ಆರೋಗ್ಯವಂತ ವ್ಯಕ್ತಿ ದೇಶದ ಸಂಪತ್ತು

ಜಿಲ್ಲೆಯ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಮೇಳ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

Team Udayavani, Apr 22, 2022, 5:01 PM IST

23

ಸವಣೂರು: ಆರೋಗ್ಯವಂತ ವ್ಯಕ್ತಿ ದೇಶದ ಸದೃಢ ಸಂಪತ್ತು. ಆದ್ದರಿಂದ, ಒಂದೇ ಸೂರಿನಡಿ ಜನರಿಗೆ ಆರೋಗ್ಯ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದ ಮೇರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ತಾಲೂಕು ಆಸ್ಪತ್ರೆ ಸವಣೂರ ಹಾಗೂ ಎಸ್‌ಡಿಎಂ ನಾರಾಯಣ ಹಾರ್ಟ್‌ ಸೆಂಟರ್‌ ಧಾರವಾಡ, ಜೆಸಿಐ ನಮ್ಮ ಸವಣೂರು ಸಹಯೋಗದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ ರೂಪಾಂತರಿ 4ನೇ ಅಲೆಯೊಂದಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅವಶ್ಯಕವಾಗಿದೆ. ತಾಲೂಕಿಗೆ 100 ಹಾಸಿಗೆ ಹೆಚ್ಚುವರಿ ಆಸ್ಪತ್ರೆ ಮಂಜೂರಾಗಿದ್ದು, ಸ್ಥಳ ಗುರುತಿಸಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು. ಎಲ್ಲರಿಗೂ ಆರೋಗ್ಯ ನೀಡುವ ದೃಷ್ಟಿಯಿಂದ, ಆರೋಗ್ಯ ಮೇಳದಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಿದಲ್ಲಿ ಮತ್ತೂಂದು ಬಾರಿ ಆರೋಗ್ಯ ಮೇಳ ಕೈಗೊಳ್ಳಲಾಗುವುದು ಎಂದು ಹೇಳಿದರು.

ಡಿಎಚ್‌ಒ ಡಾ| ರಾಘವೇಂದ್ರಸ್ವಾಮಿ ಎಚ್‌.ಎಸ್‌. ಮಾತನಾಡಿದರು. ಟಿಎಚ್‌ಒ ಡಾ|ಚಂದ್ರಕಲಾ ಜೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅಧ್ಯಕ್ಷತೆ ವಹಿಸಿದ್ದರು.

ವೀರಯ್ಯ ಸಂಕೀನಮಠ ಹಾಗೂ ಸಂಗಡಿಗರಿಂದ ಹಮ್ಮಿಕೊಳ್ಳುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೇಟಿ ಬಚಾವೋ, ಬೇಟಿ ಪಡಾವೋ ಜನ ಜಾಗೃತಿ ಬೀದಿ ನಾಟಕಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಚಾಲನೆ ನೀಡಿದರು.

ಆರೋಗ್ಯ ಮೇಳದಲ್ಲಿ ವಿವಿಧ ರೋಗಗಳಿಗಾಗಿ 1528 ಮಂದಿ ಚಿಕಿತ್ಸೆ ಪಡೆದರು. ಜೆಸಿಐ ನಮ್ಮ ಸವಣೂರು ಘಟಕ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪೊಲೀಸ್‌ ಸಿಬ್ಬಂದಿ ವಿನಾಯಕ ಚಿನ್ನೂರ 25ನೇ ಬಾರಿ, ಶ್ರೀನಿವಾಸ ವೆಂಕಣ್ಣನವರ 9ನೇ ಬಾರಿ, ಬಿಜೆಪಿ ತಾಲೂಕು ಅಧ್ಯಕ್ಷ ಗಂಗಾಧರ ಬಾಣದ, ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ 19 ಜನರು ರಕ್ತದಾನ ಮಾಡಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಗಂಗಾಧರ ಬಾಣದ, ತಹಶೀಲ್ದಾರ್‌ ಅನಿಲಕುಮಾರ ಜಿ., ಐಎಂಎ ತಾಲೂಕು ಘಟಕದ ಅಧ್ಯಕ್ಷ ಡಾ|ಪ್ರವೀಣ ಸಿಂಧೂರ, ಜಿಲ್ಲಾ ಮಾನಸಿಕ ತಜ್ಞ ಡಾ|ವಿಜಯಕುಮಾರ ಬಳಿಗಾರ, ತಾಪಂ ಇಒ ಮುನಿಯಪ್ಪ ಪಿ., ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|ಶಂಕರಗೌಡ ಹಿರೇಗೌಡ್ರ, ಜೆಸಿಐ ನಮ್ಮ ಸವಣೂರು ಘಟಕದ ಅಧ್ಯಕ್ಷ ಪರಶುರಾಮ ಹೊಳಲ, ಪದಾಧಿಕಾರಿಗಳು ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.