ಭಾರೀ ಮಳೆ-ಗಾಳಿ: ಧರೆಗುರುಳಿದ ಮರ-ವಿದ್ಯುತ್ ಕಂಬ
Team Udayavani, Apr 26, 2022, 12:37 PM IST
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಸೋಮವಾರ ಸಂಜೆ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಭಾರೀ ಗುಡುಗು, ಬಿರುಗಾಳಿ ಸಹಿತ ತುರಿಸಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೆಲ ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.
ಸಂಜೆ 5 ಗಂಟೆ ಸುಮಾರಿಗೆ ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಬಿರುಸಿನ ಮಳೆ ಆರಂಭವಾಯಿತು. ನೋಡನೋಡುತ್ತಿದ್ದಂತೆ ಮಹಾತ್ಮಗಾಂಧಿ ವೃತ್ತದಲ್ಲಿರುವ ಬೃಹತ್ ಮರ ಧರೆಗುರುಳಿದ್ದು, ತಳ್ಳುಗಾಡಿ ಮತ್ತು ಒಂದು ಬೈಕ್ ಅಲ್ಪಸ್ವಲ್ಪ ಜಖಂಗೊಂಡಿವೆ. ಇದೇ ವೇಳೆ ಗದುಗಿನಿಂದ ರೋಣಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ.
ಬಿರುಗಾಳಿಗೆ ಮಹಾತ್ಮ ಗಾಂಧಿ ವೃತ್ತದಲ್ಲಿರುವ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಳವಡಿಸಿದ್ದ ಸಿಸಿ ಕ್ಯಾಮರಾ ಸ್ತಂಭ ಮುರಿದು ಬಿದ್ದಿದೆ. ಎಸ್.ಎಂ.ಕೃಷ್ಣ ನಗರ, ರಾಜೀವಗಾಂಧಿ ನಗರ, ಗಂಗಿಮಡಿ, ಸೇರಿದಂತೆ ಗ್ರಾಮೀಣ ಭಾಗದ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಪರಿಣಾಮ ಸಂಜೆ 5.30 ರಿಂದ ಅವಳಿ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಕತ್ತಲೆಯಲ್ಲೇ ಕಾಲ ಕಳೆಯುವಂತಾಯಿತು. ಭಾರೀ ಮಳೆಯಿಂದಾಗಿ ಇಲ್ಲಿನ ಹಳೇ ಡಿಸಿ ಸರ್ಕಲ್, ಗಾಂಧಿ ವೃತ್ತ ಸೇರಿದಂತೆ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡಿದರು. ಜೊತೆಗೆ ಎಸ್.ಎಂ.ಕೃಷ್ಣಾ ನಗರ, ರೆಹಮತ ನಗರ, ಗಂಗಿಮಡಿ, ಬೆಟಗೇರಿಯ ಹಲವು ಬಡಾವಣೆಗಳ ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ, ಭಾರೀ ಅವಾಂತರ ಸೃಷ್ಟಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ
SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ
ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ
SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ
Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು