ಸೈಕಲ್‌ ಬಳಸಿ-ಇಂಧನ ಉಳಿಸಿ ಅಭಿಯಾನ


Team Udayavani, Apr 21, 2022, 3:02 PM IST

19cycle

ವಿಜಯಪುರ: ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕಂಪನಿಗಳು ಮಿಲಿಟರಿ ವ್ಯವಸ್ಥೆಗೆ ಪೆಟ್ರೋಲ್‌, ಡೀಸೆಲ್‌ ಸರಬರಾಜು ಮಾಡಲು ನಿರಾಕರಿಸಿದವು. ಪರಿಣಾಮ ಅಂದಿನ ಪ್ರಧಾನಿ ಪ್ರಧಾನಿ ಇಂದಿರಾ ಗಾಂಧಿ ಇಂಧನ ಪೂರೈಕೆಯ ಖಾಸಗಿ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಸೇನೆಯ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಮತ್ತೆ ಖಾಸಗೀಕರಣದ ಮಾತು ಕೇಳಿ ಬರುತ್ತಿದೆ. ಇದು ಸತ್ಯವೇ ಆಗಿದ್ದಲ್ಲಿ ಸರ್ಕಾರ ಕೂಡಲೇ ಇಂಥ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ವಿಜಯಪುರ ಸೈಕ್ಲಿಂಗ್‌ ಗ್ರೂಪ್‌ ಅಧ್ಯಕ್ಷ ಡಾ| ಮಹಾಂತೇಶ ಬಿರಾದಾರ ಹೇಳಿದರು.

ನಗರದಲ್ಲಿ ಭಾರತ ಪೆಟ್ರೋಲಿಂ ಸಂಸ್ಥೆ ಅಥಣಿ ರಸ್ತೆಯ ಕುಮಾರೇಶ್ವರ ಪೆಟ್ರೋಲ್‌ ಪಂಪ್‌ನಿಂದ ಏರ್ಪಡಿಸಿದ್ದ ಸೈಕಲ್‌ ಬಳಸಿ, ಇಂಧನ ಉಳಿಸಿ ಹಾಗೂ ಹಸಿರು-ಸ್ವತ್ಛ ಶಕ್ತಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

70ರ ದಶಕದ ವೇಳೆ ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಯಲ್‌-ಬ್ರಿಟಿಷ್‌ ಪೆಟ್ರೋಲಿಂ ಕಂಪನಿ, ಕಾಲ್ಟೆàಕ್ಸ್‌ನಂತಹ ಕಂಪನಿಗಳು ಚೀನಾ ಜೊತೆಗಿನ ಯುದ್ಧದ ಸಂದರ್ಭದಲ್ಲಿ ಮಿಲಟರಿ ವಾಹನಗಳಿಗೆ ಇಂಧನವನ್ನು ಪೂರೈಸಲು ನಿರಾಕರಿಸಿದವು. ಇದರಿಂದ ಕೆರಳಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಈ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಸೇನೆಯ ವಶಕ್ಕೆ ನೀಡಿದ್ದರು. ನಂತರದಲ್ಲಿ ಬಿಪಿಸಿಎಲ್‌ ಹಾಗೂ ಹಿಂದೂಸ್ತಾನ ಪೆಟ್ರೋಲಿಂ ಕಂಪನಿಗಳಾಗಿ ಪರಿವರ್ತಿಸಿದರು ಎಂದು ಅರ್ಧ ಶತಮಾನದ ಹಿಂದಿನ ಘಟನೆಯನ್ನು ಮೆಲುಕು ಹಾಕಿದರು.

ಅಂತಾರಾಷ್ಟ್ರೀಯ ಕೋರ್ಟ್‌ಗಳಲ್ಲಿ ಈ ಕಂಪನಿಗಳು ದಾವೆ ಹೂಡಬಹುದು ಎಂಬ ಆಲೋಚನೆಯಿಂದ ಸರ್ಕಾರಿ ಸ್ವಾಮ್ಯದಲ್ಲೇ ಇಂಡಿಯನ್‌ ಆಯಿಲ್‌ ಕಂಪನಿ ಹುಟ್ಟು ಹಾಕಿದರು. ಖಾಸಗಿ ಕಂಪನಿಗಳು ತಮ್ಮ ಬಂಕ್‌ಗಳನ್ನು ಸ್ಥಾಪಿಸಿ ಪೈಪೋಟಿ ನೀಡುತ್ತಿರುವ ಸಂದರ್ಭದಲ್ಲಿ ಗ್ರಾಹಕರು ಸಾರ್ವಜನಿಕ ವಲಯದ ಈ ಕಂಪನಿಗಳನ್ನು ಉಳಿಸಿಬೇಕಿದೆ. ಕಳೆದ 20 ವರ್ಷಗಳಿಂದ ಸರ್ಕಾರ ಈ ಕಂಪನಿಗಳನ್ನು ಖಾಸಗಿಕರಣಗೊಳಿಸಲು ಪ್ರಯತ್ನ ಪಡುತ್ತಲೇ ಇರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೆಲಸಗಳಿಗೆ ವಾಹನಗಳ ಬದಲಾಗಿ ನಡೆದು ಹೋಗುವುದು ಅಥವಾ ಸೈಕಲ್‌ ಬಳಸುವುದು ಉತ್ತಮ. ದೂರದ ಪ್ರಯಾಣಕ್ಕೆ ರೈಲು ಬಸ್‌ನಂತಹ ಸಾರ್ವಜನಿಕ ಸಾರಿಗೆಗಳನ್ನು ಬಳಸುವುದರಿಂದ ಕೂಡ ಇಂಧನ ಉಳಿಸಿ, ನಾವೆಲ್ಲರೂ ನಮ್ಮ ಆರ್ಥಿಕ ವೆತ್ಛವನ್ನು ಉಳಿಸುವುದಲ್ಲದೇ ಭಾರತ ವ್ಯವಸ್ಥೆಗೆ ಬಲ ನೀಡಬೇಕು ಎಂದು ಆಗ್ರಹಿಸಿದರು.

ಬಿಪಿಸಿಎಲ್‌ ಪ್ರಾದೇಶಕ ಅಧಿಕಾರಿ ಎಂ.ಮಹೇಶ ಸೈಕಲ್‌ ಜಾಥಾಗೆ ಹಸಿರು ನಿಶಾನೆ ನೀಡಿದರು. ಮಾರುಕಟ್ಟೆ ಅಧಿಕಾರಿ ಸಾದಿಕ ಸೈಯ್ಯದ್‌ ಸ್ವಾಗತಿಸಿದರು. ಬಿಪಿಸಿಎಲ್‌ ಡೀಲರ್‌ಗಳಾದ ಸಂಗಮೇಶ ಪಾಟೀಲ, ಡಾ| ವಿಜಯಕುಮಾರ ವಾರದ, ಅಮರೇಶ, ವಿಜಯಪುರ ಸೈಕ್ಲಿಂಗ್‌ ಗ್ರೂಪ್‌ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಕಾರ್ಯದರ್ಶಿ ಸೋಮಶೇಖರ ಸ್ವಾಮಿ, ಧಾರವಾಡ ಕೃಷಿ ವಿವಿ ಆಡಳಿತ ಮಂಡಳಿ ಮಾಜಿ ಸದಸ್ಯ ಸುರೇಶ ಘೋಣಸಗಿ ವೇದಿಕೆಯಲ್ಲಿದ್ದರು. ಡಾ| ರಾಜು ಎಲೆಗೊಂಡ, ಸಮೀರ ಬಳಗಾರ, ಸಂತೋಷ ಅವರಸಂಗ, ಶಿವರಾಜ್‌ ಪಾಟೀಲ, ವಿಶಾಲ ಹಿರಾಸ್ಕರ್‌, ಸಂದೀಪ ಮಡಗೊಂಡ, ಸೋಮು ಮಠ, ಅಮೀತ್‌ ಬಿರಾದಾರ, ಮನೀಶ್‌ ದೇವಗಿರಿಕರ, ವಿನಾಯಕ ಕೋಟಿ, ಸಂದೀಪ ಜೋಶಿ ಸೇರಿದಂತೆ ಹಲವರು ಸೈಕ್ಲಿಂಗ್‌ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.