ಚುನಾವಣೆ ನೆಪ: ನೀರಾವರಿ ಯೋಜನೆಗಳ ಜಪ!

ಹೆಚ್ಚುತ್ತಿದೆ ರಾಜಕೀಯ ಪಕ್ಷಗಳ ಉತ್ತರದ ಮಮಕಾರ

Team Udayavani, Apr 21, 2022, 2:09 PM IST

13

ಹುಬ್ಬಳ್ಳಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ನೀರಾವರಿ ಯೋಜನೆಗಳಿಗೆ ಎಲ್ಲಿಲ್ಲದ ಮಹತ್ವ ಬಂದಿದ್ದು, ಉತ್ತರ ಕರ್ನಾಟಕದ ಮೇಲಿನ ಮಮಕಾರ ಉಕ್ಕಿ ಹರಿಯುತ್ತದೆ.

ಇದು ಹಲವು ವರ್ಷಗಳ ಕಥೆ-ವ್ಯಥೆ. ಇದೀಗ ಮತ್ತದೇ ಮಹತ್ವ ಮರುಕಳಿಸಿದೆ. ನೀರಾವರಿಗಾಗಿ ರ್ಯಾಲಿ, ಜಾಥಾಗಳು ಜೋರಾಗುತ್ತಿದೆ. ಮತ್ತೂಮ್ಮೆ ನಮ್ಮನ್ನು ಭ್ರಮನಿರಸಗೊಳಿಸಬೇಡಿ ಎಂಬುದು ಈ ಭಾಗದ ಜನರ ಅನಿಸಿಕೆ. ಪಕ್ಷ-ಪಕ್ಷಾತೀತ ಹೆಸರಲ್ಲಿ ನೀರಾವರಿ ಯೋಜನೆಗೆ ಅನುಷ್ಠಾನಕ್ಕೆ ರ್ಯಾಲಿ, ಜಾಥಾಗಳು ವಿಜೃಂಭಿಸುತ್ತಿವೆ, ರೈತರಿಗೆ ನೀರು ತಂದು ಕೊಡುವುದೇ ನಮ್ಮ ಧ್ಯೇಯ ಎಂಬ ಹೇಳಿಕೆ, ಭಾಷಣಗಳು ಮಾರ್ದನಿಸುತ್ತಿವೆ. ಕಳೆದ ಮೂರ್‍ನಾಲ್ಕು ದಶಕಗಳಿಂದ ಉತ್ತರದ ಜನತೆಗೆ ಮಾಯದ ಜಿಂಕೆಯಾಗಿದೆಯೇ ವಿನಃ ಅನುಷ್ಠಾನದ ಕೆಲಸವಾಗಿಲ್ಲ ಎಂಬುದು ವಾಸ್ತವ. ನೀರಾವರಿ ಯೋಜನೆಗಳ ಜತೆಗೆ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಚಾರದಲ್ಲಿ ಆಗಿರುವ ಅನ್ಯಾಯ, ಪ್ರಾದೇಶಿಕ ಅಸಮತೋಲನ ವಿಚಾರಗಳು ಗರಿಗೆದರತೊಡಗಿವೆ.

ಹೋರಾಟದಲ್ಲಿ ಪೈಪೋಟಿ: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ನೀರಾವರಿ ಯೋಜನೆಗಳು, ಉತ್ತರ ಕರ್ನಾಟಕದ ಅಭಿವೃದ್ಧಿ ಪೈಪೋಟಿ ರೂಪದಲ್ಲಿ ಹೋರಾಟಕ್ಕಿಳಿಯಲು, ರ್ಯಾಲಿ-ಜಾಥಾ ಕೈಗೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ. ಮಹದಾಯಿ, ಕಳಸಾ-ಬಂಡೂರಿ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ತುಂಗಭದ್ರ ಸಮಾನಾಂತರ ಜಲಾಶಯ, ಬೆಣ್ಣೆಹಳ್ಳ-ಡೋಣಿ ನದಿ, ತುಪ್ಪರಿಹಳ್ಳ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ವಿಚಾರ ಸದ್ದು ಮಾಡತೊಡಗಿದೆ. ಅಧಿಕಾರ ಅನುಭವಿಸಿ ಕೆಳಗಿಳಿದವರು, ಅಧಿಕಾರದಲ್ಲಿದ್ದವರು ಯೋಜನೆಗಳ ಬಗ್ಗೆ ಎಲ್ಲಿಲ್ಲದ ಮೋಹ ತೋರತೊಡಗಿದ್ದಾರೆ. ರಾಜ್ಯದ ಪಾಲಿನ ನೀರಿಗಾಗಿ ನಾವು ಎಂದು ಬಿಂಬಿಸತೊಡಗಿದ್ದಾರೆ. ಯೋಜನೆಗಳ ವಿಳಂಬ ವಿಚಾರದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ಬಿರುಸು ಪಡೆಯುತ್ತಿದ್ದು, ಇದು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಮಹದಾಯಿ, ಕಳಸಾ-ಬಂಡೂರಿ, ಯುಕೆಪಿ-3ನೇ ಹಂತ ಹಾಗೂ ತಂಗಭದ್ರಾ ಜಲಾಶಯಕ್ಕೆ ಪರ್ಯಾಯವಾಗಿ ಸಮಾನಾಂತರ ಜಲಾಶಯ ವಿಷಯವಾಗಿ ಮಾಜಿ ಸಚಿವ ಎಸ್‌.ಆರ್‌.ಪಾಟೀಲ ನೇತೃತ್ವದಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯಡಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗಿದೆ. ಮಹದಾಯಿ ನದಿ ನೀರು ಹಂಚಿಕೆ ನ್ಯಾಯಾಧಿಕರಣ ನೀರು ಹಂಚಿಕೆ ಮಾಡಿ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಯಾಗಿದೆ. ನಮ್ಮ ಪಾಲಿನ 13.5 ಟಿಎಂಸಿ ಅಡಿ ನೀರಿನಲ್ಲಿ ಸುಮಾರು 8 ಟಿಎಂಸಿ ಅಡಿ ವಿದ್ಯುತ್‌ ಉತ್ಪಾದನೆಗೆ ಹೋದರೆ ಉಳಿದ ನೀರನ್ನಾದರೂ ನಮ್ಮ ಬಳಕೆಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯಾವುದೇ ಕಾಮಗಾರಿ ಆರಂಭಗೊಂಡಿಲ್ಲ.

ಯುಕೆಪಿ-3ನೇ ಹಂತದಡಿ ಕಾಮಗಾರಿ ಕೈಗೊಂಡರೆ ನ್ಯಾ| ಬ್ರಿಜೇಶಕುಮಾರ ನೇತೃತ್ವದ ನ್ಯಾಯಾಧಿಕರಣ ತೀರ್ಪಿನಂತೆ ಸುಮಾರು 130 ಟಿಎಂಸಿ ಅಡಿ ನೀರು ದೊರೆಯಲಿದ್ದು, ಸುಮಾರು 15 ಲಕ್ಷ ಎಕರೆಗೆ ನೀರಾವರಿ ಭಾಗ್ಯ ದೊರೆಯಲಿದೆ. ಆಲಮಟ್ಟಿ ಜಲಾಶಯ ಎತ್ತರ 524.256 ಮೀಟರ್‌ಗೆ ಹೆಚ್ಚಿಸಲು ಕೇಂದ್ರದಿಂದ ಅಧಿಸೂಚನೆ ಹೊರಬಿದ್ದಿಲ್ಲವಾಗಿದ್ದು, ಯೋಜನೆಯಿಂದ ಮುಳುಗಡೆಯಾಗುವ ಸಂತ್ರಸ್ತರಿಗೆ ಯಾವುದೇ ಪರಿಹಾರದ ಸ್ಪಷ್ಟ ಕ್ರಮ ಆಗುತ್ತಿಲ್ಲ. ಯೋಜನಾ ವೆಚ್ಚ ಲಕ್ಷ ಕೋಟಿ ರೂ.ಗೆ ತಲುಪುತ್ತಿದೆ. ತುಂಗಭದ್ರಾ ಜಲಾಶಯದಲ್ಲಿ ಸುಮಾರು 33 ಟಿಎಂಸಿ ಅಡಿಯಷ್ಟು ಹೂಳು ತುಂಬಿದ್ದು, ಸುಮಾರು 32 ಟಿಎಂಸಿ ಅಡಿ ನೀರು ಸಂಗ್ರಹಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸ್ಪಷ್ಟ ಕ್ರಮ ಇಲ್ಲವಾಗುತ್ತಿದೆ. ಹೀಗೆ ನೀರಾವರಿ ಯೋಜನೆಗಳ ಬಗ್ಗೆ ಕಾಳಜಿಯ ಮಹಾಪೂರವೇ ಹರಿದು ಬರತೊಡಗಿದೆ. ಮತ್ತೂಂದೆಡೆ ಉತ್ತರದ ಮಟ್ಟಿಗೆ ಖಾಲಿ ಮನೆಯಂತಾಗಿರುವ ಜೆಡಿಎಸ್‌ ರಾಜ್ಯದ ಒಟ್ಟಾರೆ ನೀರಾವರಿ ಯೋಜನೆಗಳ ವಿಚಾರದಲ್ಲಿ ಜನತಾ ಜಲಧಾರೆ ಅಭಿಯಾನದಡಿ ತನ್ನ ಅಸ್ತಿತ್ವ ಸಾಬೀತಿಗೆ ಮುಂದಾಗಿದೆ ಎಂದೆನಿಸುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಜನತಾ ಜಲಧಾರೆ ಯಾತ್ರೆ ಕೈಗೊಂಡ ಜೆಡಿಎಸ್‌ ಉತ್ತರ ಕರ್ನಾಟಕದ ತುಂಗಭದ್ರ, ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವರದಾ, ಮಹದಾಯಿ ಹೀಗೆ ವಿವಿಧ ನದಿ, ಜಲಾಶಯಗಳ ನೀರು ತೆಗೆದುಕೊಂಡು ಒಂದೆಡೆ ಸಮಾವೇಶ ಆಗುವ ಮೂಲಕ ರಾಜ್ಯದಲ್ಲಿನ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ತಾನು ಬದ್ಧ ಎಂಬ ಸಂದೇಶ ನೀಡಲು ಮುಂದಾಗಿದೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಪಾದಯಾತ್ರೆ ಮುಗಿಸಿರುವ ಕಾಂಗ್ರೆಸ್‌, ಮಹದಾಯಿ, ಯುಕೆಪಿ-3ನೇ ಹಂತದ ವಿಷಯವಾಗಿ ಹೋರಾಟಕ್ಕೆ ಮುಂದಾಗಿದೆ. ವಿಪಕ್ಷಗಳ ಹೋರಾಟಗಳಿಗೆ ಎದುರೇಟು ನೀಡಲು ಬಿಜೆಪಿ ತನ್ನ ಸಾಧನೆ, ನೀರಾವರಿ ಯೋಜನೆಗಳಿಗೆ ಪ್ರಯತ್ನ, ಕಾನೂನು ಅಡ್ಡಿಯನ್ನು ಜನರ ಮುಂದಿಡುವ ಯಾತ್ರೆ ಕೈಗೊಳ್ಳಲು ತಯಾರಿ ನಡೆಸುತ್ತಿದೆ.

ಯೋಜನೆಗಳ ವಿಳಂಬಕ್ಕೆ ಕಾರಣರಾರು? ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ವಿಳಂಬಕ್ಕೆ ಕಾರಣ ಯಾರು? ರಾಜ್ಯದಲ್ಲಿ ಅಧಿಕಾರ ನಡೆಸಿರುವ, ನಡೆಸುತ್ತಿರುವ ಮೂರು ಪ್ರಮುಖ ರಾಜಕೀಯ ಪಕ್ಷಗಳು ಉತ್ತರಿಸಬೇಕಿದೆ. ನೆರೆಯ ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿನ ನೀರಾವರಿ ಯೋಜನೆಗಳಿಗೆ ಅಲ್ಲಿನ ಸರಕಾರಗಳ ಇಚ್ಛಾಶಕ್ತಿ ನೋಡಿದರೆ ನಾವು ಅದೆಷ್ಟೋ ಮೈಲು ದೂರದಲ್ಲಿದ್ದೇವೆಂಬ ಅನುಭವವಾಗುತ್ತದೆ. ತೆಲಂಗಾಣದಲ್ಲಿ ಕೇಂದ್ರ ಸರ್ಕಾರದ ಬಿಡಿಕಾಸು ನೆರವಿಲ್ಲದೆಯೇ ಕಾಲೇಶ್ವರಂ ಯೋಜನೆಯನ್ನು ವಿಶ್ವಕ್ಕೆ ಮಾದರಿ ರೂಪದಲ್ಲಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗಿದೆ. ನೀರಾವರಿ-ಕುಡಿಯುವ ನೀರು ಪೂರೈಕೆಗೆ ವಿಶ್ವದ ಅತಿ ದೊಡ್ಡ ಕಾಲೇಶ್ವರಂ ಏತನೀರಾವರಿ ಯೋಜನೆ ಮಾದರಿಯಾಗಿದೆ. ಇನ್ನು ಅವಿಭಜಿತ ಆಂಧ್ರಪ್ರದೇಶದಲ್ಲಿ ವಿವಿಧ ನೀರಾವರಿ ಯೋಜನೆಗಳಿಗಾಗಿ ಕೈಗೊಂಡ ಜಲಯಜ್ಞಂ, ಮಹಾರಾಷ್ಟ್ರದಲ್ಲಿ ಭೀಮಾ ನದಿಯನ್ನೇ ಕಾಲುವೆ ಮೂಲಕ ತಿರುಗಿಸಿದ್ದು ಸೇರಿದಂತೆ ವಿವಿಧ ನೀರಾವರಿ ಯೋಜನೆಗಳು ಮೊಳಗುತ್ತಿವೆ. ನಮ್ಮಲ್ಲಿ ದಶಕ-ದಶಕಗಳಿಂದ ಯೋಜನೆಗಳ ಕಣ್ಣೀರ ಕಥೆಗೆ ಕೊನೆ ಇಲ್ಲವಾಗಿದೆ. ಯುಕೆಪಿಗೆ ಪ್ರತಿ ವರ್ಷ 10 ಸಾವಿರ ಕೋಟಿ ನೀಡಲು ಬದ್ಧ ಎಂಬ ಪಾದಯಾತ್ರೆ, ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ನೀರು ನೀಡಲು ಬದ್ಧ ಎಂಬ ವಾಗ್ಧಾನ, ಇಡೀ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆಂಬ ಹೇಳಿಕೆಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದಾರೆ. ಚುನಾವಣೆ ಮುಗಿದು ಅಧಿಕಾರ ಹಿಡಿದ ನಂತರ ಮರೆಯಾಗುತ್ತದೆ. ಇದು ರಾಜಕೀಯ ಪಕ್ಷಗಳಿಗೆ, ಉತ್ತರ ಕರ್ನಾಟಕದ ಜನತೆ ಹೊಸದೇನೂ ಅಲ್ಲವೇ ಅಲ್ಲ. ನೀರಾವರಿ ಯೋಜನೆಗಳ ಪೂರ್ಣಕ್ಕೆ ನಾವು ಬದ್ಧ ಎಂಬ ಪ್ರತಿಜ್ಞೆ ರಾಜಕೀಯ ಪಕ್ಷಗಳು ಮಾಡಬೇಕಿದೆ. ಯೋಜನೆ ಮುಗಿಯುವವರೆಗೆ ಹೋರಾಟ ನಿಲ್ಲದು ಎಂದು ಪಕ್ಷಾತೀತರು ವಿಶ್ವಾಸ ಮೂಡಿಸಬೇಕಿದೆ.

ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿದ ನಂತರ 3-4 ವರ್ಷ ಹನಿಮೂನ್‌ ಮೂಡ್‌ನ‌ಲ್ಲಿರುವ ರಾಜ್ಯದ ಮೂರು ಪಕ್ಷಗಳು ಚುನಾವಣೆ ಇನ್ನೇನು ಹತ್ತಿರವಾಗುತ್ತಿದೆ ಎನ್ನುವಾಗ ಎಚ್ಚೆತ್ತಂತೆ ನೀರಾವರಿ ಯೋಜನೆಗಳು, ಅಭಿವೃದ್ಧಿಯ ಕಾಳಜಿ ಎಂಬ ನಾಟಕ ಶುರುವಿಟ್ಟುಕೊಳ್ಳುತ್ತವೆ. ನೀರಾವರಿ ಯೋಜನೆಗಾಗಿ ನಾವು ಎಂದು ಜನರಿಗೆ ನೀರು ಕುಡಿಸುವ ಕೆಲಸ ಮಾಡುತ್ತಾರೆ. ನೀರಾವರಿ ಯೋಜನೆಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ಸ್ಪಷ್ಟತೆ ಇಲ್ಲವಾಗಿದೆ. ಕಳಸಾ-ಬಂಡೂರಿ ವಿಚಾರದಲ್ಲಿ ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಜನರಿಗೆ ಸುಳ್ಳು ಹೇಳುತ್ತಿದೆ. ಫಿಸಿಬಿಲಿಟಿ ವರದಿಯನ್ನೇ ಡಿಪಿಆರ್‌ ಎಂಬಂತೆ ಬಿಂಬಿಸುತ್ತಿದೆ. ಕೇಂದ್ರದ ಸುಮಾರು 18-22 ಇಲಾಖೆಗಳ ಒಪ್ಪಿಗೆ ಪಡೆಯದೆ ಕಾಮಗಾರಿ ಆರಂಭ ಸಾಧ್ಯವೇ ಎಂಬುದನ್ನು ಸರಕಾರ ಸ್ಪಷ್ಟಪಡಿಸಲಿ. –ವಿಕಾಶ ಸೊಪ್ಪಿನ, ಆಪ್‌, ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ 

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.