ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಶಿವಪುರ ತೂಗುಸೇತುವೆ

ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾದ 234 ಮೀ. ಉದ್ದ -1.5 ಮೀ. ಅಗಲ ಹೊಂದಿದೆ

Team Udayavani, Apr 25, 2022, 12:35 PM IST

12

ಜೋಯಿಡಾ: ತಾಲೂಕಿನ ಉಳವಿ ಗ್ರಾಪಂ ಗುಂದ ಅರಣ್ಯ ಇಲಾಖೆ ವ್ಯಾಪ್ತಿಯ ಶಿವಪುರದ ತೂಗು ಸೇತುವೆ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದೆ.

ಸುತ್ತಲು ಕಾಡು ಗುಡ್ಡ ಮಧ್ಯ ಹರಿಯುವ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ ತೂಗು ಸೇತುವೆ ಮೇಲೆ ನಡೆಯಲು ಬಹಳಷ್ಟು ಖುಷಿ ಎನಿಸುತ್ತದೆ. ಇದು ಅತ್ಯದ್ಭುತ ಪ್ರವಾಸಿ ತಾಣವೂ ಹೌದು.

2015 ರಲ್ಲಿ ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯಿಂದ ನಿರ್ಮಿತವಾದ ಈ ತೂಗು ಸೇತುವೆ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾಗಿದೆ. 234 ಮೀ. ಉದ್ದ, 1.5 ಮೀ. ಅಗಲ ಹೊಂದಿದ್ದು ಈ ಸೇತುವೆ ಪ್ರವಾಸಿ ತಾಣ ಅಷ್ಟೇ ಅಲ್ಲದೇ ಯಲ್ಲಾಪುರ ಮತ್ತು ಜೋಯಿಡಾ ತಾಲೂಕಿನ ಕೊಂಡಿಯಾಗಿದೆ. ಈ ಸೇತುವೆ ಮೇಲೆ ಬೈಕ್‌ ಸವಾರರು ದಾಟಬಹುದಾಗಿದ್ದು, ಸ್ಥಳೀಯ ಬಹಳಷ್ಟು ಜನರು ಯಲ್ಲಾಪುರಕ್ಕೆ ಈ ಸೇತುವೆ ಮೂಲಕವೇ ಸಾಗುತ್ತಾರೆ.

ಶಾಸಕ ಆರ್‌.ವಿ. ದೇಶಪಾಂಡೆ ಅವರು ವಿಶೇಷ ಕಾಳಜಿ ವಹಿಸಿ ಶಿವಪುರದ ತೂಗು ಸೇತುವೆ ನಿರ್ಮಿಸಲು ಶ್ರಮ ವಹಿಸಿದ್ದಾರೆ. ಹಿಂದೆ ಇಲ್ಲಿನ ಜನರು ತೆಪ್ಪದ ಮೂಲಕ ನದಿ ದಾಟಿ ಯಲ್ಲಾಪುರಕ್ಕೆ ಸಾಗುತ್ತಿದ್ದರು. ಹೀಗೆ ದಾಟುವಾಗ ಅನೇಕ ಬಾರಿ ಕೆಲ ಅನಾಹುತಗಳು ಉಂಟಾದ ಕಾರಣ ಇದನ್ನು ಗಮನಿಸಿದ ಶಾಸಕ ಆರ್‌.ವಿ. ದೇಶಪಾಂಡೆ ಈ ಭಾಗದ ಜನರ ಅನುಕೂಲಕ್ಕೆ ಮತ್ತು ಪ್ರವಾಸಿ ತಾಣವಾಗಲೆಂದು ಶಿವಪುರದ ತೂಗು ಸೇತುವೆ ನಿರ್ಮಿಸಲು ಕಾರಣೀಕರ್ತರಾಗಿದ್ದರು.

ರಸ್ತೆ ಅಭಿವೃದ್ಧಿ ಅತ್ಯವಶ್ಯ: ಶಿವಪುರದ ತೂಗು ಸೇತುವೆಗೆ ಸಾಗಲು ಉಳವಿ ಮೂಲಕ 12 ಕಿ.ಮೀ. ಜೀಪ್‌ ಮೂಲಕ ಸಾಗಬೇಕಾಗುತ್ತದೆ. ಬೇರೆ ವಾಹನಗಳ ಮೂಲಕ ಸಾಗುವುದು ಕಷ್ಟಕರ ಮತ್ತು ಅಪಾಯಕಾರಿಯಾಗಿದೆ.

ಏಕೆಂದರೆ ಇಲ್ಲಿ ರಸ್ತೆ ಅಭಿವೃದ್ಧಿಪಡಿಸದ ಕಾರಣ ಇಲ್ಲಿನ ಸ್ಥಳೀಯರಿಗೆ ಮತ್ತು ಪ್ರವಾಸಿಗರಿಗೆ ಬಹಳಷ್ಟು ಸಮಸ್ಯೆ ಉಂಟಾಗಿದೆ. ಈಗಾಗಲೇ ಅರ್ಧದಷ್ಟು ರಸ್ತೆ ಕೆಲಸ ಮುಗಿದಿದ್ದು, ಇನ್ನುಳಿದ ರಸ್ತೆ ಮಾಡಲು ಅರಣ್ಯ ಇಲಾಖೆ ತಡೆಯೊಡ್ಡಿದೆ ಎನ್ನುವುದು ಬೇಸರದ ಸಂಗತಿ. ಆದಷ್ಟು ಬೇಗ ರಸ್ತೆ ಕೆಲಸ ಮುಗಿದಲ್ಲಿ ಮಳೆಗಾಲದಲ್ಲಿ ಸ್ಥಳೀಯರಿಗೆ ಮತ್ತು ಪ್ರವಾಸಿಗರಿಗೂ ಅನುಕೂಲವಾಗುತ್ತದೆ.

ರಾಜ್ಯದ ಉತ್ತಮ ಪ್ರವಾಸಿ ತಾಣಗಳಲ್ಲಿ ಒಂದಾದ ಶಿವಪುರದ ತೂಗು ಸೇತುವೆಗೆ ಕೋಟಿ ಕೋಟಿ ಖರ್ಚು ಮಾಡಿದರೂ ರಸ್ತೆ ಸರಿಯಿಲ್ಲದ ಕಾರಣ ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಈ ವರ್ಷ ಜಿ.ಪಂ ಇಲಾಖೆಯಿಂದ ತೂಗು ಸೇತುವೆ ರಿಪೇರಿ ಮತ್ತು ಬಣ್ಣ ಹಚ್ಚುವ ಕೆಲಸ ನಡೆದಿದ್ದು, ಇಷ್ಟೆಲ್ಲ ಹಣ ಖರ್ಚು ಮಾಡಿದರು ರಸ್ತೆ ಸರಿ ಇಲ್ಲದೆ ಮಾಡಿದ ಕೆಲಸ ವ್ಯರ್ಥವಾಗಿದೆ ಎನ್ನುವುದು ಸ್ಥಳೀಯರ ದೂರಾಗಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಶಾಸಕರು ಗಮನ ಹರಿಸಿ ಸ್ಥಳೀಯರಿಗೆ ಮತ್ತು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕೆಮದು ಪ್ರವಾಸಿಗ ರಂಜಿತ್‌ ಪೂಜಾರಿ ಹೇಳಿದ್ದಾರೆ.

ಶಿವಪುರದ ತೂಗು ಸೇತುವೆ ಸುಂದರ ಪ್ರವಾಸಿ ತಾಣ. ಆದರೆ ರಸ್ತೆ ಸರಿಯಿಲ್ಲದ ಕಾರಣ ಈ ಸ್ಥಳಕ್ಕೆ ಸಾಗಲು ಸಮಸ್ಯೆ ಉಂಟಾಗುತ್ತದೆ. ನಾವೇನೋ ಒಂದು ದಿನ ಬಂದು ಹೋಗುತ್ತೇವೆ. ಆದರೆ ಇಲ್ಲಿ ದಿನ ನಿತ್ಯ ಓಡಾಡುವವರು ಕಷ್ಟದ ಜೀವನ ನಡೆಸುತ್ತಿರುವುದು ಕಟು ಸತ್ಯ. ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನಿಸಬೇಕಿದೆ.

-ಸಂದೇಶ ದೇಸಾಯಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.