ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವು
Team Udayavani, Apr 25, 2022, 11:40 AM IST
ರಾಮನಗರ: ಚಲಿಸುತ್ತಿದ್ದ ಕಾರೊಂದರ ಮೇಲೆ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕುಂಭಾಪುರ ಗೇಟ್ ಬಳಿ ಸಂಭವಿಸಿದೆ.
ಮೃತರನ್ನು ಸುಂದ್ರೇಶ್ (49) ತನ್ಮಯ್ (9) ಎಂದು ಗುರುತಿಸಲಾಗಿದೆ.
ಮದ್ದೂರಿನಿಂದ ಬೆಂಗಳೂರಿಗೆ ಓಮಿನಿ ಕಾರಿನಲ್ಲಿ ಒಂದೇ ಕುಟುಂಬದ ಐವರು ಇಂದು ಬೆಳಿಗ್ಗೆ ಪ್ರಯಾಣಿಸುತ್ತಿದ್ದರು. ಕಾರು ಕುಂಭಾಪುರ ಗೇಟ್ ಬಳಿ ಬಂದಾಗ ಮರ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. ಶೀಲ, ಗಾನವಿ, ಸಾನವಿಗೆ ಗಂಭೀರ ಗಾಯಗಳಾಗಿದ್ದು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮರ ತೆರವುಗೊಳಿಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.