ಬರೋಬ್ಬರಿ 3.25 ಲಕ್ಷ ಕೋಟಿಗೆ ಡೀಲ್‌ ಫೈನಲ್‌;ಏರಿಕೆಯ ಹಂತದಲ್ಲಿ ಟ್ವಿಟರ್‌ ಷೇರುಗಳು


Team Udayavani, Apr 26, 2022, 8:00 AM IST

thumb 2

ನ್ಯೂಯಾರ್ಕ್‌: ಟ್ವಿಟರ್‌ ಸಂಸ್ಥೆಗೆ ಬರೋಬ್ಬರಿ 3.25 ಲಕ್ಷ ಕೋಟಿ ರೂ.! ಉದ್ಯಮಿ ಎಲಾನ್‌ ಮಸ್ಕ್ ಮತ್ತು ಮೈಕ್ರೋಬ್ಲಾಗಿಂಗ್‌ ಜಾಲತಾಣ ಟ್ವಿಟರ್‌ ನಡುವೆ ಬಹುತೇಕವಾಗಿ ಅಂತಿಮಗೊಂಡ ಖರೀದಿ ಮೊತ್ತವಿದು.

ಆರಂಭದಲ್ಲಿ ಮಾರಾಟ ಸಾಧ್ಯವೇ ಇಲ್ಲ ಎಂದಿದ್ದ ಟ್ವಿಟರ್‌ ಕಂಪೆನಿ, ಈಗ ಎಲಾನ್‌ ಮಸ್ಕ್ಗೇ ಮಾರಾಟ ಮಾಡಲು ನಿರ್ಧರಿಸಿದೆ. ಇತ್ತೀ ಚೆ ಗಷ್ಟೇ ಟ್ವಿಟರ್‌ ಕಂಪೆನಿಯ ಶೇ.9ರಷ್ಟು ಷೇರುಗಳನ್ನು ಖರೀದಿಸಿದ್ದ ಮಸ್ಕ್, ಸಂಪೂ ರ್ಣ ವಾಗಿ ಕಂಪೆನಿ ಯನ್ನೇ ತನಗೆ ಕೊಟ್ಟು ಬಿಡಿ ಎಂದಿದ್ದರು. ಈ ಪ್ರಸ್ತಾವವನ್ನು ಸಂಸ್ಥೆ ಯಲ್ಲಿ ಪಾಲು ಹೊಂದಿ ರುವ ಸೌದಿ ಅರೇಬಿಯಾದ ರಾಜಕುಮಾರ ಅಲ್‌ ವಲೀದ್‌ ಬಿನ್‌ ತಲಾಲ್‌ ಖಡಾಖಂಡಿತವಾಗಿ ತಿರಸ್ಕರಿಸಿದ್ದರು. ರಾಜಕುಮಾರ ಶೇ.5.2 ಪ್ರಮಾಣದಲ್ಲಿ ಟ್ವಿಟರ್‌ ಷೇರುಗಳನ್ನು ಹೊಂದಿದ್ದಾರೆ.

ಟೆಸ್ಲಾ ಕಂಪೆನಿಯ ಮಾಲಕರಾಗಿರುವ ಎಲಾನ್‌ ಮಸ್ಕ್ ಅವರು ಕೇವಲ ವೈಯಕ್ತಿಕ ಮಿತಿಯಲ್ಲಿ ಈ ಖರೀದಿ ನಡೆಸುತ್ತಿದ್ದಾರೆ. ಸೊತ್ತು ನಿರ್ವಹಣ ಕಂಪೆನಿಯಾಗಿರುವ ವ್ಯಾನ್‌ಗಾರ್ಡ್‌ ಗ್ರೂಪ್‌ ಟ್ವಿಟರ್‌ನಲ್ಲಿ ಶೇ.10.3 ಷೇರು ಗಳನ್ನು ಹೊಂದಿದೆ.

ಎಲಾನ್‌ ಮಸ್ಕ್ ಅವರು ಟ್ವಿಟರ್‌ ಅನ್ನು ಖರೀದಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂಬ ವರದಿಗಳು ಜಗತ್ತಿನಾದ್ಯಂತ ವೈರಲ್‌ ಆಗುತ್ತಲೇ ನ್ಯೂಯಾರ್ಕ್‌ ಸ್ಟಾಕ್‌ಎಕ್ಸ್‌ಚೇಂಜ್‌ನಲ್ಲಿ ಮೈಕ್ರೋಬ್ಲಾಗಿಂಗ್‌ ಸಂಸ್ಥೆಯ ಷೇರುಗಳು ಶೇ.4.5ರಷ್ಟು ಏರಿಕೆಯಾಗಿವೆ.

ಭಾರತೀಯ ಸಿಇಒ
ಭಾರತ ಮೂಲದ ಪರಾಗ್‌ ಅಗರ್ವಾಲ್‌ ಅವರು 2021ರ ನವೆಂಬರ್‌ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸಿದ್ದರು. ಆ ಬಳಿಕದ ದಿನದಿಂದ ಕಂಪೆನಿಯನ್ನು ಲಾಭದ ಹಳಿಗೆ ತರುವಲ್ಲಿ ವಿಫ‌ಲರಾಗಿದ್ದರು ಎಂದು ಹೇಳಲಾಗುತ್ತಿದೆ. 2023ರ ಒಳಗಾಗಿ ಮೈಕ್ರೋಬ್ಲಾಗಿಂಗ್‌ ಜಾಲತಾಣವನ್ನು ಅತ್ಯಂತ ಲಾಭಯುಕ್ತ ಕಂಪೆನಿಯನ್ನಾಗಿ ರೂಪಿಸಬೇಕು ಎಂಬ ಬಗ್ಗೆ ಗುರಿ ಹಾಕಿಕೊಂಡಿರುವಂತೆಯೇ ಮಸ್ಕ್ ಅವರು ಅದನ್ನು ಖರೀದಿಸುತ್ತಿದ್ದಾರೆ.

ಸಂಭಾವ್ಯ ಬದಲಾವಣೆಗಳೇನು?
ಮಸ್ಕ್ ಟ್ವಿಟರ್‌ ಅನ್ನು ಖರೀದಿಸಿದ ಬಳಿಕ ಅದರಲ್ಲಿ ಟ್ವೀಟ್‌ ಎಡಿಟ್‌ ಮಾಡುವ ಆಯ್ಕೆ ಇರಿಸುವ ಪ್ರಸ್ತಾಪ ಮಾಡಿದ್ದರು. ಜತೆಗೆ ಜಾಲತಾಣಗಳ ನಿಯಮಗಳಲ್ಲಿ ಕೂಡ ಬದಲಾವಣೆ, ಕ್ರಿಪ್ಟೋ ಕರೆನ್ಸಿ ಕ್ಷೇತ್ರದ ಅವ್ಯವಹಾರಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲೂ ಅವಕಾಶಗಳನ್ನು ಮಾಡುವುದನ್ನೂ ಮಸ್ಕ್ ಉಲ್ಲೇಖೀಸಿದ್ದರು. ಜತೆಗೆ ಅಲ್ಲಿ ಸಾರ್ವಜನಿಕ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲೂ ಅವಕಾಶ ಸೃಷ್ಟಿಯಾಗಬೇಕು ಎಂದು ಪ್ರತಿಪಾದಿಸಿದ್ದರು.

 

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.