ಸೋನಿಯಾ ಗಾಂಧಿಯ ಮೇಲೆ ಆಣೆ ಮಾಡುವಿರಾ?: ಸಿದ್ದರಾಮಯ್ಯಗೆ ಬಿಜೆಪಿ ಸವಾಲು
ಟಿಪ್ಪು ಖಡ್ಗಕ್ಕೆ ಸಲಾಮು ಹಾಕಿ ಚಾಮರಾಜಪೇಟೆ ಎನ್ನುವಿರಾ?
Team Udayavani, Apr 21, 2022, 3:46 PM IST
ಬೆಂಗಳೂರು : ‘ಯೌವನದಲ್ಲಿ ಮಾಡಿದ ತಪ್ಪುಗಳಿಗೆ ವೃದ್ಧಾಪ್ಯದಲ್ಲಿ ಪಶ್ಚಾತಾಪ ಪಟ್ಟರೆ ತಪ್ಪೇನಿಲ್ಲ!,ಆಣೆರಾಮಯ್ಯ ‘ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಟ್ವೀಟರ್ ನಲ್ಲಿ ಬಿಜೆಪಿ ತಿವಿದಿದೆ.
”ಹಿಂದೂ ಧಾರ್ಮಿಕ ಆಚರಣೆಗಳನ್ನು ಮೌಢ್ಯದ ಸಾಲಿಗೆ ಸೇರಿಸಲು ಹೊರಟಿದ್ದ ಸಿದ್ದರಾಮಯ್ಯ ಅವರಿಗೆ ಈಗ ಇದ್ದಕ್ಕಿದ್ದಂತೆ ಆಣೆ ಪ್ರಮಾಣದ ಬಗ್ಗೆ ನಂಬಿಕೆ ಮೂಡಿದ್ದು ಸ್ವಾಗತಾರ್ಹ.ಯೌವನದಲ್ಲಿ ಮಾಡಿದ ತಪ್ಪುಗಳಿಗೆ ವೃದ್ಧಾಪ್ಯದಲ್ಲಿ ಪಶ್ಚಾತಾಪ ಪಟ್ಟರೆ ತಪ್ಪೇನಿಲ್ಲ! ಆದರೆ ಆಣೆರಾಮಯ್ಯ ಅವರು ಇದನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವ ಅಪಾಯವಿದೆ’ ಎಂದು ವ್ಯಂಗ್ಯವಾಡಿದೆ.
‘ಸಿದ್ದರಾಮಯ್ಯ ಅವರು ತಮ್ಮ ಧಾರ್ಮಿಕ ಹಕ್ಕಿಗಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನೇ ಬಳಸಿಕೊಳ್ಳುತ್ತಿರುವುದರ ಮರ್ಮವೇನು? ಮಾನ್ಯ ಆಣೆರಾಮಯ್ಯ ಅವರೇ, ಆಣೆ – ಪ್ರಮಾಣದ ಮೂಲಕ ಹಳೆಯ ಗುರುವಿನ ತಲೆಯ ಮೇಲೆ ಕೈ ಇಡಲು ಹೊರಟಿದ್ದು ಸಮಂಜಸವೇ?’ ಎಂದು ಪ್ರಶ್ನೆ ಮಾಡಿದೆ.
‘ಮಾನ್ಯ ಆಣೆರಾಮಯ್ಯ ಅವರೇ, ಬೇರೆಯವರ ರಾಜಕೀಯ ನಿರ್ಧಾರದ ಬಗ್ಗೆ ಆಣೆ ಪ್ರಮಾಣ ಮಾಡಿಸಿಕೊಳ್ಳುವುದಕ್ಕಿಂತ ನಿಮ್ಮ ಸ್ವಂತಿಕೆ ಪಣಕ್ಕಿಡಿ. ಬಾದಾಮಿ ಕ್ಷೇತ್ರದಿಂದ ವಲಸೆ ಹೋಗುವುದಿಲ್ಲ ಎಂದು ತಾಯಿ ಚಾಮುಂಡೇಶ್ವರಿ ಮೇಲೆ ಆಣೆ ಮಾಡುವಿರಾ? ಅಥವಾ ಹಿಂದೂ ದೇವರ ಮೇಲೆ ಅಸಹನೆಯಿದ್ದರೆ ಟಿಪ್ಪು ಖಡ್ಗಕ್ಕೆ ಸಲಾಮು ಹಾಕಿ ಚಾಮರಾಜಪೇಟೆ ಎನ್ನುವಿರಾ?ಪ್ರತಿ ಬಾರಿ ಚುನಾವಣೆ ಬಂದಾಗಲೂ ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸುವ ಆಣೆ ರಾಮಯ್ಯ ಅವರು ಈ ಬಾರಿಯಾದರೂ ಒಂದು ಗಟ್ಟಿ ಆಣೆ-ಪ್ರಮಾಣ ಮಾಡಲಿ. ಆ ಪ್ರಮಾಣಕ್ಕಾಗಿ ಬೇರೆಯವರ ತಂದೆ-ತಾಯಿಯನ್ನು ಆಯ್ಕೆ ಮಾಡಿಕೊಳ್ಳುವ ಬದಲು ಅಧಿನಾಯಕಿ ಸೋನಿಯಾ ಗಾಂಧಿಯ ಅವರ ಮೇಲೆ ಆಣೆ ಮಾಡುವ ಧೈರ್ಯ ತೋರುವರೇ?’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ