ಚಿಲ್ಲರೆ ಜನರಿಗೆ ನಾನು ಉತ್ತರ ಕೊಡುವುದಿಲ್ಲ: ಎಂಸಿಎಸ್‌

ಡ್ರಗ್ಸ್‌, ಮಾದಕ ವಸ್ತುಗಳು ನಗರದಲ್ಲಿ ಯಥೇಚ್ಛವಾಗಿ ಬಳಕೆಯಾಗುತ್ತಿದೆ.

Team Udayavani, Apr 23, 2022, 5:52 PM IST

ಚಿಲ್ಲರೆ ಜನರಿಗೆ ನಾನು ಉತ್ತರ ಕೊಡುವುದಿಲ್ಲ: ಎಂಸಿಎಸ್‌

ಚಿಂತಾಮಣಿ: ತಾಲೂಕಿನ ಎಲ್ಲಾ ಇಲಾಖೆಗಳು ಜನರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವಲ್ಲಿ ಫ‌ಲವಾಗಿವೆ. ಈ ಕುರಿತು ಇಷ್ಟೂ ದಿನಗಳ ಕಾಲ ನಾನು ಮಾತನಾಡದೆ ನಿಶ್ಯಬ್ಧವಾಗಿದ್ದೆ, ಆದರೂ ನಮ್ಮ ಮಾತುಗಳಿಗೆ ಅವೈಜ್ಞಾನಿಕವಾಗಿ ಕೆಲವರು ಪ್ರತಿಕ್ರಿಯೆ ನೀಡುತ್ತಾರೆ. ಅಂತಹ ಚಿಲ್ಲರೆ ಜನರಿಗೆ ನಾನು ಉತ್ತರ ಕೊಡಲಾರೆ ಎಂದು ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್‌ ಅಭಿಪ್ರಾಯಪಟ್ಟರು.

ಅವರು ನಗರದ ತಮ್ಮ ನಿವಾಸದಲ್ಲಿ ಮಲಿಕ್‌ ಮತ್ತು ದಾದಾಪೀರ್‌ ನೇತೃತ್ವದಲ್ಲಿ ಜೆಡಿಎಸ್‌ ಪಕ್ಷವನ್ನು ತೊರೆದು ತಮ್ಮ ಬಣಕ್ಕೆ ಬಂದ ಹಲವು ಯುವಕರನ್ನು ಸ್ವಾಗತಿಸಿದರು. ಇನ್ನು ನಗರದಲ್ಲಿ ಹಲವು ದೂರುಗಳು ಬಂದಿವೆ. ಡ್ರಗ್ಸ್‌, ಮಾದಕ ವಸ್ತುಗಳು ನಗರದಲ್ಲಿ ಯಥೇಚ್ಛವಾಗಿ ಬಳಕೆಯಾಗುತ್ತಿದೆ. ಇದನ್ನು ತಡೆಯುವಲ್ಲಿ ಪೊಲೀಸ್‌ ಇಲಾಖೆ ಫ‌ಲವಾಗಿದೆ. ಇನ್ನಾದರೂ ಪೊಲೀಸರು ಕೃತ್ಯಗಳು ಜರುಗದಂತೆ ತಡೆಯಬೇಕು ಎಂದರು.

ತಾಲೂಕಿನಲ್ಲಿ ಇರುವ ವಿವಿಧ ಇಲಾಖೆಗಳಿಗೆ ಪ್ರಾಮಾಣಿಕ ಅಧಿಕಾರಿ ಗಳು ಬರುತ್ತಿಲ್ಲ. ಇಲ್ಲಿಗೆ ಬರುತ್ತಿರುವ ಅಧಿಕಾರಿಗಳು ಕೇವಲ ಹಣದ ಆಸೆಗೆ ಬರುತ್ತಿದ್ದಾರೆ. ಇಂತಹ ಅಧಿಕಾರಿಗಳಿಂದ ಜನಪರ ಕೆಲಸಗಳನ್ನು ಆಪೇಕ್ಷಿಸುವುದು ಹೇಗೆ. ನಗರ ಸೇರಿದಂತೆ ತಾಲೂಕಿನ ಸಮ ಸ್ಯೆಗಳ ಬಗ್ಗೆ ಸಂಬಂಧಿಸಿದ ಇಲಾ ಖೆಯ ಅಧಿಕಾರಿಗಳಿಗೆ ತಿಳಿಸಿದರೂ ಅವರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಇನ್ನು ಶಾಸಕರು ತಾಲೂಕಿನ ಸಮಸ್ಯೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅವರು ಚುನಾವಣೆಯ ಹಿಂದಿನ ದಿನ ಮಾತ್ರ ಕ್ಷೇತ್ರದ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಾರೆ. ಉಳಿದಂತೆ ಸಮಸ್ಯೆಗಳ ಬಗ್ಗೆ ತಲೆ ಕೆಡಿಸಿಕೊಳ್ಳತ್ತಿಲ್ಲ. ಅವರು 9 ವರ್ಷಗಳ ಶಾಸಕರಾಗಿ ಅವರ ಸಾಧನೆಗಳೇನು ಎಂಬುದನ್ನು ಅವರೇ ತಿಳಿಸಬೇಕು ಎಂದರು.

ಅವೈಜ್ಞಾನಿಕ ಕಾಮಗಾರಿಗಳಿಗೆ ಜನರ ಹಣ ಪೋಲು ಮಾಡುವುದು. ಕಡಿಮೆ ವೆಚ್ಚದಲ್ಲಿ ವೈಜ್ಞಾನಿಕವಾಗಿ ಜನರಿಗೆ ಸುಲಭಕ್ಕೆ ದೊರಕಿಸಬಹುದಾದ ಯೋಜನೆಗಳಿಗೆ ಕೋಟ್ಯಂತರ ರೂ. ವ್ಯಯಿಸುತ್ತಿದ್ದಾರೆ. ಇನ್ನು ಇತ್ತೀಚೆಗೆ ಎಂಜಿ ರಸ್ತೆಯ ಅಗಲೀಕರಣಕ್ಕೆ ಅಂಗಡಿ ಮಾಲಿಕರಿಗೆ ನೋಟಿಸ್‌ ಕೊಟ್ಟು ಅಂಗಡಿಗಳಿಗೆ ಗುರುತು ಹಾಕಿದ್ದಾರೆ ಎಂಬುದು ತಿಳಿದು ಬಂದಿದೆ. ಆದರೆ ಪ್ರಾರಂಭದಲ್ಲಿಯೇ ಲೋಕೋಪಯೋಗಿ ಇಲಾಖೆ ಮತ್ತು ಅಂಗಡಿ ಮಾಲಿಕರ ನಡುವೆ ಮಾತುಕತೆ
ನಡೆದು ಕೆಲವು ಅಂಗಡಿಗಳನ್ನು ಸ್ವಯಂಪ್ರೇರಿತರಾಗಿ ಬಿಟ್ಟುಕೊಟ್ಟಿದ್ದಾರೆ. ಆದರೂ ಅಂತವರಿಗೂ ನೋಟೀಸ್‌ ನೀಡಿದ್ದಾರೆ ಎಂದರು.

ಜೆಡಿಎಸ್‌ ಮುಖಂಡ ಮಲ್ಲಿಕ್‌ ಮತ್ತು ದಾದಾ ಪೀರ್‌ ನೇತೃತ್ವದಲ್ಲಿ ನಾಗೇಂದ್ರಕುಮಾರ್‌, ನವಾಬ್‌, ಫ‌ರ್ಹಾನ್‌, ತಾರ್‌, ಸಂದೀಪ್‌, ಚೋಟು ಸೇರಿದಂತೆ ಹಲವರು ಸೇರ್ಪಡೆಯಾದರು. ನಗರಸಭಾ ಸದಸ್ಯ ಎಂ.ಹರೀಶ್‌, ಮುಖಂಡ ಉಮೇಶ್‌, ಶೇಷಾರೆಡ್ಡಿ, ಅಮೂನ್‌ ಖಾನ್‌, ಮಹಬೂಬ್‌ ಸಾಬ್‌, ಇಂತಿಯಾಜ್‌ಪಾಶಾ, ಖಾದರ್‌ಸಾಬ್‌, ನವಾಬ್‌ ಸಾಬ್‌, ಸನ್ನೂಖಾನ್‌, ಅಬ್ದುಲ್‌ಸಮದ್‌, ಖೀಜರ್‌ ಪಾಶಾ, ನಾರಾಯಣಸ್ವಾಮಿ, ಎಜಾಜ್‌ಪಾಶಾ, ಸರ್ದಾರ್‌ ಪಾಷಾ, ಪರೂಕ್‌ ಅಹಮ್ಮದ್‌, ಚಿನ್ನಸಂದ್ರ ಬಾಬು ಇತರರಿದ್ದರು.

ಟಾಪ್ ನ್ಯೂಸ್

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.