ಮುಂದಿನ ವಾರದಿಂದ ಕೋವಿಡ್‌ ಮಾತ್ರೆ ಲಭ್ಯ?

ಫೈಜರ್‌ನ ಫಾಕ್ಸ್‌ ಲೋವಿಡ್‌ ಮಾತ್ರೆಗಳ ಬಿಡುಗಡೆ ಸಾಧ್ಯತೆ; ಮಾತ್ರೆ ತಯಾರಕ ಹೆಟೆರೋ ಕಂಪೆನಿಗೆ ಡಿಸಿಜಿಐನಿಂದ ಒಪ್ಪಿಗೆ

Team Udayavani, Apr 24, 2022, 7:10 AM IST

thumb-5

ಹೊಸದಿಲ್ಲಿ: ಕೊರೊನಾ ಲಸಿಕೆ ತಯಾರಿಸು­ತ್ತಿರುವ ಫೈಜರ್‌ ಕಂಪೆನಿಯ “ಪಾಕ್ಸ್‌ ಲೋವಿಡ್‌’ ಕೊರೊನಾ ನಿರೋಧಕ ಮಾತ್ರೆ ಮುಂದಿನ ವಾರದಿಂದ ಭಾರತದಲ್ಲಿ ಲಭ್ಯ ವಾಗಲಿದೆಯೆಂದು ಭಾರತದಲ್ಲಿ ಈ ಮಾತ್ರೆ ತಯಾರಿಸಲಿರುವ “ಹೆಟೆರೋ’ ಕಂಪೆನಿ ಪ್ರಕಟಿಸಿದೆ.

ದೇಶದ ಕೆಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿರುವ ಕಾಲದಲ್ಲಿ ಕಂಪನಿಯ ಈ ಶುಭ ಸಮಾಚಾರವನ್ನು ತಿಳಿಸಿದೆ.

ಮಾತ್ರೆಗಳನ್ನು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಔಷಧ ನಿಯಂತ್ರಣ ಮಹಾ ನಿರ್ದೇಶಕರ ಕಚೇರಿ­ಯಿಂದ (ಡಿಸಿಜಿಐ) ಎ. 21ರಂದು ಪತ್ರ ವೊಂದು ಬಂದಿದ್ದು, ಯಾವುದೇ ಸಂದರ್ಭ­ದಲ್ಲಿ ಮಾತ್ರೆಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಪ್ರಾಯಶಃ ಮುಂದಿನ ವಾರದಿಂದ ಇವು ಲಭ್ಯ­ವಾಗಬ ಹುದು ಎಂದು ಕಂಪೆನಿ ತಿಳಿಸಿದೆ. “ಹೆಟೆರೋ’ ದಂತೆ ಇನ್ನೂ ಕೆಲ ಕಂಪೆನಿಗಳು ಕೊರೊನಾ ನಿರೋಧಕ ಔಷಧ ಬಿಡುಗಡೆ ಮಾಡಲು ಸಿದ್ಧವಾಗಿದ್ದು, ಡಿಸಿಜಿಐ ಒಪ್ಪಿಗೆಗಾಗಿ ಕಾಯುತ್ತಿವೆ ಎಂದು ಹೇಳಲಾಗಿದೆ.

ಬೂಸ್ಟರ್‌ ಅಂತರ ಏರಿಕೆ: ಕೊರೊನಾ ಲಸಿಕೆಯ ಬೂಸ್ಟರ್‌ ಡೋಸ್‌ ಅಗತ್ಯತೆ ಮತ್ತು 2ನೇ ಡೋಸ್‌ಗೂ ಬೂಸ್ಟರ್‌ ಡೋಸ್‌ಗೂ ನಡುವಿನ ಅಂತರ ಸೇರಿದಂತೆ ಲಸಿಕೆಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಜೈವಿಕ ತಂತ್ರ­ಜ್ಞಾನ ಇಲಾಖೆಯ “ಟ್ರಾನ್ಸ್‌ಲೇಶನಲ್‌ ಹೆಲ್ತ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ ಇನ್‌ಸ್ಟಿ­ಟ್ಯೂಟ್‌’ (ಟಿಎಚ್‌ಎಸ್‌ಟಿಐ) ಅಧ್ಯಯನ ನಡೆಸುತ್ತಿದೆ.|

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ 13 ಅಕ್ರಮ ರೋಹಿಂಗ್ಯಾ ವಲಸಿಗರ ಬಂಧನ

ಆರಂಭದಲ್ಲಿ, “ಕೊವಿಶೀಲ್ಡ್‌’, “ಕೊವ್ಯಾ­ಕ್ಸಿನ್‌’ ಮತ್ತು “ಸುಟ್ನಿಕ್‌-ವಿ’ ಲಸಿಕೆಗಳ 2ನೇ ಡೋಸ್‌ ಪಡೆದ 3,000ಕ್ಕೂ ಹೆಚ್ಚು ಮಂದಿ ಯ ಸ್ಯಾಂಪಲ್‌ಗ‌ಳನ್ನು ಪಡೆದು, 6 ತಿಂಗಳ ಕಾಲ ಅಧ್ಯಯನ ಮಾಡುವ ಉದ್ದೇಶವನ್ನು ಹೊಂದಲಾಗಿತ್ತು. ಈಗ ಅದನ್ನು 6 ತಿಂಗಳ ಬದಲಾಗಿ 9 ತಿಂಗಳಿಗೆ ವಿಸ್ತರಿಸಿ ಅಧ್ಯಯನ ಕೈಗೊಳ್ಳಲಾ­ಗುತ್ತಿದೆ. ಭಾರತದಲ್ಲಿ ನೀಡಲಾ ಗುತ್ತಿರುವ ಲಸಿಕೆಗಳಿಂದ ಉತ್ಪತ್ತಿಯಾಗಿ ರುವ ಪ್ರತಿಕಾಯಗಳು ಎಷ್ಟು ಕಾಲ ವ್ಯಕ್ತಿಯ ದೇಹದಲ್ಲಿರುತ್ತದೆ ಎಂಬುದನ್ನು ಪರಿಶೀಲಿಸುವುದೇ ಇದರ ಉದ್ದೇಶ ಎಂದು ಅಧ್ಯಯನದಲ್ಲಿ ಪಾಲ್ಗೊಂಡಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿಲ್ಲಿಯಲ್ಲಿ ಸಾವಿರ ಕೇಸ್‌
ದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ ಯಿಂದ ಶನಿವಾರ ಬೆಳಗ್ಗೆ ನಡುವಿನ 24 ಗಂಟೆಗಳ ಅವಧಿಯಲ್ಲಿ 1,094 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 640 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಇದೇ ವೇಳೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಮಹಾರಾಷ್ಟ್ರ ದಲ್ಲಿ ಶುಕ್ರವಾರ- ಶನಿವಾರದ ನಡುವೆ 194 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದು ಇದೇ ವರ್ಷ ಮಾರ್ಚ್‌ 24ರ ಅನಂತರ ಕಂಡು ಬಂದ ಗಣನೀಯ ಸಂಖ್ಯೆಯ ಪ್ರಕರಣಗಳು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.