ಹುಬ್ಬಳ್ಳಿಯಲ್ಲಿ ಪೊಲೀಸರ ಹತ್ಯೆಗೆ ನಡೆದಿತ್ತು ಸಂಚು!

ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೇದೆಗಳ ಹತ್ಯೆಗೆ ಮುಂದಾಗಿದ್ದ ಕಿಡಿಗೇಡಿಗಳು

Team Udayavani, Apr 21, 2022, 12:45 PM IST

12

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ವೇಳೆ ಕಿಡಿಗೇಡಿಗಳು ಪೊಲೀಸರನ್ನೇ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಲ್ಲದೆ, ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಸತ್ಯ ಹೊರ ಬಿದ್ದಿದೆ.

ಅಂದು ಗಲಭೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ತವ್ಯಕ್ಕೆಂದು ತೆರಳುತ್ತಿದ್ದ ಇಬ್ಬರು ಕಾನ್ಸ್ಟೇಬಲ್ ಗ‌ಳಿಗೆ ನೂರಾರು ಜನರಿದ್ದ ಕಿಡಿಗೇಡಿಗಳ ಗುಂಪು ಅಡ್ಡಗಟ್ಟಿ ನಿಲ್ಲಿಸಿದ್ದಲ್ಲದೆ, ಅವರ ಕೊಲೆಗೆ ಯತ್ನಿಸಿದ್ದಾರೆ. ಆಗ ಸ್ವಲ್ಪದರಲ್ಲಿಯೇ ಇವರಿಬ್ಬರು ಬಚಾವ್‌ ಆಗಿ ತಮ್ಮ ಜೀವ ರಕ್ಷಿಸಿಕೊಂಡಿದ್ದಾರೆ.

ಕಸಬಾಪೇಟೆ ಠಾಣೆ ಕಾನ್ಸ್ಟೇಬಲ್ ಗ‌ಳಾದ ಮಂಜುನಾಥ ರಾಯ ರಡ್ಡಿ ಮತ್ತು ಅನಿಲ ಕಾಂಡೇಕರ ಗಲಭೆಕೋರರಿಂದ ಬಚಾವ್‌ ಆಗಿದ್ದಾರೆ. ಇವರು ಅಂದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ತವ್ಯಕ್ಕೆಂದು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಿಡಿಗೇಡಿಗಳ ಗುಂಪು ದಿಡ್ಡಿ ಹನುಮಂತ ದೇವಸ್ಥಾನ ಬಳಿ ತಡೆದು ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ವಿವಾದಾತ್ಮಕ ಪೋಸ್ಟ್‌ ಮಾಡಿದವನನ್ನು ಬಂಧಿಸದಿದ್ದರೆ ನಿಮಗೆ ಹಾಗೂ ಪೊಲೀಸರನ್ನೆಲ್ಲ ಕೊಲೆ ಮಾಡುತ್ತೇವೆಂದು ಜೀವ ಬೆದರಿಕೆ ಹಾಕಿದ್ದಾರೆ.

ಮುಂದೆ ಸಾಗುವಾಗ ಇವರನ್ನು ಬಿಡಬ್ಯಾಡರಿ, ಕೊಂದ ಬಿಡ್ರಿ ಎಂದು ಪ್ರಚೋದನೆ ನೀಡಿದಾಗ 5-6 ಜನರಿದ್ದ ಗುಂಪು ದೊಡ್ಡ ಅಳತೆಯ ಕಲ್ಲನ್ನು ಇವರ ಮೇಲೆ ಎಸೆದು ಹತ್ಯೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಬೈಕ್‌ ಅಲ್ಲಿಯೇ ಬಿಟ್ಟು, ಜೀವ ಉಳಿಸಿಕೊಂಡಿದ್ದಾರೆ.

ನಂತರ ಗಲಭೆಕೋರರು ಪೊಲೀಸರ ಬೈಕ್‌ಗೆ ಹಾನಿ ಪಡಿಸಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿ, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಟೇಟಸ್ ಹಾಕಿದ್ದ ಯುವಕನಿಗೆ ಪರೀಕ್ಷೆ ಬರೆಯಲು ಅವಕಾಶ: ವಾಟ್ಸ್‌ಆ್ಯಪ್‌ನಲ್ಲಿ ವಿವಾದಾತ್ಮಕ ಸ್ಟೇಟಸ್‌ ಹಾಕಿ ಬಂಧಿತನಾಗಿರುವ ಇಲ್ಲಿನ ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪೊಲೀಸ್‌ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಭಿಷೇಕ ವಿವಾದಾತ್ಮಕ ಸ್ಟೇಟಸ್‌ ಹಾಕಿದ ಆರೋಪದಡಿ ಏ.16ರಂದು ಬಂಧಿತನಾಗಿದ್ದ. ಈತನಿಗೆ ಏ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇದೆ. ಕಾರಣ ಅದಕ್ಕೆ ಅನುವು ಮಾಡಿಕೊಡಿ. ಇಲ್ಲವೇ ಕೂಡಲೇ ಜಾಮೀನು ನೀಡಿ ಎಂದು ವಕೀಲ ಸಂಜೀವ ಬಡಸ್ಕರ ಅವರು 4ನೇ ಅಪರ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಕಾರಾಗೃಹ ಅಧಿಕಾರಿಗಳು ಆತನಿಗೆ ಪ್ರತ್ಯೇಕ ಸೆಲ್‌ನಲ್ಲಿಟ್ಟು ಅಭ್ಯಾಸ ಮಾಡಲು ಪುಸ್ತಕ, ಮತ್ತಿತರೆ ವ್ಯವಸ್ಥೆ ಮಾಡಬೇಕು. ಪೊಲೀಸರು ಬಂದೋಬಸ್ತ್ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಬೇಕು ಹಾಗೂ ಆತನನ್ನು ಎಲ್ಲ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆಗೆ ಹಾಜರುಪಡಿಸದೆ ಪ್ರತ್ಯೇಕ ಪರೀಕ್ಷಾ ಕೊಠಡಿ ಸೌಲಭ್ಯ ಕಲ್ಪಿಸಿ ಬಂದೋಬಸ್ತ್ ನಲ್ಲಿಯೇ ಪರೀಕ್ಷೆ ಬರೆಯಿಸಬೇಕು ಎಂದು ಪೊಲೀಸರಿಗೆ ಸೂಚಿಸಿದೆ.

ಮೌಲ್ವಿ ಅಲ್ಲ ಲಾರಿ ಚಾಲಕ: ಗಲಭೆಗೆ ಪ್ರಚೋದನೆ ನೀಡಿದ ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್‌ ನಗರ ನಿವಾಸಿ ಮೌಲ್ವಿ ಅಲ್ಲ, ಲಾರಿ ಚಾಲಕನಾಗಿದ್ದಾನೆ. ಈ ಹಿಂದೆ ಲಾರಿ ಚಾಲಕನಾಗಿದ್ದ ಈತ ಇತ್ತೀಚೆಗೆ ಮೌಲ್ವಿ ತರಹ ಬಟ್ಟೆ ಹಾಕಿಕೊಂಡು ಓಡಾಡುತಿದ್ದ. ಅಲ್ಲದೇ ತನ್ನದೇ ಆದ ಬೆಂಬಲಿಗರ ಗುಂಪು ಕಟ್ಟಿಕೊಂಡಿದ್ದ ಎಂದು ತಿಳಿದು ಬಂದಿದೆ.

ಹೈದರಾಬಾದ್‌ಗೆ ತೆರಳಿದ ತಂಡ: ಶನಿವಾರ ರಾತ್ರಿ ಗಲಭೆಗೆ ಪ್ರಚೋದನೆ ನೀಡಿದ ಮಂಟೂರ ರಸ್ತೆ ಮಿಲ್ಲತ್‌ ನಗರದ ಮೌಲ್ವಿ ತಲೆಮರೆಸಿಕೊಂಡು ಹೈದರಾಬಾದ್‌ನಲ್ಲಿ ಇದ್ದಾನೆಂಬ ಮಾಹಿತಿ ಮೇರೆಗೆ ತನಿಖಾ ತಂಡದ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯೊಂದಿಗೆ ಆತನ ಪತ್ತೆಗಾಗಿ ಹೈದರಾಬಾದ್‌ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಮತ್ತೆ 12 ಮಂದಿ ವಶಕ್ಕೆ: ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ 12 ಜನ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆಗೆ ಸಂಬಂ ಧಿಸಿ ಪೊಲೀಸರು ಇದುವರೆಗೆ ಒಟ್ಟು 115 ಜನರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅವರಲ್ಲಿ 103 ಜನರನ್ನು ಕಲಬುರಗಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ. ಇನ್ನುಳಿದವರನ್ನು ಧಾರವಾಡದ ಕೇಂದ್ರ ಕಾರಾಗೃಹದಲ್ಲಿರಿಸಿದ್ದಾರೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.