“ಎ. 27ರ ಬಳಿಕ ಕೋವಿಡ್ ಮಾರ್ಗಸೂಚಿ’ : ಬೊಮ್ಮಾಯಿ
Team Udayavani, Apr 25, 2022, 12:19 AM IST
ಹುಬ್ಬಳ್ಳಿ : ಕೊರೊನಾ ನಾಲ್ಕನೇ ಅಲೆ ಬಗ್ಗೆ ಜಾಗೃತವಾಗಿರಬೇಕೆಂದು ಕೇಂದ್ರ ಸರಕಾರ ಈಗಾಗಲೇ ಸೂಚಿಸಿದೆ. ಎ. 27ರಂದು ಪ್ರಧಾನಿ ಮೋದಿ ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಅವರೊಂದಿಗಿನ ಸಂವಾದದ ಅನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕಂಡು ಬಂದಿವೆ. ಹಿಂದಿನ ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಸೂಕ್ತ ಎಂದು ಪರಿಣಿತರು ಹೇಳಿದ್ದಾರೆ. ಈಗಾಗಲೇ ಆರೋಗ್ಯ ಸಚಿವ ಸುಧಾಕರ್ ಅವರು ಹಲವು ಸೂಚನೆಗಳನ್ನು ನೀಡಿದ್ದಾರೆ.
ಎ. 27ರಂದು ಪ್ರಧಾನಿ ಮೋದಿ ಜತೆ ವೀಡಿಯೋ ಸಂವಾದದ ಅನಂತರ ಈ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗುವುದು. ಜನರು ಜಾಗೃತರಾಗಿರುವುದು ಬಹಳ ಮುಖ್ಯ. ಕೋವಿಡ್ 2ನೇ ಅಲೆ ಬಂದಾಗ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಪ್ರಾರಂಭವಾಗಿ ಅನಂತರ ಉಲ್ಬಣವಾಗಿತ್ತು. ಈಗಾಗಲೇ ವಿಜ್ಞಾನಿಗಳು ಸಹ ಒಮ್ರಿಕಾನ್ ಯಾವ ಮಾದರಿಯಲ್ಲಿದೆ ಎಂದು ಪರೀಕ್ಷಿಸುತ್ತಿದ್ದಾರೆ. ಎ. 27ರ ಅನಂತರ ಒಂದು ಶಿಷ್ಟಾಚಾರ ಸಿದ್ಧಪಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ