ಶಾಸಕ ಸ್ಥಾನಕ್ಕೆ ಗಂಗಾಧರ್‌ ಬಹುಜನ್‌ಗೆ ಬೇಷರತ್‌ ಬೆಂಬಲ


Team Udayavani, Apr 23, 2022, 3:31 PM IST

Untitled-1

ಬೇಲೂರು: ತಾಲೂಕಿನ ಹಳೇಬೀಡು ಹೋಬಳಿ ಪೊನ್ನಾಥಪುರ ಗ್ರಾಮದಲ್ಲಿ ಡಾ. ಅಂಬೇಡ್ಕರ್‌ ಅವರ 131ನೇ ಜಯಂತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಳ್ಳಿ ಸುರೇಶ್‌, ಇತ್ತೀಚೆಗೆ ಚರ್ಚೆಯಲ್ಲಿರುವ ವಿಷಯ ಪ್ರಸ್ತಾಪಿಸಿ ಜಿಲ್ಲೆಯಲ್ಲಿ ಗಂಗಾಧರ್‌ ಬಹುಜನ್‌ ಒಬ್ಬ ಪ್ರಾಮಾಣಿಕ ಹೋರಾಟಗಾರ.

ಪ್ರಗತಿಪರ ಚಿಂತಕರಾಗಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜ್ಯ ನಾಯಕರಾದ ಇವರು ಈ ಹಿಂದೆ ಬೇಲೂರು ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದರೂ ಸಹ ಶೋಷಿತರು, ರೈತರು ಮತ್ತು ಮಹಿಳೆಯರ ಪರ ಹೋರಾಟ ಮುಂದುವರೆಸಿದ್ದಾರೆ. ಇವರಿಗೆ ಕ್ಷೇತ್ರದ ಸಮಸ್ಯೆ ಬಗ್ಗೆ ಆಳವಾದ ಅರಿವಿದೆ.

ಬೇಷರತ್‌ ಬೆಂಬಲಿಸುತ್ತೇನೆ: ದಲಿತ ಸಮುದಾಯಗಳ ಮತ ಸೆಳೆಯುವ ಸಲುವಾಗಿ ಬೇಲೂರು ಕ್ಷೇತ್ರದ ಹಾಲಿ ಶಾಸಕ ಕೆ.ಎಸ್‌. ಲಿಂಗೇಶ್‌ ಗಂಗಾಧರ್‌ ಬಹುಜನ್‌ ಅವರಿಗೆ ಓಟು ಕೊಟ್ಟು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ಕೇವಲ ಅನುಕಂಪದ ಮಾತುಗಳನ್ನಾಡಿದರೆ ಸಾಲದು. ನಿಜವಾಗಿಯೂ ಈ ಕ್ಷೇತ್ರ ಶಾಸಕರಿಗೆ ಗಂಗಾಧರ್‌ ಬಗ್ಗೆ ಕಾಳಜಿ ಇದ್ದರೆ ಈ ಬಾರಿ ಚುನಾವಣೆ ಯಲ್ಲಿ ಶಾಸ ಕರು ಗಂಗಾಧರ್‌ ಬಹು ಜನ್‌ ವಿರುದ್ಧ ವಾಗಿ ಅಭ್ಯರ್ಥಿ ಹಾಕದೇ ಬೆಂಬಲಿಸುವುದಾದರೆ ನಾನೂ ಕೂಡ ಸ್ಪರ್ಧಿಸದೇ ಗಂಗಾಧರ್‌ ಅವರನ್ನು ಬೆಂಬಲಿಸಲು ಸಿದ್ಧ ಎಂದು ಸವಾಲು ಹಾಕಿದರು.

ಸ್ವ ಕ್ಷೇತ್ರದವರನ್ನೇ ಕೈ ಹಿಡಿಯಿರಿ: ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬೇಲೂರು ಕ್ಷೇತ್ರದ ಶಾಸಕರಾದ ಲಿಂಗೇಶ್‌ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾ ಡುತ್ತಾ ಮುಂದಿನ ಚುನಾವಣೆಯಲ್ಲಿ ನನ್ನ ಕೆಲಸ ನೋಡಿ ನನಗೆ ಮತಕೊಡಿ. ಇಲ್ಲವಾದರೆ ಗಂಗಾಧರ್‌ ಬಹುಜನ್‌ ಸ್ಥಳೀಯರಾಗಿದ್ದಾರೆ. ಮತ್ತು ಸದಾಕಾಲ ಜನರ ಸಮಸ್ಯೆ ಪರಿಹಾರಕ್ಕಾಗಿ ಟೊಂಕಕಟ್ಟಿ ನಿಂತಿರುವ ಹೋರಾಟಗಾರ. ಇವರಿಗೆ ಓಟು ಕೊಟ್ಟು ಗೆಲ್ಲಿಸಿ ಬೇಲೂರು ಕ್ಷೇತ್ರ ದಲ್ಲಿ ಶಾಸಕರಾಗಿ ಮಾಡೋಣ. ಯಾವುದೇ ಕಾರಣಕ್ಕೂ ಬೇರೆ ಕ್ಷೇತ್ರದಿಂದ ಬರುವ ಅಭ್ಯರ್ಥಿಗಳಿಗೆ ಮಣೆ ಹಾಕು ವುದು ಬೇಡ ಎಂದು ಹೇಳಿದರು.

ಶಾಸಕರಿಗೆ ಸುರೇಶ್‌ ಸವಾಲು: ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್‌ ಆಗಿ ತಾಲೂಕು ಮತ್ತು ಜಿಲ್ಲೆಯಾ ದ್ಯಂತ ಸಾಕಷ್ಟು ಚರ್ಚೆ ಆಗುತ್ತಿರುವ ಹಿನ್ನೆಲೆ ಹುಲ್ಲಳ್ಳಿ ಸುರೇಶ್‌ ಈ ಸವಾಲು ಹಾಕಿದರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯ ದರ್ಶಿ ಗಂಗಾಧರ್‌ ಬಹುಜನ್‌ ಅವರು ಅಂಬೇಡ್ಕರ್‌ ಅವರ ಬಗ್ಗೆ ಉಪನ್ಯಾಸ ನೀಡಿದರು.

ಸಭೆಯಲ್ಲಿ ಬಿಜೆಪಿ ಮುಖಂಡರಾದ ಕೊರಟಗೆರೆ ಪ್ರಕಾಶ್‌, ಸಂತೋಷ್‌ ಕೆಂಚಾಂಬ, ಎನ್‌.ಯೋಗೇಶ್‌, ಮಲ್ಲಿಕಾರ್ಜುನ, ಪತ್ರಕರ್ತರಾದ ದಿನೇಶ್‌ ಬೆಳ್ಳಾವರ, ಶಿಕ್ಷಕರಾದ ಹುಲಿಯಪ್ಪ, ಮಲ್ಲೇಶ್‌, ಮುಖಂಡರಾದ ಯೋಗೇಶ್‌, ಕೇಶವಯ್ಯ, ಮಂಜುನಾಥ್‌, ಯತೀಶ್‌, ಟೈ ಕುಮಾರ್‌ ಸೇರಿದಂತೆ ಅಂಬೇಡ್ಕರ್‌ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.