‘ಕಸ್ತೂರಿ ಮಹಲ್‌’ನಲ್ಲಿ ಕನಸು ನನಸಾಯ್ತು: ಶಾನ್ವಿ ಶ್ರೀವಾಸ್ತವ್‌


Team Udayavani, Apr 26, 2022, 11:34 AM IST

shanvi srivastava

ನಟಿ ಶಾನ್ವಿ ಶ್ರೀವಾಸ್ತವ್‌ ಈಗ ಖುಷಿಯ ಮೂಡ್‌ನ‌ಲ್ಲಿದ್ದಾರೆ. ಇಂಥದ್ದೊಂದು ಖುಷಿ ಕಾರಣ ಅವರ ಬಹು ವರ್ಷದ ಕನಸು ನನಸಾಗಿರುವುದು. ಅಂದಹಾಗೆ, ಆ ಕನಸು ನನಸಾಗಿರುವುದು “ಕಸ್ತೂರಿ ಮಹಲ್‌’ ಸಿನಿಮಾದ ಕಾರಣದಿಂದ.

ಹೌದು, ಹಿರಿಯ ನಿರ್ದೇಶಕ ದಿನೇಶ್‌ ಬಾಬು ನಿರ್ದೇಶನದ “ಕಸ್ತೂರಿ ಮಹಲ್‌’ ಚಿತ್ರದಲ್ಲಿ ಶಾನ್ವಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ಶಾನ್ವಿ ಪಾತ್ರದ ಸುತ್ತ ನಡೆಯುತ್ತದೆ. ಮೊದಲ ಬಾರಿಗೆ ಮಹಿಳಾ ಪ್ರಧಾನ ಕಥೆ ಮತ್ತು ಪಾತ್ರವಿರುವ ಸಿನಿಮಾ ಸಿಕ್ಕಿರುವುದಕ್ಕೆ ಶಾನ್ವಿ ಫ‌ುಲ್‌ ಖುಷಿಯಾಗಿದ್ದಾರೆ.

ಈ ಬಗ್ಗೆ ಮಾತನಾಡುವ ಶಾನ್ವಿ, “ಎಲ್ಲರಿಗೂ ಗೊತ್ತಿರುವಂತೆ, ನಮ್ಮದು ಹೀರೋ ಸೆಂಟ್ರಿಕ್‌ ಸಿನಿಮಾ ಇಂಡಸ್ಟ್ರಿ. ಇಲ್ಲಿ ಬರುವ ಬಹುತೇಕ ಸಿನಿಮಾಗಳು ಹೀರೋ ಕೇಂದ್ರಿತವಾಗಿಯೇ ಬರುತ್ತವೆ. ಸಬ್ಜೆಕ್ಟ್ ಆಧಾರಿತ, ಹೀರೋಯಿನ್‌ ಕೇಂದ್ರಿತ ಸಿನಿಮಾಗಳ ಸಂಖ್ಯೆ ಇಲ್ಲಿ ಸ್ವಲ್ಪ ಕಡಿಮೆ. ಹಾಗಾಗಿ ಸಹಜವಾಗಿಯೇ ಪ್ರತಿಯೊಬ್ಬ ನಟಿಗೂ ಸಬ್ಜೆಕ್ಟ್ ಆಧಾರಿತ, ಮಹಿಳಾ ಕೇಂದ್ರಿತ ಸಿನಿಮಾಗಳನ್ನು ಮಾಡ್ಬೇಕು ಅಂಥ ಆಸೆ, ಕನಸು ಇದ್ದೇ ಇರುತ್ತೆ. ನನಗೂ ಕೆಲ ವರ್ಷಗಳಿಂದ ಅಂಥದ್ದೊಂದು ಕನಸಿತ್ತು. ಆ ಕನಸು “ಕಸ್ತೂರಿ ಮಹಲ್‌’ ಮೂಲಕ ನನಸಾಗುತ್ತಿದೆ’ ಎನ್ನುತ್ತಾರೆ ಶಾನ್ವಿ.

ಇದನ್ನೂ ಓದಿ:777 ಚಾರ್ಲಿ ಚಿತ್ರದ ಟಿವಿ, ಡಿಜಿಟಲ್‌ ರೈಟ್ಸ್‌ಗೆ ಸಿಕ್ತು 21 ಕೋಟಿ ರೂ!

“ಕಸ್ತೂರಿ ಮಹಲ್‌’ ಸಸ್ಪೆನ್ಸ್‌, ಹಾರರ್‌, ಥ್ರಿಲ್ಲರ್‌ ಹೀಗೆ ಎಲ್ಲ ಥರದ ಎಲಿಮೆಂಟ್ಸ್‌ ಇರುವಂಥ ಸಿನಿಮಾ. ಈ ಥರದ ಸಿನಿಮಾ ಮಾಡೋದಕ್ಕೆ ಅವಕಾಶ ಸಿಗೋದು ತುಂಬ ಕಡಿಮೆ. ನಾನು ಇಲ್ಲಿಯವರೆಗೆ ಮಾಡಿದ ಸಿನಿಮಾಗಳಿಗಿಂತ ಸಂಪೂರ್ಣ ಡಿಫ‌ರೆಂಟ್‌ ಸಬ್ಜೆಕ್ಟ್, ಕ್ಯಾರೆಕ್ಟರ್‌ ಈ ಸಿನಿಮಾದಲ್ಲಿದೆ. ಇಡೀ ಟೀಮ್‌ ತುಂಬ ಪ್ಯಾಷನೇಟ್‌ ಆಗಿ ಇಂಥದ್ದೊಂದು ಸಿನಿಮಾ ಮಾಡಿದೆ. ತುಂಬ ಅಚ್ಚುಕಟ್ಟಾಗಿ “ಕಸ್ತೂರಿ ಮಹಲ್‌’ ಬಂದಿದೆ. ನಾನು ಕೂಡ ಸಿನಿಮಾ ರಿಲೀಸ್‌ ಆಗೋದನ್ನ ಕಾಯುತ್ತಿದ್ದೇನೆ’ ಎನ್ನುವುದು ಶಾನ್ವಿ ಮಾತು.

ಅಂದಹಾಗೆ, ಶಾನ್ವಿ ಅಭಿನಯದ “ಕಸ್ತೂರಿ ಮಹಲ್‌’ ಇದೇ ಮೇ. 13ಕ್ಕೆ ತೆರೆಗೆ ಬರುತ್ತಿದೆ. ಶಾನ್ವಿ ಅವರೊಂದಿಗೆ ಸ್ಕಂದ ಅಶೋಕ್‌, ಶ್ರುತಿ ಪ್ರಕಾಶ್‌, ರಂಗಾಯಣ ರಘು ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. “ಶ್ರೀ ಭವಾನಿ ಆರ್ಟ್ಸ್’ ಬ್ಯಾನರ್‌ನಲ್ಲಿ ರವೀಶ್‌ ಆರ್‌.ಸಿ ಈ ಸಿನಿಮಾವನ್ನ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.