ಮೂಸಂಬಿ ಕೃಷಿಯಲ್ಲಿ ಯಶಸ್ಸು ಕಂಡ ಕುಷ್ಟಗಿಯ ಪ್ರಗತಿಪರ ರೈತ : ವಿದೇಶಕ್ಕೂ ರಫ್ತಾಗುತ್ತಿದೆಯಂತೆ

ಮೂಸಂಬಿ ಕೃಷಿಯಲ್ಲಿ ಆದಾಯಕ್ಕೆ ಮೋಸವಿಲ್ಲ ಎನ್ನುತ್ತಾರೆ ವೀರೇಶ ತುರಕಾಣಿ

Team Udayavani, Apr 21, 2022, 2:43 PM IST

ಮುಸುಂಬಿ ಕೃಷಿಯಲ್ಲಿ ಆದಾಯಕ್ಕೆ ಮೋಸವಿಲ್ಲ : ಕೃಷಿಯಲ್ಲಿ ಯಶಸ್ಸು ಕಂಡ ವೀರೇಶ ಅವರ ಮನದಮಾತು

ಕುಷ್ಟಗಿ : ಮೂಸಂಬಿ ಕೃಷಿ ನಂಬಿದರೆ ಯಾವೂದೇ ಕಾರಣಕ್ಕೂ ಆದಾಯಕ್ಕೆ ಮೋಸವಿಲ್ಲ ಎನ್ನುವುದನ್ನು ಕುಷ್ಟಗಿಯ ಪ್ರಗತಿ ಪರ ರೈತ ವೀರೇಶ ತುರಕಾಣಿ ನಿರೂಪಿಸಿದ್ದಾರೆ. ಈ ಬಾರಿ 7 ಎಕರೆ ಪ್ರದೇಶದಲ್ಲಿ ಮೂಸಂಬಿ ಬೆಳೆದು ಬರೋಬ್ಬರಿ 10 ಲಕ್ಷ ರೂ. ಆದಾಯ ನಿರೀಕ್ಷಿಸಲಾಗಿದೆ.

ಕುಷ್ಟಗಿಯ ವೀರೇಶ ತುರಕಾಣಿ ಅವರು, ತಾಲೂಕಿನ ಪ್ರಮುಖ ದಾಳಿಂಬೆ ಬೆಳೆಗಾರರು. ದಾಳಿಂಬೆ ಜೊತೆಯಲ್ಲಿ ಮೂಸಂಬಿ ಸಹ ಬೆಳೆಯಾಗಿ ಪ್ರಾಯೋಗಿಕವಾಗಿ ಬೆಳೆದಿದ್ದಾರೆ. ಕುಷ್ಟಗಿಯಿಂದ ಕಂದಕೂರು ಮಾರ್ಗದಲ್ಲಿ ಅವರ ತೋಟ ನಳನಳಿಸುವುದನ್ನು ಕಾಣಬಹುದು.

2016-2017ರಲ್ಲಿ ತಿರುಪತಿ ತೋಟಗಾರಿಕಾ ವಿಶ್ವ ವಿದ್ಯಾಲಯದಿಂದ ರಂಗಾಪೂರಿ ತಳಿಯ ಮೂಸಂಬಿ ನಾಟಿ ಮಾಡಿದ್ದಾರೆ. ಹನಿ ನೀರಾವರಿ ಆಧಾರಿತವಾಗಿ ಗಿಡದಿಂದ ಗಿಡಕ್ಕೆ 18 ಅಡಿ ಅಂತರದಲ್ಲಿ 1,600 ಗಿಡಗಳನ್ನು ನೆಡಲಾಗಿದೆ. ನಾಟಿ ಮಾಡಿ ಎರಡೂವರೆ ವರ್ಷದಿಂದ ಇಳುವರಿ ನೀಡುತ್ತಿದ್ದು, ಸದ್ಯ ಇದು ನಾಲ್ಕನೇಯ ಕಟಾವು ಆಗಿದೆ.

ಕುಷ್ಟಗಿ ಮೂಸಂಬಿ ದುಬೈಗೆ: ಕಳೆದ ಎರಡು ವರ್ಷದಲ್ಲಿ ಕೊರೊನಾದಿಂದಾಗಿ ಸೂಕ್ತ ಮಾರುಕಟ್ಟೆ, ಮೂಸಂಬಿಗೂ ಬೆಲೆ ಸಿಗಲಿಲ್ಲ. ಪ್ರತಿ ಕೆ.ಜಿಗೆ 15ರಿಂದ 20 ರೂ. ಗೆ ಮಾರಾಟವಾಗಿತ್ತು. ಇದೀಗ ಪ್ರತಿ ಕೆ.ಜಿ.ಗೆ 40 ರೂ. ಆಂಧ್ರಪ್ರದೇಶದ ಮೂಲದ ಮಧ್ಯವರ್ತಿಯೊಬ್ಬರು ಖರೀದಿಸಿದ್ದು, ದುಬೈಗೆ ರಪ್ತಾಗುತ್ತಿದೆ. ಈ ವಾರದಲ್ಲಿ ಕಟಾವು ಆರಂಭವಾಗಲಿದ್ದು, 24 ಟನ್ ಇಳುವರಿ ಪಡೆದಿದ್ದು 10 ಲಕ್ಷ ರೂ. ಆದಾಯ ನಿರೀಕ್ಷಿಸಲಾಗಿದೆ ಎನ್ನುತ್ತಾರೆ ವೀರೇಶ ತುರಕಾಣಿ.

ಇದನ್ನೂ ಓದಿ : ನಾಯಕನಹಟ್ಟಿ ದೇಗುಲದಲ್ಲಿ 67.65 ಲಕ್ಷ ರೂ. ಕಾಣಿಕೆ ಸಂಗ್ರಹ

ಜೂಸ್ ಗೆ ಬೇಡಿಕೆ: ಮೂಸಂಬಿ ಚಳಿಗಾಲದಲ್ಲೂ ಇಳುವರಿ ನಿರೀಕ್ಷಿಸಬಹುದಾಗಿದ್ದು ಆದರೆ ಮಾರುಕಟ್ಟೆಯಲ್ಲಿ ಆಗ ಈ ಹಣ್ಣಿಗೆ ಬೇಡಿಕೆ ಕಡಿಮೆ ಹೀಗಾಗಿ ಬೇಸಿಗೆಯಲ್ಲಿ ಇಳುವರಿ ಬರುವಂತೆ ಮಾಡುವುದೇ ಈ ಕೃಷಿಯ ಟೆಕ್ನಿಕ್ ಆಗಿದೆ. ಅಲ್ಲದೇ ಬೇಸಿಗೆಯಲ್ಲಿ ಮೂಸಂಬಿಯಲ್ಲಿನ ಸಿಟ್ರಿಕ್ ಅಂಶ ಹಣ್ಣಾದಂತೆ ಸ್ವಲ್ಪ ಸಿಹಿಗೆ ತಿರುಗುತ್ತಿದ್ದು ಹೀಗಾಗಿ ಬೇಸಿಗೆಯಲ್ಲಿ ಜ್ಯೂಸ್ ಗೆ ಬೇಡಿಕೆ ಇದೆ.

ಮಂಗಗಳ ಕಾಟವಿಲ್ಲ: ಮೂಸಂಬಿಗೆ ಮಂಗಗಳ ಕಾಟ ಇಲ್ಲ.‌ಯಾಕೆಂದರೆ ಈ ಹಣ್ಣಿನ ತಿರುಳು ಕಹಿಯಾಗಿದ್ದು, ಮಂಗಗಳು ಇದರ ಸಮೀಪ ಹೋಗುವುದಿಲ್ಲ. ಹೀಗಾಗಿ ಸಕಾಲಿಕ ನೀರು ನಿರ್ವಹಣೆ ಇದ್ದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ತೆಗೆಯಲು ಸಾಧ್ಯವಿದೆ.

ನೇರ ಮಾರುಕಟ್ಟೆ ವ್ಯವಸ್ಥೆ ಇಲ್ಲ: ಮೂಸಂಬಿ ನಂಬಿ ಕೃಷಿ ಮಾಡಿದರೆ ಬಡತನ ಇಲ್ಲ ಆದರೆ ನೀರಿನ ಗ್ಯಾರಂಟಿ ಇರಬೇಕು. ಪ್ರತಿ ನಿತ್ಯ ಪ್ರತಿ ಗಿಡಕ್ಕೆ 80 ಲೀಟರ್ ನೀರು ಬೇಕು. ಹೂ ಕಟ್ಟುವ ವೇಳೆ ಹೂಗಳು ಉದುರದಂತೆ ಹಾಗೂ ಮೂಸಂಬಿ ತೊಗಟೆ ಮೃದುವಾಗಿರಲು ಒಮ್ಮೆ ಸಿಂಪರಣೆ ಮಾಡಿದರೆ ಸಾಕು. ನೀರು ನಿರ್ವಹಣೆಯಲ್ಲಿ ವ್ಯತ್ಯಾಸವಾಗಬಾರದು ಹೀಗಾದರೆ ಉತ್ತಮ ಬೆಳೆ ತೆಗೆಯಬಹುದಾಗಿದೆ. 18 ಟನ್ ನಿಂದ ಇಳುವರಿ ಆರಂಭವಾಗಿದ್ದು, ಇದೀಗ 24 ಟನ್ ನಿರೀಕ್ಷಿಸಲಾಗಿದೆ. ಉತ್ತಮ ಇಳುವರಿ ಆದಾಯದಲ್ಲಿ ಎರಡೂ ಮಾತಿಲ್ಲ ಆದರೆ ನೇರ ಮಾರುಕಟ್ಟೆಯ ವ್ಯವಸ್ಥೆ ಇಲ್ಲ. ಮಧ್ಯವರ್ತಿಗಳನ್ನು ನಂಬಬೇಕಿದೆ. ರೈತರೇ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆ ಸರ್ಕಾರದಿಂದ ಆಗಬೇಕಿದೆ. ಇಲ್ಲವಾದರೆ ಮಧ್ಯವರ್ತಿಗಳು ನಿಗದಿ ಪಡಿಸಿದ ಬೆಲೆಗೆ ಮಾರಾಟ ಮಾಡಬೇಕಿದೆ. ಕುಷ್ಟಗಿಯ ತಾಲೂಕಿನ ಬಿಸಿಲಿನ ವಾತವರಣದಲ್ಲಿ ಮುಸುಂಬಿಯನ್ನು ಉತ್ಕೃಷ್ಟ ಬೆಳೆ ಬೆಳೆಯಬಹುದಾಗಿದ್ದು, ನ್ಯಾಯಯುತ ಬೆಲೆ ಸಿಗಬೇಕಿದೆ ಎನ್ನುತ್ತಾರೆ ವೀರೇಶ ತುರಕಾಣಿ.

– ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.