ದೇಗುಲಕ್ಕೆ ಸೀಯಾಳ ಪೂರೈಕೆ ಸಂಬಂಧಿಸಿ ವಿವಾದ, ಪೊಲೀಸ್‌ ದೌರ್ಜನ್ಯ ಆರೋಪ; ಪ್ರತಿಭಟನೆ


Team Udayavani, Apr 25, 2022, 7:25 AM IST

ದೇಗುಲಕ್ಕೆ ಸೀಯಾಳ ಪೂರೈಕೆ ಸಂಬಂಧಿಸಿ ವಿವಾದ, ಪೊಲೀಸ್‌ ದೌರ್ಜನ್ಯ ಆರೋಪ; ಪ್ರತಿಭಟನೆ

ಬಜಪೆ : ಹೊರಗಿನವರು ನೀಡಿದ ಸೂಚನೆ ಮೇರೆಗೆ ಕಟೀಲು ದೇವಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ಸೀಯಾಳ ಹಾಕಿದ್ದನ್ನು ಪ್ರಶ್ನಿಸಿದ ಶ್ರೀರಾಮ ಸೇನೆಯ ಮಹೇಶ ಅವರನ್ನು ಠಾಣೆಗೆ ಕರೆದೊಯ್ದ ಮತ್ತು ವಿಷಯ ತಿಳಿದು ಠಾಣೆಗೆ ತೆರಳಿದ ದಿನೇಶ್‌ ಹಾಗೂ ದುರ್ಗಾಚರಣ್‌ ಮೇಲೆ ಬಜಪೆ ಪೊಲೀಸರು ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.

ಮಹೇಶ್‌ ಹಾಗೂ ದಿನೇಶ್‌ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾದರೆ, ದುರ್ಗಾಚರಣ್‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವ್ಯಕ್ತಿಯೋರ್ವರು ನೀಡಿದ ಆರ್ಡರ್‌ನಂತೆ ಶನಿವಾರ ಮುಸ್ಲಿಂ ವ್ಯಕ್ತಿ ಸೀಯಾಳ ತಂದು ದೇವಸ್ಥಾನಕ್ಕೆ ಒಪ್ಪಿಸಿದ ಸಂದರ್ಭ ಇದನ್ನು ಮಹೇಶ ಪ್ರಶ್ನಿಸಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಆ ಬಳಿಕ ಮಹೇಶನನ್ನು ಠಾಣೆಗೆ ಕರೆಸಲಾಗಿತ್ತು.

ಮೂರು ದಿನಗಳ ಗಡುವು
ಸಂಘಟನೆಯ ಮೂವರ ಮೇಲೆ ದೌರ್ಜನ್ಯವೆಸಗಿದ್ದನ್ನು ಪ್ರತಿಭಟಿಸಿ ಬಜಪೆ ಪೊಲೀಸ್‌ ಠಾಣೆಯ ಎದುರು ರವಿವಾರದಂದು ಸಂಜೆ ಸಂಘ ಪರಿವಾರದಿಂದ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ಪ್ರತಿಭಟನೆಯಲ್ಲಿ ಮಾತನಾಡಿ, ಯಾವ ತಪ್ಪು ಮಾಡಿದ್ದಕ್ಕೆ ಅವರನ್ನು ಹೊಡೆಯಲಾಗಿದೆ. ರಕ್ಷಣೆ ಮಾಡುವವರ ಬಾಯಿಯಿಂದಲೇ ಮಾತೆ, ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತುಗಳು ಬಂದರೂ ಧ್ವನಿಯೇ ಎತ್ತುವುದಿಲ್ಲ. ಸುಮ್ಮನೆ ಕೂರುತ್ತೇವೆ ಎಂಬ ಭಾವನೆ ಬೇಡ ಎಂದು ಹೇಳಿದರು.

ದೌರ್ಜನ್ಯವೆಸಗಿದ ಪೊಲೀಸ್‌ ಇನ್‌ಸ್ಪೆಕ್ಟರ್‌ ಹಾಗೂ ಇತರ ನಾಲ್ವರು ಪೊಲೀಸ್‌ ಸಿಬಂದಿ ವಿರುದ್ಧ ಮೂರು ದಿನದೊಳಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಘ ಪರಿವಾರದ ಪ್ರಮುಖರು ಎಸಿಪಿ ಮಹೇಶ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸುಮಾರು 200 ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಎಸಿಪಿ ಮಹೇಶ್‌ ಕುಮಾರ್‌ ಮಾತನಾಡಿ, ಸತ್ಯಾಸತ್ಯತೆಯ ಬಗ್ಗೆ ವರದಿಯನ್ನು ಪೊಲೀಸ್‌ ಕಮಿಷನ್‌ರಿಗೆ ಸಲ್ಲಿಸುತ್ತೇವೆ. ಕೂಲಂಕಷವಾಗಿ ವಿಚಾರಣೆ ನಡೆಸಿ, ಎಲ್ಲ ಸಾಕ್ಷಿಗಳ ಪರಿಶೀಲನೆ ಮಾಡಿ ವರದಿ ನೀಡಲಾಗುವುದು ಎಂದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ್‌ ಕಟೀಲು, ಸಂಘದ ಪ್ರಮುಖರಾದ ನಾಗೇಶ್‌ ಉಳ್ಳಾಲ, ಬಿಜೆಪಿ ಮೂಡುಬಿದಿರೆ ಮಂಡಲದ ಅಧ್ಯಕ್ಷ ಸುನೀಲ್‌ ಆಳ್ವ, ಸೋಂದ ಭಾಸ್ಕರ್‌ ಭಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.