ಭಾರತ-ಬ್ರಿಟನ್‌ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಶ್ರೀಕಾರ


Team Udayavani, Apr 22, 2022, 6:00 AM IST

ಭಾರತ-ಬ್ರಿಟನ್‌ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಶ್ರೀಕಾರ

ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರ ಎರಡು ದಿನಗಳ ಭಾರತ ಭೇಟಿ ಗುರುವಾರ ಆರಂಭಗೊಂಡಿದೆ. ಲಂಡನ್‌ನಿಂದ ಭಾರತಕ್ಕೆ ಪ್ರಯಾಣಿಸುವ ವೇಳೆ ವಿಮಾನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಾನ್ಸನ್‌, ಉಭಯ ದೇಶಗಳ ನಡುವಣ ಸಂಬಂಧ ವೃದ್ಧಿಯ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಉಪಕ್ರಮಗಳ ಬಗೆಗೆ ಬೆಳಕು ಚೆಲ್ಲುವ ಮೂಲಕ ಭಾರೀ ನಿರೀಕ್ಷೆ ಮೂಡಿಸಿದ್ದಾರೆ. ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಪರಸ್ಪರ ಸಹಯೋಗದೊಂದಿಗೆ ಕಾರ್ಯಾಚರಿಸಲಾಗುವುದು ಎನ್ನುವ ಮೂಲಕ ಆದಷ್ಟು ಶೀಘ್ರದಲ್ಲೇ ಈ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳುವ ಸುಳಿವು ನೀಡಿದ್ದಾರೆ. ಇಂಡೋ- ಪೆಸಿಫಿಕ್‌ ವಲಯದಲ್ಲಿ ಭಾರತ ಮತ್ತು ಬ್ರಿಟನ್‌ ನಡುವಣ ಸಹಕಾರ ವೃದ್ಧಿ, ರಕ್ಷಣ ಕ್ಷೇತ್ರದಲ್ಲಿ ಭಾರತಕ್ಕೆ ಅಗತ್ಯ ನೆರವು ಮತ್ತು ಸಹಕಾರ, ವಿವಿಧ ಒಪ್ಪಂದಗಳು ಏರ್ಪಡಲಿವೆ ಎಂದು ನಿರೀಕ್ಷಿಸಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ಬ್ರಿಟನ್‌ ಪ್ರಧಾನಿಯ ಈ ಬಲು ನಿರೀಕ್ಷಿತ ಭಾರತ ಭೇಟಿಯ ಸಂದರ್ಭದಲ್ಲಿ ಉಕ್ರೇನ್‌ ವಿರುದ್ಧ ರಷ್ಯಾ ಸಮರ ಸಾರಿರುವುದರಿಂದ ಜಾಗತಿಕ ಮಟ್ಟದಲ್ಲಿ ಸೃಷ್ಟಿಯಾಗಿರುವ ಸಂದಿಗ್ಧತೆ, ರಷ್ಯಾದ ವಿರುದ್ಧ ಹೇರಲಾಗಿ  ರುವ ಆರ್ಥಿಕ ಮತ್ತು ವ್ಯಾಪಾರ-ವಹಿವಾಟಿನ ಮೇಲಣ ನಿರ್ಬಂಧ  ಗಳಿಂದಾಗಿ ಒಟ್ಟಾರೆಯಾಗಿ ವಿಶ್ವದ ಮೇಲಾಗಿರುವ ಪರಿಣಾಮಗಳು ಮತ್ತು ಪರಿಹಾರೋಪಾಯಗಳ ಬಗೆಗೆ ಪ್ರಧಾನಿ ಮೋದಿ ಅವರೊಂದಿಗೆ ಅವರು ಚರ್ಚಿಸುವುದು ನಿಶ್ಚಿತ.

ಇಂಡೋ- ಪೆಸಿಫಿಕ್‌ ವಲಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಉಭಯ ರಾಷ್ಟ್ರಗಳು ಒಲವು ವ್ಯಕ್ತಪಡಿಸಿವೆ. ಈ ನಡುವೆ ರಕ್ಷಣ ವಲಯದಲ್ಲಿ ಭಾರತ ಇಂದಿಗೂ ರಷ್ಯಾವನ್ನು ಅವಲಂಬಿಸಿರುವ ಹಿನ್ನೆಲೆಯಲ್ಲಿ ರಕ್ಷಣ ಸಾಮಗ್ರಿಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಹೊಂದುವ ಭಾರತದ ಕನಸನ್ನು ನನಸಾಗಿಸಲು ಬ್ರಿಟನ್‌ ಅಗತ್ಯ ಸಹಕಾರ ನೀಡುವ ಜತೆಯಲ್ಲಿ ಜಂಟಿ ಸಹಭಾಗಿತ್ವಕ್ಕೆ ಸಮ್ಮತಿ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಭಾರತದ ಜತೆ ಶತಕೋಟಿ ಪೌಂಡ್‌ಗಳಿಗೂ ಅಧಿಕ ಮೊತ್ತದ ಹೂಡಿಕೆ ಮತ್ತು ಆಮದು ಒಪ್ಪಂದವನ್ನು ಘೋಷಿಸಿರುವ ಬೋರಿಸ್‌ ಜಾನ್ಸನ್‌, ಸಾಫ್ಟ್ವೇರ್‌ ಎಂಜಿನಿಯರಿಂಗ್‌, ಆರೋಗ್ಯ ಸಹಿತ ವಿವಿಧ ಕ್ಷೇತ್ರಗಳಲ್ಲಿ ಈ ಒಪ್ಪಂದ ಅನ್ವಯವಾಗಲಿದೆ ಎಂದಿದ್ದಾರೆ. ಅಲ್ಲದೆ ತಮ್ಮ ಪ್ರವಾಸದ ವೇಳೆ ಬ್ರಿಟನ್‌ ಪ್ರಧಾನಿ ಭಾರತೀಯ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ವೀಸಾ ನಿಯಮಾವಳಿಗಳಲ್ಲಿ ಸಡಿಲಿಕೆ, ಶುಲ್ಕ ಇಳಿಕೆ ಯಂತಹ ಸುಧಾರಣ ಕ್ರಮಗಳನ್ನು ಘೋಷಿಸುವ ಸಾಧ್ಯತೆ ಇದೆ.

ಅಹ್ಮದಾಬಾದ್‌ನಲ್ಲಿ ಅದಾನಿ ಸಮೂಹದ ಮುಖ್ಯಸ್ಥ ಗೌತಮ್‌ ಅದಾನಿ ಅವರನ್ನು ಭೇಟಿಯಾಗಿರುವ ಜಾನ್ಸನ್‌, ಬ್ರಿಟನ್‌ನಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ನವೀಕರಿಸಬಹುದಾದ ಇಂಧನ, ರಕ್ಷಣೆ, ಏರೋಸ್ಪೇಸ್‌ ಮತ್ತಿತರ ಕ್ಷೇತ್ರದಲ್ಲಿ ಬ್ರಿಟನ್‌ ಕಂಪೆನಿಗಳೊಂದಿಗೆ ಸಹಭಾಗಿತ್ವದಿಂದ ಕಾರ್ಯನಿರ್ವಹಿಸುವಂತೆ ಬ್ರಿಟನ್‌ ಪ್ರಧಾನಿ ನೀಡಿದ ಸಲಹೆಗೆ ಅದಾನಿ ಸಮ್ಮತಿಸಿದ್ದಾರೆ.

ಒಟ್ಟಿನಲ್ಲಿ, ಭಾರತದೊಂದಿಗಿನ ವ್ಯಾಪಾರ-ವಹಿವಾಟು ವೃದ್ಧಿಯ ಜತೆಜತೆಯಲ್ಲಿ ಬ್ರಿಟನ್‌ ವಿಶ್ವ ಮಟ್ಟದಲ್ಲಿ ಭಾರತದೊಂದಿಗೆ ಪರಸ್ಪರ ಸಹಕಾರ, ಸಹ ಭಾಗಿತ್ವಕ್ಕೆ ಹೆಚ್ಚಿನ ಉತ್ತೇಜನ ನೀಡಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆಯೇ ಸರಿ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.