ಡೊರಾಂಡಾ ಖಜಾನೆ ಪ್ರಕರಣ; ಲಾಲುಪ್ರಸಾದ್ ಯಾದವ್ ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು
ಸಿಬಿಐ ವಿಶೇಷ ಕೋರ್ಟ್ ಲಾಲು ಪ್ರಸಾದ್ ಯಾದವ್ ಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು.
Team Udayavani, Apr 22, 2022, 4:32 PM IST
ನವದೆಹಲಿ: ಡೊರಾಂಡಾ ಖಜಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 23) ಜಾಮೀನು ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.
ಡೊರಾಂಡಾ ಖಜಾನೆ ಪ್ರಕರಣದಲ್ಲಿ ಸಿಬಿಐ ವಿಶೇಷ ಕೋರ್ಟ್ ಲಾಲು ಪ್ರಸಾದ್ ಯಾದವ್ ಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. ಮೇವು ಹಗರಣದಲ್ಲಿ ಶಾಮೀಲಾಗಿದ್ದ ಲಾಲು ಪ್ರಸಾದ್ ಯಾದವ್ ಡೊರಾಂಡಾ ಖಜಾನೆಯಿಂದ 139 ಕೋಟಿಗೂ ಅಧಿಕ ಹಣವನ್ನು ಕಾನೂನು ಬಾಹಿರವಾಗಿ ಬಳಸಿಕೊಂಡ ಪ್ರಕರಣದಲ್ಲಿ ದೋಷಿ ಎಂದು ಸಿಬಿಐ ಕೋರ್ಟ್ ಫೆಬ್ರುವರಿಯಲ್ಲಿ ತೀರ್ಪು ನೀಡಿತ್ತು.
ಅನಾರೋಗ್ಯಕ್ಕೊಳಗಾಗಿರು ಲಾಲುಪ್ರಸಾದ್ ಯಾದವ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಬೇಕೆಂಬ ನಮ್ಮ ಮನವಿಯನ್ನು ಜಾರ್ಖಂಡ್ ಹೈಕೋರ್ಟ್ ಸ್ವೀಕರಿಸಿದ್ದು, ಜಾಮೀನು ಮಂಜೂರು ಮಾಡಿದೆ. ಲಾಲು ಪ್ರಸಾದ್ ಅವರು ಈಗಾಗಲೇ 41 ತಿಂಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದು, ಜಾಮೀನು ಮಂಜೂರು ಮಾಡಬೇಕೆಂದು ಮನವಿ ಮಾಡಿಕೊಂಡಿರುವುದಾಗಿ ಲಾಲು ಪ್ರಸಾದ್ ಪರ ವಕೀಲರಾದ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ಮೇವು ಹಗರಣದಲ್ಲಿ ಲಾಲು ಪ್ರಸಾದ್ ವಿರುದ್ಧದ ಐದನೇ ಹಾಗೂ ಅಂತಿಮ ಪ್ರಕರಣವಾದ 139 ಕೋಟಿ ರೂಪಾಯಿಯ ಡೊರಾಂಡಾ ಖಚಾನೆ ವಂಚನೆ ಪ್ರಕರಣದಲ್ಲಿ ಸಿಬಿಐ ರಾಂಚಿಯ ಸಿಬಿಐ ಕೋರ್ಟ್ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿ, 60 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…