ದೇಹದ “ವಿಷ’ಕ್ಕೆ ರಕ್ತದಾನವೇ ರಾಮಬಾಣ!

ರಕ್ತದಾನದಿಂದಾಗಿ ಶರೀರದಲ್ಲಿರುವ "ಸರ್ವಕಾಲಿಕ ರಾಸಾಯನಿಕ'ಗಳು ಮಾಯ

Team Udayavani, Apr 24, 2022, 7:50 AM IST

ದೇಹದ “ವಿಷ’ಕ್ಕೆ ರಕ್ತದಾನವೇ ರಾಮಬಾಣ!

ಲಂಡನ್‌: ಗಾಳಿ, ನೀರು, ಆಹಾರ… ಹೀಗೆ ಬೇರೆ ಬೇರೆ ರೀತಿಯಿಂದ ದೇಹವನ್ನು ಪ್ರವೇಶಿಸುವ “ಸರ್ವಕಾಲಿಕ ರಾಸಾಯನಿಕ’ಗಳಿಂದ ಮನುಷ್ಯನಿಗೆ ಮುಕ್ತಿಯಿಲ್ಲವೇ?

ಹಲವಾರು ವರ್ಷಗಳಿಂದ ಕಾಡುತ್ತಿದ್ದ ಈ ಪ್ರಶ್ನೆಗೆ ಈಗ “ಖಂಡಿತಾ ಇದೆ’ ಎಂಬ ಉತ್ತರ ಸಿಕ್ಕಿದೆ. ನಮ್ಮ ದೇಹದಲ್ಲೇ “ಸದಾಕಾಲ ಇರುವ’ ಈ ವಿಷಕಾರಿ ರಾಸಾಯನಿಕಗಳಿಂದ ಮುಕ್ತಿ ಪಡೆಯಲು ಇರುವ ಏಕೈಕ ದಾರಿಯೆಂದರೆ “ರಕ್ತದಾನ’ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ!

ಹೌದು, ನಿಯಮಿತವಾಗಿ ರಕ್ತದಾನ ಮಾಡುತ್ತಿದ್ದರೆ ಮನುಷ್ಯನ ರಕ್ತನಾಳಗಳು ಸ್ವಚ್ಛವಾಗಿ, ಈ ಫಾರೆವರ್‌ ಕೆಮಿಕಲ್ಸ್‌ನಿಂದ ಮುಕ್ತವಾಗುತ್ತವೆ ಎಂಬ ಮಹತ್ವದ ಅಂಶವನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಈ ಸಂಶೋಧನೆಯ ವರದಿಯು “ಜಾಮಾ ನೆಟ್‌ವರ್ಕ್‌ ಓಪನ್‌’ ಎಂಬ ಸಂಶೋಧನಾ ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿದೆ.

ಯಾರ ಮೇಲೆ ಅಧ್ಯಯನ?
ಸಾಮಾನ್ಯ ಜನರಿಗಿಂತ ಹೆಚ್ಚು ಈ ಪಿಎಫ್ಎಎಸ್‌ಗಳಿಗೆ ಒಡ್ಡಲ್ಪಡುವವರೆಂದರೆ ಅಗ್ನಿಶಾಮಕ ಸಿಬ್ಬಂದಿ. ಹೀಗಾಗಿ, ಆಸ್ಟ್ರೇಲಿಯಾದ 285 ಮಂದಿ ಅಗ್ನಿಶಾಮಕ ಸಿಬ್ಬಂದಿಯನ್ನು ಈ ಅಧ್ಯಯನಕ್ಕೆ ಬಳಸಿಕೊಳ್ಳಲಾಗಿದೆ. ಇವರೆಲ್ಲರೂ ಸುಮಾರು 12 ತಿಂಗಳ ಕಾಲ ರಕ್ತ ಮತ್ತು ಪ್ಲಾಸ್ಮಾ ದಾನ ಮಾಡಿದ್ದರು. ನಿರಂತರವಾಗಿ ರಕ್ತದಾನ ಮಾಡಿದ ಇವರ ದೇಹದಲ್ಲಿ ವಿಷಕಾರಿ ರಾಸಾಯನಿಕದ ಪ್ರಮಾಣ ತಗ್ಗುತ್ತಾ ಹೋಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ವಿಶೇಷವೆಂದರೆ, ರಕ್ತದಾನಕ್ಕಿಂತಲೂ ಪ್ಲಾಸ್ಮಾ ದಾನ ಮಾಡಿದವರ ರಕ್ತನಾಳಗಳಲ್ಲಿ ಕೆಮಿಕಲ್‌ಗ‌ಳ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಇದನ್ನೂ ಓದಿ:ದಿಲ್‌ಕುಶ್‌ ದ್ರಾಕ್ಷಿ ಬೆಳೆಯಿಂದ ಉತ್ತಮ ಲಾಭ; ‌ಸರ್ಕಾರದಿಂದಲೂ ಅನುದಾನ ವ್ಯವಸ್ಥೆ

ಏನಿದು “ಫಾರೆವರ್‌ ಕೆಮಿಕಲ್ಸ್‌’?
“ಫಾರೆವರ್‌ ಕೆಮಿಕಲ್ಸ್‌’ (ಪಿಎಫ್ಎಎಸ್‌) ಎನ್ನುವುದು ಹೆಚ್ಚಾಗಿ ಅಡುಗೆಮನೆಯಲ್ಲಿ ಬಳಸುವ ನಾನ್‌ ಸ್ಟಿಕ್‌ ಪಾತ್ರೆಗಳು, ಜಲ-ನಿರೋಧಕ ವಸ್ತುಗಳು ಮತ್ತು ಇತರೆ ಗೃಹೋಪಯೋಗಿ ವಸ್ತುಗಳಲ್ಲಿ ಕಂಡುಬರುವಂಥ ವಿಷಕಾರಿ ರಾಸಾಯನಿಕ. ಇದು ವಿಭಜನೆಗೊಳ್ಳದ ರಾಸಾಯನಿಕ ಕಣ. ಗಾಳಿ, ನೀರು ಅಥವಾ ಆಹಾರದ ಮೂಲಕ ಈ ರಾಸಾಯನಿಕವು ನಮ್ಮ ಶರೀರದೊಳಕ್ಕೆ ಸೇರಿ ರಕ್ತದೊಳಗೆ ಸಂಗ್ರಹವಾಗುತ್ತದೆ. ಅಲ್ಲದೇ, ಶ್ವಾಸಕೋಶಗಳ ಮೇಲೆ ಪರಿಣಾಮ ಬೀರಿ, ಅಸ್ತಮಾ ಹಾಗೂ ಇತರೆ ಕಾಯಿಲೆಗಳಿಗೆ ಕಾರಣವಾಗುತ್ತದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.