ್ವಾತಂತ್ರ್ಯ ನೀಡಿ


Team Udayavani, Apr 21, 2022, 6:00 AM IST

ಟೆಂಡರ್‌ ಪರಿಶೀಲನ ಆಯೋಗಕ್ಕೆ ಮುಕ್ತ ಸ್ವಾತಂತ್ರ್ಯ ನೀಡಿ

ರಾಜ್ಯದಲ್ಲಿ ಸರಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗುವ 50 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳ ಟೆಂಡರ್‌ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲು ಆಯೋಗವೊಂದನ್ನು ರಚಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಸಾರ್ವಜನಿಕ ಯೋಜನೆಗಳ ಟೆಂಡರ್‌ ಪ್ರಕ್ರಿಯೆ, ಅನುದಾನ ಬಿಡುಗಡೆ, ಕಾಮಗಾರಿಗಳ ನಿರ್ವಹಣೆ ಮತ್ತಿತರ ವಿಚಾರಗಳಲ್ಲಿ ಕಮಿಷನ್‌ ಸಹಿತ ಭಾರೀ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿತ್ತು. ಅಷ್ಟು ಮಾತ್ರವಲ್ಲದೆ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ಮೇಲೆ ಬೆಟ್ಟು ಮಾಡಿ, ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಪ್ರಕರಣ ಸರಕಾರವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈಶ್ವರಪ್ಪ ಅವರ ಸಚಿವ ಸ್ಥಾನವನ್ನೇ ಈ ಪ್ರಕರಣ ಕಿತ್ತುಕೊಂಡಿತ್ತು.

ಭ್ರಷ್ಟಾಚಾರಮುಕ್ತ ಆಡಳಿತದ ಭರವಸೆ ನೀಡಿ ಅಧಿಕಾರಕ್ಕೇರಿರುವ ಬಿಜೆಪಿಗೆ ಶೇ. 40 ಕಮಿಷನ್‌ ಪ್ರಕರಣ ಭಾರೀ ಇರಿಸುಮುರಿಸು ಉಂಟುಮಾಡಿದೆ. ಈ ಹಿಂದಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದ ವಿರುದ್ಧ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕಮಿಷನ್‌ ಸರಕಾರ ಎಂದು ಆರೋಪ ಹೊರಿಸಿದ್ದರಲ್ಲದೆ ಭ್ರಷ್ಟಾಚಾರಮುಕ್ತ ಸರಕಾರ ನೀಡಲು ಬಿಜೆಪಿ ಬದ್ಧ ಎಂದು ಪ್ರತಿಪಾದಿಸಿದ್ದರು. ಆದರೆ ಇದೀಗ ಬಿಜೆಪಿ ಸರಕಾರ‌ದ ವಿರುದ್ಧವೇ ಕಮಿಷನ್‌ ಆರೋಪ ಕೇಳಿಬಂದಿದ್ದು, ವಿಪಕ್ಷ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲಿಗೆ ಬಿಜೆಪಿ ಮೇಲೆ ಮುಗಿ ಬೀಳಲು ಬಲುದೊಡ್ಡ ಅಸ್ತ್ರ ಲಭಿಸಿದಂತಾಗಿದೆ. ಈ ಎಲ್ಲ ಆರೋಪ ಮತ್ತು ಕಳಂಕದಿಂದ ಪಾರಾಗಲು ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಕಾಮಗಾರಿಗಳ ಟೆಂಡರ್‌ ಪ್ರಸ್ತಾವನೆಗಳ ಪರಿಶೀಲನೆಗಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತ್ರಿಸದಸ್ಯ ಆಯೋಗ ರಚಿಸುವ ನಿರ್ಧಾರ ಪ್ರಕಟಿಸಿದ್ದಾರೆ.

ಆರ್ಥಿಕ ತಜ್ಞರು ಮತ್ತು ತಾಂತ್ರಿಕ ಪರಿಣತರು ಆಯೋಗದ ಇತರ ಈರ್ವರು ಸದಸ್ಯರಾಗಿರಲಿದ್ದಾರೆ. 50 ಕೋಟಿ ರೂ. ಮತ್ತು ಮೇಲ್ಪಟ್ಟ ಮೊತ್ತದ ಎಲ್ಲ ಸಾರ್ವಜನಿಕ ಕಾಮಗಾರಿಗಳ ಟೆಂಡರ್‌ ಪ್ರಸ್ತಾವನೆಗಳ ಅಂದಾಜು ವೆಚ್ಚ, ಟೆಂಡರ್‌ ಷರತ್ತುಗಳು ಕಾನೂನು ನಿಯಮಾವಳಿಗ ಳಿಗನುಸಾರವಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಆಯೋಗ ಪ್ರಸ್ತಾವನೆಗೆ ಅನುಮೋದನೆ ನೀಡಲಿವೆ. ಇದು ಸಾರ್ವಜನಿಕ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸಹಾಯಕವಾಗಲಿದೆ. ಆಯೋಗವು ಯಾವುದೇ ಟೆಂಡರ್‌ ಪ್ರಸ್ತಾವನೆಗೆ 15 ದಿನಗಳ ಒಳಗಾಗಿ ಅನುಮೋದನೆ ನೀಡಲಿದೆ. ಟೆಂಡರ್‌ ಪ್ರಸ್ತಾ ವನೆಗಳು ಅಧಿಕವಾಗಿದ್ದಲ್ಲಿ ಸಮಾನಾಂತರ ಆಯೋಗ ರಚಿಸಿ ಕಾಮ ಗಾರಿಯ ಅನುಷ್ಠಾನಕ್ಕೆ ಯಾವುದೇ ಅಡಚಣೆಯಾಗದಿರುವಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಜಿಲ್ಲಾಪಂಚಾಯತ್‌ ಮಟ್ಟದಲ್ಲಿ ಕೆಲವೊಂದು ಕಾಮಗಾರಿ ಗಳನ್ನು ಮೌಖೀಕ ಆದೇಶದ ಮೇರೆಗೆ ಅನುಷ್ಠಾನಗೊಳಿಸಲಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ, ಯಾವುದೇ ಸಾರ್ವಜನಿಕ ಕಾಮಗಾರಿಯನ್ನು ಲಿಖೀತ ಆದೇಶವಿಲ್ಲದೆ ನಡೆಸುವಂತಿಲ್ಲ ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಹೊಸದಾಗಿ ರಚನೆಯಾಗಲಿರುವ ಆಯೋಗದ ಕಾರ್ಯನಿರ್ವಹಣೆಯಲ್ಲಿ ಸರಕಾರ ಮತ್ತು ಜನಪ್ರತಿನಿಧಿಗಳು ಹಸ್ತಕ್ಷೇಪ ನಡೆಸಿದಲ್ಲಿ ಆಯೋಗದ ಉದ್ದೇಶ ನಿಷ#ಲಗೊಳ್ಳುವುದು ನಿಶ್ಚಿತ. ಹೀಗಾಗದಂತೆ ಸರಕಾರ ಎಚ್ಚರ ವಹಿಸಬೇಕು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.