ದಿಲ್‌ಕುಶ್‌ ದ್ರಾಕ್ಷಿ ಬೆಳೆಯಿಂದ ಉತ್ತಮ ಲಾಭ; ‌ಸರ್ಕಾರದಿಂದಲೂ ಅನುದಾನ ವ್ಯವಸ್ಥೆ

ಈ ವರ್ಷದಷ್ಟು ಉತ್ತಮ ಇಳುವರಿ ಹಾಗೂ ಹೆಚ್ಚಿನ ಬೆಲೆ ಯಾವ ವರ್ಷವೂ ಬಂದಿರಲಿಲ್ಲ.

Team Udayavani, Apr 23, 2022, 5:59 PM IST

ದಿಲ್‌ಕುಶ್‌ ದ್ರಾಕ್ಷಿ ಬೆಳೆಯಿಂದ ಉತ್ತಮ ಲಾಭ; ‌ಸರ್ಕಾರದಿಂದಲೂ ಅನುದಾನ ವ್ಯವಸ್ಥೆ

ಗೌರಿಬಿದನೂರು: ತಾಲೂಕಿನ ಡಿ.ಪಾಳ್ಯ ಹೋಬಳಿ ಸಾರಗೊಂಡ್ಲು ಗ್ರಾಮದ ಪ್ರಗತಿಪರ ರೈತ ಗಂಗರೆಡ್ಡಿ ದಿಲ್‌ಖುಷ್‌ ದ್ರಾಕ್ಷಿಬೆಳೆಯಲ್ಲಿ ಉತ್ತಮ ಫ‌ಸಲನ್ನು ಪಡೆದಿದ್ದು ಉತ್ತಮ ಲಾಭ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ದಿಲ್‌ ಕುಶ್‌, ದ್ರಾಕ್ಷಿ ಪ್ರತಿ ಕೆ.ಜಿ.ಗೆ ದ್ರಾಕ್ಷಿ 30- 34 ರೂ.ಗೆ ಹೋಲ್‌ಸೇಲ್‌ ಬೆಲೆಯಲ್ಲಿ ಮಾರಾಟವಾಗು ತ್ತಿದೆ. ಮಣ್ಣಿನ ಗುಣ ಹಾಗೂ ವಿಶಿಷ್ಟ ಹವಾಮಾನ ದಿಂದಾಗಿ ಇಲ್ಲಿ ಬೆಳೆವ ದಿಲ್‌ಖುಷ್‌ ದ್ರಾಕ್ಷಿ ಸ್ವಾದಿಷ್ಟವಾ ಗಿದೆ. ಅಷ್ಟು ಹುಳಿಯೂ ಅಲ್ಲದ ಸಿಹಿ ಸಿಹಿಯಾಗಿರುವ ಈ ದ್ರಾಕ್ಷಿಗೆ ಬೇರೆ ರಾಜ್ಯಗಳಲ್ಲಿ ಉತ್ತಮ ಬೇಡಿಕೆ ಇದೆ ಹೆಚ್ಚಿನ ಮುತುವರ್ಜಿಯಿಂದ ಬೆಳೆ ಯನ್ನು ನಿರ್ವಹಣೆ ಮಾಡಿರುವುದರಿಂದ ಈ ಬಾರಿ ಉತ್ತಮ ಆದಾಯ ಬಂದಿದೆ ಎಂದಿದ್ದಾರೆ.

ಎರಡು ವರ್ಷದಿಂದ ಕೊರೊನಾದಿಂದ ಬೆಳೆದ ಬೆಳೆಗೆ ಬೆಲೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸಿದ್ದೆವು. ಈ ವರ್ಷ ಸಹಜವಾಗಿ ಬೇಡಿಕೆ ಹೆಚ್ಚಾಗಿದೆ. ಜತೆಗೆ ಉಷ್ಣಾಂಶದಿಂದಾಗಿ ಬೆಳೆಗಳು ಸರಿಯಾಗಿ ಆಗದೆ ಇರುವುದರ ಪರಿಣಾಮವಾಗಿ ದ್ರಾಕ್ಷಿಯ ಬೆಲೆ ಗಗನಕ್ಕೇರಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ತಾಲೂಕಿನ ಡಿ.ಪಾಳ್ಯ ಹೋಬಳಿ ಸಾರಗೊಂಡ್ಲು ಗ್ರಾಮದ ರೈತ ಗಂಗರೆಡ್ಡಿ ದ್ರಾಕ್ಷಿಬೆಳೆಯನ್ನು ಸವಾಲಾಗಿ ಸ್ವೀಕರಿಸಿ ಕಳೆದ 5ವರ್ಷದಿಂದ ಉತ್ತಮ ಬೆಳೆಯನ್ನು ಬೆಳೆಯುತ್ತಿದ್ದಾರೆ ಎಂದರು. ಗುಣಮಟ್ಟ ಹಾಗೂ ಬೇಡಿಕೆ ಹೆಚ್ಚಾಗಿರುವುದರಿಂದ ವ್ಯಾಪಾರಸ್ಥರೇ ತೋಟಕ್ಕೆ ಬಂದು ಹಣ ಪಾವತಿಸಿ ಕಟಾವು ಮಾಡಿಕೊಂಡು ಹೋಗುತ್ತಿದ್ದಾರೆ. ಸರಿಯಾಗಿ ನಿರ್ವಹಣೆ ಮಾಡಿದರೆ 15 ರಿಂದ 20ವರ್ಷ ದ್ರಾಕ್ಷಿಯ ಬೆಳೆಯನ್ನು ಬೆಳೆಯಬಹುದು. ಇಲ್ಲಿನ ದ್ರಾಕ್ಷಿಗೆ ವಿವಿಧ ರಾಜ್ಯಗಳಿಂದ ಬೇಡಿಕೆಯಿದೆ. ಹೆಚ್ಚಾಗಿ ಕೇರಳ, ತಮಿಳುನಾಡು, ರಾಜಾಸ್ತಾನ, ದೆಹಲಿ, ಮುಂಬೈಗೆ ರಪ್ತಾಗುತ್ತದೆ ಎಂದು ರೈತ ಗಂಗರೆಡ್ಡಿ ತಿಳಿಸಿದರು.

16 ಲಕ್ಷ ಆದಾಯ
5 ವರ್ಷಗಳಿಂದ ದ್ರಾಕ್ಷಿ ಬೆಳೆಯುತ್ತಿದ್ದೇವೆ ನಮಗೆ ನಷ್ಟವೆಂಬುದೇ ಇಲ್ಲ ಇದಕ್ಕೆ ಕಾರಣ ಇದರ ನಿರ್ವಹಣೆಯನ್ನು ವೈಜ್ಞಾನಿಕವಾಗಿ ಮಾಡುತ್ತೇವೆ. 2017ರಲ್ಲಿ 4 ಎಕರೆಗೆ ದ್ರಾಕ್ಷಿ ಗಿಡಗಳನ್ನು ನಾಟಿ ಮಾಡಿದ್ದು ಕೂಲಿಗೆ 1ಲಕ್ಷ ಔಷಧಿ, ಬೇವಿನ ಹಿಂಡಿ, ಕಡಲೆಹಿಂಡಿ, ಹೊಂಗೆ ಹಿಂಡಿ ಕೊಟ್ಟಿಗೆ ಗೊಬ್ಬರ 20ಟನ್‌, ಇದಕ್ಕೆ ಬರುವ ಬೂದಿರೋಗ(ರೆಡ್‌ ಮೆಟ್ಸ್‌ ರೋಗ) ನಿರ್ವಹಣೆಗೆ ವೆಚ್ಚ, ದ್ರಾಕ್ಷಿಗೊನೆಯನ್ನು ಕಟ್ಟಿಸುವುದು, ಚಿಗುರು ಕೀಳು ವುದು ಸೇರಿ 4ಲಕ್ಷವನ್ನು ವೆಚ್ಚ ಮಾಡಲಾಗಿದೆ 16ಲಕ್ಷ ಆದಾಯ ಬಂದಿದೆ ಎಂದರು. ಈ ವರ್ಷದಷ್ಟು ಉತ್ತಮ ಇಳುವರಿ ಹಾಗೂ ಹೆಚ್ಚಿನ ಬೆಲೆ ಯಾವ ವರ್ಷವೂ ಬಂದಿರಲಿಲ್ಲ. ಈ ಋತುವಿನಲ್ಲಿ ಅಲ್ಪಪ್ರಮಾಣದ ರೈತರು ಮಾತ್ರವೇ ದ್ರಾಕ್ಷಿ ಇಟ್ಟುಕೊಂಡಿದ್ದಾರೆ. ಸರ್ಕಾರ ವೈಜ್ಞಾನಿಕವಾಗಿ ಮಾರುಕಟ್ಟೆಯ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಗಂಗರೆಡ್ಡಿ ಒತ್ತಾಯಿಸಿದರು.

ದಾಕ್ಷಿ ಬೆಳೆಗೆ ನರೇಗಾದಿಂದ ಅನುದಾನ
ಗೌರಿಬಿದನೂರು ತಾಲೂಕಿನಲ್ಲಿ ಸುಮಾರು 65 ಹೆಕ್ಟೇರ್‌ನಲ್ಲಿ ವಿವಿಧ ತಳಿಯ ದ್ರಾಕ್ಷಿಯನ್ನು ಬೆಳೆಯುತ್ತಿದ್ದಾರೆ ಹೆಚ್ಚಾಗಿ ಮಂಚೇನಹಳ್ಳಿ ಹೋಬಳಿಯಲ್ಲಿ ದ್ರಾಕ್ಷಿಯನ್ನು ಬೆಳೆಯುತ್ತಾರೆ. ದ್ರಾಕ್ಷಿಬೆಳೆಗೆ ಬಂಡವಾಳ ಹೆಚ್ಚಿಗೆ ಹೂಡಬೇಕು ಹಾಗೂ ನಿರ್ವಹಣೆ ಕಷ್ಟ ಎಂಬ ಕಾರಣದಿಂದ ಈ ತಾಲೂಕಿನ ರೈತರು ದ್ರಾಕ್ಷಿ ಬೆಳೆಗೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ. ತೋಟಗಾರಿಕೆ ಇಲಾಖೆಯಿಂದ ದ್ರಾಕ್ಷಿಬೆಳೆ ಪ್ರಾರಂಭಿಸಲು ನರೇಗಾದಿಂದ ಅನುದಾನ ನೀಡಲಾಗುತ್ತಿದ್ದು, ರೈತರು ಇದರ ಲಾಭವನ್ನು ಪಡೆದು ಹೆಚ್ಚು ದ್ರಾಕ್ಷಿಬೆಳೆ ಬೆಳೆಯಬೇಕು ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌ ತಿಳಿಸಿದರು.

*ವಿ.ಡಿ.ಗಣೇಶ್ ಗೌರಿಬಿದನೂರು

ಟಾಪ್ ನ್ಯೂಸ್

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.