ಅಲೇಕಾನ್ ರಸ್ತೆ ಅಭಿವೃದ್ಧಿಗೆ 65 ಲಕ್ಷ ರೂ. ಅನುದಾನ ಬಿಡುಗಡೆ : ಎಂ.ಪಿ.ಕುಮಾರಸ್ವಾಮಿ
ಕಾಡಾನೆ ಹಾವಳಿಗೆ ಸೋಲಾರ್ ಬೇಲಿ ಅಳವಡಿಕೆ
Team Udayavani, Apr 25, 2022, 6:23 PM IST
ಕೊಟ್ಟಿಗೆಹಾರ: ‘ಅಲೇಕಾನ್ ಗ್ರಾಮದ ರಸ್ತೆ ಅಭಿವೃಧ್ದಿಗೆ 65 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು’ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.
ಅವರು ಸೋಮವಾರದಂದು ಅಲೇಕಾನು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ನೂತನವಾಗಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಸೋಲಾರ್ ಬೇಲಿ ಉದ್ಘಾಟಿಸಿ ಮಾತನಾಡಿದರು.
‘ಅಲೇಕಾನ್, ಮಲೆಮನೆ ಹಾಗೂ ಮೇಗೂರು ಭಾಗದಲ್ಲಿ ವಿಪರೀತ ಆನೆ ಕಾಟವಿದ್ದು ಅದನ್ನು ತಡೆಯಲು ಗ್ರಾಮಗಳ ವ್ಯಾಪ್ತಿಯಲ್ಲಿ ಸೋಲಾರ್ ಬೇಲಿ ಅಳವಡಿಕೆ ಮಾಡಲಾಗಿದೆ. ಮೂಡಿಗೆರೆ ತಾಲ್ಲೂಕಿನ ತತ್ಕೊಳ ಭಾಗದಲ್ಲಿ ಈಗಾಗಲೇ ಈ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು ಯಶಸ್ವಿಯಾಗಿದೆ. ಈ ಭಾಗದ ರೈತರಿಗೂ ಕೃಷಿ ಚಟುವಟಿಕೆ ಅಭಿವೃದ್ದಿ ಪಡಿಸಲು ಕಾಡಾನೆ ಕಾಟ ತಪ್ಪಿಸಲು ಈ ಯೋಜನೆ ಕಾರ್ಯರೂಪಕ್ಕೆ ತರಲಾಗಿದೆ’ ಎಂದರು.
ಎಸಿಎಫ್ ರಾಜೇಶ್ ನಾಯ್ಕ್ ಮಾತನಾಡಿ ‘ಸೋಲಾರ್ ತಂತಿ ಬೇಲಿ ಅಳವಡಿಕೆಯಿಂದ ಬೆಳೆ ಹಾನಿ ಜತೆಗೆ ಪ್ರಾಣ ಹಾನಿಯೂ ತಪ್ಪುತ್ತದೆ. ಈ ಬೇಲಿಯಿಂದ ಕಾಡು ಪ್ರಾಣಿಗಳ ಜೀವಕ್ಕೂ ಅಪಾಯವಿಲ್ಲ’ ಮೂಡಿಗೆರೆ ತಾಲ್ಲೂಕಿನ ಬೈರಾಪುರ,ಗುತ್ತಿ,ಹಾಗೂ ಕುಂಬರಡಿಯಲ್ಲೂ ಈ ಯೋಜನೆ ಅನುಷ್ಠಾನಕ್ಕೆ ತರಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಸೋಲಾರ್ ತಂತಿ ಕಾರ್ಯ 5 ಕಿ.ಮೀ ವ್ಯಾಪ್ತಿಯಲ್ಲಿ ಅಲೇಕಾನ್, ಮಲೆಮನೆ, ಮೇಗೂರು ಭಾಗದಲ್ಲಿ 30ಲಕ್ಷ ರೂ. ಅನುದಾನದಲ್ಲಿ ಈ ಯೋಜನೆ ತಯಾರಾಗಿದೆ’ ಎಂದರು.
ಇದನ್ನೂ ಓದಿ : ಬಾಲ್ಯದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ: ನಟಿ ಕಂಗನಾ ರಣಾವತ್
ಈ ಸಂದರ್ಭದಲ್ಲಿ ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಬಿ.ಧರ್ಮಪಾಲ್, ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ಸ್ಥಳೀಯ ಮುಖಂಡರಾದ ಬಿ.ಎಂ.ಭರತ್, ಪರೀಕ್ಷಿತ್ ಜಾವಳಿ, ಗ್ರಾಮ ಪಂಚಾಯಿತಿ ಸದಸ್ಯ ಸಂದೀಪ್, ಸತೀಶ್ ಬಾಳೂರು, ಸಂದೀಪ್ ದೇವನಗೂಲ್, ಸುರೇಶ್ ಗೌಡ, ಉಪೇಂದ್ರಗೌಡ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು