ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಸ್ಥಗಿತಕ್ಕೆ ಪತ್ರ

­ಅವೈಜ್ಞಾನಿಕ ಸುತ್ತೋಲೆ ರದ್ಧತಿ

Team Udayavani, Apr 26, 2022, 9:42 AM IST

3

ಹುಬ್ಬಳ್ಳಿ: ರಾಜ್ಯ ಸರಕಾರದ ಆದೇಶಕ್ಕೆ ವ್ಯತಿರಿಕ್ತವಾಗಿ ಸರಕಾರಿ ಪ್ರೌಢಶಾಲೆಗಳಲ್ಲಿ ವಿಶೇಷ ಹಾಗೂ ಇತರೆ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಿ ಅವೈಜ್ಞಾನಿಕ ರೀತಿಯ ಸುತ್ತೋಲೆ ಹಾಗೂ ಜ್ಞಾಪನಾ ಪತ್ರ ಹೊರಡಿಸಿ, ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಪ್ರಕ್ರಿಯೆ ಸ್ಥಗಿತಗೊಳಿಸಿ ಮಕ್ಕಳಿಗೆ ಆಗುವ ತಾರತಮ್ಯ ಹಾಗೂ ಅನ್ಯಾಯ ತಡೆಯಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, 2011ರಲ್ಲಿ ಹೊರಡಿಸಲಾಗದ ಆದೇಶದಂತೆ ಎಂದು ಹೇಳಿ ಪ್ರೌಢಶಾಲೆಯಲ್ಲಿ ವಿಶೇಷ ಹಾಗೂ ಇತರೆ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಿ ಸ್ಥಳಾಂತರಕ್ಕೆ ಇಲಾಖೆ ಮುಂದಾಗಿದೆ. ಸುಮಾರು 11 ವರ್ಷಗಳ ಹಿಂದಿನ ಆದೇಶವನ್ನು ಇದೀಗ ಅನುಷ್ಠಾನಕ್ಕೆ ಮುಂದಾಗಿರುವುದು ಎಷ್ಟರ ಮಟ್ಟಿಗೆ ಸರಿ. ಶಿಕ್ಷಣದಲ್ಲಿ ಅನೇಕ ಬದಲಾವಣೆಗಳಾಗಿವೆ. ಇದಾವುದನ್ನು ಪರಿಗಣಿಸದೆ ಇದೀಗ ಸ್ಥಳಾಂತರಕ್ಕೆ ಆದೇಶಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ನೋಡಬೇಕಾಗಿದೆ.

2011ರ ಆದೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಆರು ವಿಭಾಗಗಳನ್ನು ಮಾಡಿ, ಮುಖ್ಯೋಪಾಧ್ಯಾಯರು ಸೇರಿದಂತೆ 8 ಶಿಕ್ಷಕರು, ಇಬ್ಬರು ಬೋಧಕೇತರ ಸಿಬ್ಬಂದಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ ಇದರಲ್ಲಿ ಒಂದರಿಂದ ಮೂರು ವಿಭಾಗಗಳ ಸಿಬ್ಬಂದಿ ಸ್ತರದ ಮಾಹಿತಿ ಸ್ಪಷ್ಟವಾಗಿಲ್ಲ.

2011ರ ಆದೇಶದಲ್ಲೇ ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರಲ್ಲಿ ಒಂದಕ್ಕಿಂತ ಹೆಚ್ಚಿನ ಶಿಕ್ಷಕರಿದ್ದರಲ್ಲಿ, ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಶಿಕ್ಷಕರನ್ನು ಉಳಿಸಿಕೊಂಡು, ಉಳಿದ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಏ.13ರಂದು ಹೊರಡಿಸಿದ ಜ್ಞಾಪನಾ ಪತ್ರದಲ್ಲಿ 6 ವಿಭಾಗಗಳಿಲ್ಲದ ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನು ಉಳಿಸಿಕೊಳ್ಳಬೇಕೆಂದು ಹೇಳಿರುವುದು 2011ರ ಆದೇಶಕ್ಕೆ ವ್ಯತಿರಿಕ್ತವಾಗಲಿದೆ.

ಸರಕಾರಿ ಆದೇಶಕ್ಕೆ ವ್ಯತಿರಿಕ್ತವಾಗಿ ಸುತ್ತೋಲೆ ಹಾಗೂ ಜ್ಞಾಪನಾ ಪತ್ರಗಳನ್ನು ಹೊರಡಿಸಲು ಅನುಷ್ಠಾನ ಅಧಿಕಾರಿಗೆ ಸರಕಾರ ಪರವಾನಗಿ ನೀಡಿದೆಯೇ ಎಂಬುದರ ಬಗ್ಗೆಯೂ ಸರಕಾರ ಸ್ಪಷ್ಟಪಡಿಸಬೇಕಾಗಿದೆ. ಜತೆಗೆ ಗ್ರಾಮೀಣ ಭಾಗದ ಇಂಗ್ಲಿಷ್‌ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಯೋಚಿಸಬೇಕಾಗಿದೆ.

ಸರ್ವರಿಗೂ ಉತ್ತಮ ರೀತಿಯ ಶಿಕ್ಷಣ ದೊರೆಯಬೇಕೆಂಬ ಮಹದಾಸೆ, ಸಮಗ್ರ ಪರಿಕಲ್ಪನೆಯನ್ನು ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಹೊಂದಿದೆ. ಈ ಶಿಕ್ಷಣದಲ್ಲಿ ವಿಶೇಷ ಶಿಕ್ಷಕರಿಗೆ ಆದ್ಯತೆ ನೀಡಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಮೊದಲು ಜಾರಿಗೆ ತಂದ ರಾಜ್ಯದ ಕೀರ್ತಿ ನಮ್ಮದಾಗಿದೆ. ಆದರೆ, ವಿಶೇಷ ಹಾಗೂ ಇತರೆ ಶಿಕ್ಷಕರನ್ನು ಹೆಚ್ಚುವರಿ ಮಾಡುತ್ತಿರುವುದು ರಾಷ್ಟ್ರೀಯ ನೂತನ ಶಿಕ್ಷಣ ನೀತಿಯ ಆಶಯಗಳಿಗೆ ಕಪ್ಪುಚುಕ್ಕೆಯಂತಾಗಿದೆ.

ರಾಜ್ಯದಲ್ಲಿ 6 ವಿಭಾಗಗಳನ್ನು ಹೊಂದಿರಬಹುದಾದ ಸರಕಾರಿ ಪ್ರೌಢಶಾಲೆಗಳ ಸಂಖ್ಯೆ ಅತ್ಯಲ್ಪ. ಜ್ಞಾಪನಾ ಪತ್ರದ ಸೂಚನೆಯಂತೆ ಈ ಶಾಲೆಗಳಲ್ಲಿ ವಿಶೇಷ ಶಿಕ್ಷಕರಿಗೆ ಅವಕಾಶ ನೀಡಲಾಗಿದ್ದು, ಆರು ವಿಭಾಗಗಳಿಲ್ಲದ ಶಾಲೆಗಳಿಗೆ ವಿಶೇಷ ಶಿಕ್ಷಕರು ಇಲ್ಲ ಎಂದರೆ ಏನರ್ಥ. ವಿದ್ಯಾರ್ಥಿಗಳಲ್ಲಿ ಸಮಾನತೆ ಇರಬೇಕೆಂದು ಹೇಳುವ ಸರಕಾರವೇ ಖುದ್ದಾಗಿ ತಾರತಮ್ಯ ನೀತಿ ಅನುಸರಿಸುತ್ತಿದೆ ಅನ್ನಿಸುವುದಿಲ್ಲವೆ. ಆರು ವಿಭಾಗಗಳನ್ನು ಹೊಂದಿರದ ವಿದ್ಯಾರ್ಥಿಗಳು ವಿಶೇಷ ಶಿಕ್ಷಕರ ಕಲಿಕೆಯಿಂದ ವಂಚಿತರಾಗುವುದಿಲ್ಲವೇ ಎಂಬುದರ ಬಗ್ಗೆ ಸರಕಾರ ಗಂಭೀರವಾಗಿ ಚಿಂತಿಸಬೇಕಾಗಿದೆ. ಇಲ್ಲವಾದರೆ ಶಿಕ್ಷಣ ವಿಚಾರದಲ್ಲಿ ವಿದ್ಯಾರ್ಥಿಗಳಲ್ಲಿ ತಾರತಮ್ಯ ನೀತಿಗೆ ಸರಕಾರವೇ ಮುಂದಾಗಿದೆ ಎಂಬ ತಪ್ಪು ಸಂದೇಶ ರವಾನೆ ಆಗಲಿದ್ದು, ತಕ್ಷಣವೇ ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಪ್ರಕ್ರಿಯೆ ಸ್ಥಗಿತಗೊಳಿಸಿ, ಏ.13 ರಂದು ಹೊರಡಿಸಿದ ಜ್ಞಾಪನಾ ಪತ್ರವನ್ನು ನಿರಸನಗೊಳಿಸಬೇಕೆಂದು ಸಭಾಪತಿ ಹೊರಟ್ಟಿ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.