ಕಸದ ಲಾರಿ ಚಾಲಕರಿಗೆ ಫಿಟ್ನೆಸ್ ಟೆಸ್ಟ್‌; ಫೇಲ್‌ ಆದ ಚಾಲಕರಿಗೆ ಕೋಕ್‌

ಸಂಜೆ 6ಕ್ಕೆ ಪಾಳಿ ಸಿಗುತ್ತದೆ.ಅಲ್ಲಿಯವರೆಗೂ ಚಾಲಕರು ಆ ಜಾಗದಲ್ಲೇ ಕಾಲ ಕಳೆಯಬೇಕಾಗುತ್ತದೆ.

Team Udayavani, Apr 22, 2022, 11:32 AM IST

ಕಸದ ಲಾರಿ ಚಾಲಕರಿಗೆ ಫಿಟ್ನೆಸ್ ಟೆಸ್ಟ್‌; ಫೇಲ್‌ ಆದ ಚಾಲಕರಿಗೆ ಕೋಕ್‌

ಬೆಂಗಳೂರು: ಕೇವಲ ಒಂದು ತಿಂಗಳ ಅಂತರದಲ್ಲಿ ನಗರದ ಕಸದ ಲಾರಿಗಳು ಮೂರು ಬಲಿ ಪಡೆದ ಹಿನ್ನೆಲೆಯಲ್ಲಿ ಅವುಗಳ ಚಾಲಕರನ್ನು ದೈಹಿಕ ಪರೀಕ್ಷೆಗೊಳಪಡಿಸಲು ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿ ಸುಮಾರು 350ರಿಂದ 400 ಲಾರಿಗಳಲ್ಲಿ ಕಸ ಬೇರೆ ಬೇರೆ ಕಡೆ ವಿಲೇವಾರಿ ಆಗುತ್ತದೆ. ಈ ಪೈಕಿ ಸಾವಿರ ಟನ್‌ ಹಸಿ ಕಸ ಸಂಸ್ಕರಣಾ ಕೇಂದ್ರಗಳಿಗೆ ಹಾಗೂ ಸುಮಾರು ಎರಡು ಸಾವಿರ ಟನ್‌ ಭೂಭರ್ತಿಗೆ ಹೋಗುತ್ತದೆ. ಈ ಲಾರಿಗಳ ಚಾಲಕರನ್ನು ಯಲಹಂಕದಲ್ಲಿರುವ ಪೊಲೀಸ್‌ ತರಬೇತಿ ಕೇಂದ್ರದಲ್ಲಿ ದೈಹಿಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದ್ದು, ತಲಾ 50 ಜನರ ತಂಡಗಳನ್ನು ಮಾಡಿ, ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಸ್ಟಿಮ್ಯುಲೇಟರ್‌ನಲ್ಲಿ ಚಾಲಕರನ್ನು
ಕೂರಿಸಿ, ಕಣ್ಣು, ಕಿವಿ ಸೇರಿದಂತೆ ಚಾಲನಾ ಸಾಮರ್ಥ್ಯ ಪರಿಕ್ಷೆ ನಡೆಯಲಿದೆ. ಮುಂದಿನ 12 ದಿನಗಳು ಇದು ನಿರಂತರವಾಗಿ ಇರಲಿದೆ.

“ಈಗಾಗಲೇ ತಂಡಗಳನ್ನು ರಚಿಸಲಾಗಿದೆ. ಈ ಪರೀಕ್ಷೆ ಕೂಡ ಆರಂಭವಾಗಿದ್ದು, ಇದರಲ್ಲಿ ಅನುತ್ತೀರ್ಣಗೊಂಡವರನ್ನು ಗುತ್ತಿಗೆದಾರರಿಗೆ ಸುರಕ್ಷತೆ ದೃಷ್ಟಿಯಿಂದ ಕೈಬಿಡುವಂತೆ ಸೂಚಿಸಲಾಗುವುದು. ಅಲ್ಲದೆ, ಭೂಭರ್ತಿ ಘಟಕದ ಬಳಿ ತೂಕ ಮಾಡುವ ಯಂತ್ರಗಳ ಬಳಿ ಅಥವಾ ಮತ್ತೂಂದು ಪಾಯಿಂಟ್‌ನಲ್ಲಿ ಈ ಪರೀಕ್ಷೆ ಮೂಲಕ ಚಾಲಕರನ್ನು ಆಲ್ಕೋಮೀಟರ್‌ ಮೂಲಕ ಡ್ರಂಕ್‌ ಆಂಡ್‌ ಡ್ರೈವ್‌ ಪರೀಕ್ಷೆಗೊಳಪಡಿಸುವ ಚಿಂತ  ನೆಯೂ ನಡೆದಿದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ಒಂದು ಕಸದ ಲಾರಿಯು ಸುಮಾರು ನಾಲ್ಕೈದು ಟನ್‌ ಕಸವನ್ನು ಹೊತ್ತೂಯ್ಯುತ್ತದೆ. ನಗರದ ವಿವಿಧ ಬಡಾವಣೆಗಳಿಂದ ಕಸ ಸಂಗ್ರಹಿಸಿಕೊಂಡು ಬರುವ ಕಾಂಪ್ಯಾಕ್ಟರ್‌ಗಳಿಂದ ಈ ಲಾರಿಗಳಿಗೆ ಕಸ ತುಂಬಲಾಗುತ್ತದೆ. ಬೆಳಗ್ಗೆ 10 ಗಂಟೆಗೆ ತೆರಳುವ ಈ ವಾಹನಗಳು ಭೂಭರ್ತಿ ಕೇಂದ್ರಗಳಲ್ಲಿ ಪಾಳಿ ನಿಲ್ಲಬೇಕಾಗುತ್ತದೆ. ಸಂಜೆ 6ಕ್ಕೆ ಪಾಳಿ ಸಿಗುತ್ತದೆ.ಅಲ್ಲಿಯವರೆಗೂ ಚಾಲಕರು ಆ ಜಾಗದಲ್ಲೇ ಕಾಲ ಕಳೆಯಬೇಕಾಗುತ್ತದೆ. ಬಹುತೇಕ ಎಲ್ಲ ಚಾಲಕರು ಸಾಕಷ್ಟು ಅನುಭವ ಹೊಂದಿದವರಾಗಿದ್ದಾರೆ. ಆದಾಗ್ಯೂ ಅಹಿತಕರ ಘಟನೆಗಳು ಸಂಭವಿಸುತ್ತಿವೆ.

ಹೊಸ ವಾಹನಗಳು?
ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಸಮಗ್ರ ಟೆಂಡರ್‌ ಕರೆಯಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಹೊಸ ಕಸದ ವಾಹನಗಳನ್ನು ರಸ್ತೆಗಿಳಿಸಬೇಕು ಎಂಬ ಷರತ್ತು ಕೂಡ ಟೆಂಡರ್‌ ನಲ್ಲಿ ಸೇರಿಸಲು ಉದ್ದೇಶಿಸಿದೆ. ಐದು ವರ್ಷಗಳ ಗುತ್ತಿಗೆ ಇದಾಗಿರುತ್ತದೆ. ಜಿಪಿಎಸ್‌, ಬ್ಯಾಟರಿ ಮತ್ತಿತರ ಉಪಕರಣಗಳು ವಾಹನಗಳು ರಸ್ತೆಗಿಳಿಯುವಾಗಲೇ ಅಳವಡಿಕೆಯಾಗಿ ಬಂದರೆ ಉತ್ತಮವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಹೊಸ ವಾಹನಗಳನ್ನು ರಸ್ತೆಗಿಳಿಸಲು ಚಿಂತನೆ ನಡೆದಿದೆ. ಆದರೆ, ಇದಕ್ಕೆ ಮುಂಬರುವ ದಿನಗಳಲ್ಲಿ ಹಲವು ತಾಂತ್ರಿಕ ಅಡತಡೆಗಳೂ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಲಾರಿಗಳ ಮುಂಭಾಗ ಬಾವುಟ ಅಳವಡಿಕೆ
“ಮೂರೂ ಅಪಘಾತಗಳಲ್ಲಿ ಕಾರಣಗಳು ಏನೇ ಇರಬಹುದು. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಇದರಲ್ಲಿ ದೈಹಿಕ ಪರೀಕ್ಷೆ ಕೂಡ ಒಂದಾಗಿದೆ. ಜತೆಗೆ ಸಾಮಾನ್ಯವಾಗಿ ರಕ್ಷಣಾ ಇಲಾಖೆಯ ವಾಹನಗಳ ಮುಂಭಾಗದಲ್ಲಿ ಎರಡೂ ಬದಿಯಲ್ಲಿ ಬಾವುಟಗಳನ್ನು ಅಳವಡಿಸಲಾಗಿರುತ್ತದೆ. ಅದೇ ಮಾದರಿಯಲ್ಲಿ ಕಸದ ಲಾರಿಗಳ ಮುಂಭಾಗದ ಎರಡೂ ಬದಿಯಲ್ಲಿ ಬಿಳಿ ಅಥವಾ ಕಣ್ಣಿಗೆ ಎದ್ದುಕಾಣುವ ಯಾವುದಾದರೂ ಬಣ್ಣದ ಬಾವುಟಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಅನಾಹುತಗಳನ್ನು ತಪ್ಪಿಸಬಹುದು’ ಎಂದು ಹೆಸರು ಹೇಳಲಿಚ್ಛಿಸದ ಉನ್ನತ ಅಧಿಕಾರಿಯೊಬ್ಬರು
ಮಾಹಿತಿ ನೀಡಿದರು. “ಈ ಕ್ರಮದಿಂದ ವಾಹನ ಹಿಂದಿಕ್ಕುವವರು ಅಥವಾ ಮುಂದೆ ಬರುವ ವಾಹನಗಳು ಕನಿಷ್ಠ ಆ ಬಾವುಟಗಳಷ್ಟು ಅಂತರ ಕಾಯ್ದುಕೊಳ್ಳಲು ಅನುಕೂಲ ಆಗುತ್ತದೆ. ಈ ಕುರಿತು ಚರ್ಚೆ ನಡೆದಿದೆ’ ಎಂದು ಮೂಲಗಳು ತಿಳಿಸಿವೆ.

ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.