ಮುದಬಾಳ ಕ್ರಾಸ್ನಲ್ಲಿ ಬಸ್ ನಿಲುಗಡೆ ಮಾಡಿ
Team Udayavani, Apr 24, 2022, 3:24 PM IST
ಮಸ್ಕಿ: ತಾಲೂಕಿನ ಮುದಬಾಳ ಕ್ರಾಸ್ ನಲ್ಲಿ ಸಾರಿಗೆ ಇಲಾಖೆ ಬಸ್ಗಳನ್ನು ನಿಲುಗಡೆ ಮಾಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ರಾಷ್ಟ್ರೀಯ ಹೆದ್ದಾರಿ 150(ಎ) ಜೇವರ್ಗಿ- ಚಾಮರಾಜನಗರ ಮಾರ್ಗದಲ್ಲಿರುವ ತಾಲೂಕಿನ ಮುದಬಾಳ ಕ್ರಾಸ್ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿದ್ದು, ಕುಡಿವ ನೀರು ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳಿವೆ. ಆದರೆ ಇಲ್ಲಿ ಸಾರಿಗೆ ಬಸ್ಗಳು ನಿಲುಗಡೆ ಆಗದಿರುವುದರಿಂದ 20ಕ್ಕೂ ಹೆಚ್ಚು ಹಳ್ಳಿಗಳ ಪ್ರಯಾಣಿಕರಿಗೆ ತೊಂದರೆಯಾಗಿದೆ. ಮುದಬಾಳ, ಬುದ್ದಿನ್ನಿ ಎಸ್, ಹೂವಿನಭಾವಿ, ಉಸ್ಕಿಹಾಳ, ಕಾಟಗಲ್, ಮಾರಲದಿನ್ನಿ, ಪಾಮನಕೆಲ್ಲೂರು, ಬೆಂಚಮರಡಿ, ಇಲಾಲಪೂರ, ಹರ್ವಾಪೂರು, ತುಪ್ಪದೂರು ಸೇರಿದಂತೆ ಇತರೆ ಹಳ್ಳಿಯಿಂದ ಪ್ರಯಾಣಿಸುವ ಜನರಿಗೆ ಸಮಸ್ಯೆಯಾಗಿದೆ. ಆದ್ದರಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ಗಳನ್ನು ನಿಲುಗಡೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಾಗರಡ್ಡೆಪ್ಪ ದೇವರಮನಿ, ಬಸವರಾಜ ಈಳಿಗೇರ, ಗಂಗಪ್ಪ ತೋರಣದಿನ್ನಿ, ಬಸವರಾಜ ದಿನ್ನಿ, ಮರಿಗೌಡ ಉಸ್ಕಿಹಾಳ, ಬಸನಗೌಡ ಹರ್ವಾಪೂರು ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ