ಬಿಟಿಪಿಎಸ್‌ನಿಂದ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು

130.7 ಕೋಟಿ ರೂ ಅಂದಾಜು ವೆಚ್ಚದ ಯೋಜನೆ ಜಾರಿಗೆ ಪ್ರಯತ್ನ

Team Udayavani, Apr 26, 2022, 2:47 PM IST

bjp

ಬಳ್ಳಾರಿ: ತಾಲೂಕಿನ ಕುಡತಿನಿ ಬಳಿಯ ಕೆಪಿಸಿಎಲ್‌ ಘಟಕವು ನಾರಾಯಣಪುರ ಡ್ಯಾಂನಿಂದ ಪಡೆಯುತ್ತಿರುವ ಒಟ್ಟು 2.17 ಟಿಎಂಸಿ ನೀರಿನಲ್ಲಿ 0.40 ಟಿಎಂಸಿ ಪ್ರಮಾಣದ ನೀರನ್ನು ಕುಡತಿನಿ ಪಟ್ಟಣ, ಬಳ್ಳಾರಿ ನಗರ, ಹರಗಿನಡೋಣಿ, ಜಾನೆಕುಂಟೆ, ಜಾನೆಕುಂಟೆ ತಾಂಡ, ಬೆಳಗಲ್ಲು, ಬೆಳಗಲ್ಲು ತಾಂಡ ಮತ್ತು ವೇಣಿವೀರಾಪುರ ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಬಳಕೆ ಮಾಡಲು 130.7 ಕೋಟಿ ರೂಪಾಯಿ ಅಂದಾಜು ವೆಚ್ಚದ ಜನಪರವಾದ ವಿಶೇಷ ಯೋಜನೆ ಜಾರಿಗೆ ತೀವ್ರ ಪ್ರಯತ್ನಗಳು ನಡೆದಿವೆ.

ವಿಧಾನಪರಿಷತ್‌ ಸದಸ್ಯ ವೈ.ಎಂ ಸತೀಶ್‌ ಅವರು, ನಾರಾಯಣಪುರ ಡ್ಯಾಂನಿಂದ ಕುಡತಿನಿಯ ಬಿಟಿಪಿಎಸ್‌/ಕೆಪಿಸಿಎಲ್‌ಗೆ ಸರಬರಾಜು ಆಗುತ್ತಿರುವ ಒಟ್ಟು 2.17 ಟಿಎಂಸಿ ನೀರಿನಲ್ಲಿ ಕುಡಿಯುವ ನೀರಿಗಾಗಿ 0.40 ಟಿ.ಎಂ.ಸಿ ಪ್ರಮಾಣದ ನೀರನ್ನು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಹರಗಿನಡೋಣಿ, ಜಾನೆಕುಂಟೆ, ಜಾನೆಕುಂಟೆ ತಾಂಡ, ಬೆಳಗಲ್ಲು, ಬೆಳಗಲ್ಲು ತಾಂಡ ಮತ್ತು ವೇಣಿವೀರಾಪುರ ಗ್ರಾಮಗಳಿಗೆ ಪೂರೈಕೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೋರಿ ವಿಧಾನಪರಿಷತ್ತಿನಲ್ಲಿ ವಿಷಯ ಪ್ರಸ್ತಾಪಿಸಿದ್ದರು.

ವೈ.ಎಂ. ಸತೀಶ್‌ ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬಿ.ಎ.ಬೈರತಿ ಬಸವರಾಜ್‌ ಅವರು, ಈ ವಿಷಯವನ್ನು ಇಂಧನ ಇಲಾಖೆಗೆ ವರ್ಗಾವಣೆ ಮಾಡಿದ್ದರು. ಈ ಕುರಿತು ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ಅವರು ಅಕಾರಿಗಳ ಸಭೆಯನ್ನು ನಡೆಸಿ, ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದ್ದರು. ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತದ ಹಿರಿಯ ಅಧಿಕಾರಿಗಳು ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದು, ಒಂದು ಘನ ಮೀಟರ್‌ ಪ್ರಮಾಣದ ನೀರಿನ ಸಂಗ್ರಹ ಮತ್ತು ಪೂರೈಕೆಗೆ ಅಗತ್ಯವಾಗಿರುವ ವೆಚ್ಚದ ಡಿಪಿಆರ್‌ (ಅಂದಾಜು ವೆಚ್ಚದ) ವರದಿಯನ್ನು ಸಿದ್ಧಪಡಿಸಬೇಕು’ ಎಂದು ಆದೇಶ ಜಾರಿ ಮಾಡಿದ್ದಾರೆ.

ವಿಧಾನಪರಿಷತ್‌ ಸದಸ್ಯ ವೈ.ಎಂ. ಸತೀಶ್‌ ಅವರು, ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು, ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ಮತ್ತು ನಾನು ವೈಯಕ್ತಿಕವಾಗಿ ಈ ಕುರಿತು ಅಧಿ ಕಾರಿಗಳ ಜೊತೆ ವಿವಿಧ ಹಂತಗಳಲ್ಲಿ ನಿರಂತರ ಸಭೆಗಳನ್ನು ನಡೆಸುತ್ತಿದ್ದೇವೆ. ನೀರು ಪೂರೈಕೆಗೆ ಅಧಿಕಾರಿಗಳು ತಾತ್ವಿಕ ಒಪ್ಪಿಗೆಯನ್ನು ಸೂಚಿಸಿ, ಡಿಪಿಆರ್‌ (ಅಂದಾಜು ವೆಚ್ಚ) ಸಿದ್ಧಪಡಿಸಲು ಆದೇಶ ನೀಡಿದ್ದಾರೆ. ಈ ಯೋಜನೆಯು ಜನಪರವಾಗಿದೆ. ಕಾರಣ ಈ ಯೋಜನೆಯು ಶೀಘ್ರದಲ್ಲೇ ಜಾರಿ ಆಗುವ ವಿಶ್ವಾಸವಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಯೋಜನೆ ಜಾರಿ ಆದಲ್ಲಿ ಬಳ್ಳಾರಿ ನಗರದ ಪಕ್ಕದಲ್ಲೇ ಇರುವ ಹರಗಿನಡೋಣಿ, ಜಾನೆಕುಂಟೆ, ಜಾನೆಕುಂಟೆ ತಾಂಡ, ಬೆಳಗಲ್ಲು, ಬೆಳಗಲ್ಲು ತಾಂಡ ಮತ್ತು ವೇಣಿವೀರಾಪುರ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಅಲ್ಲದೇ, ಬಳ್ಳಾರಿ ನಗರಕ್ಕೆ 24/7 ಕುಡಿಯುವ ನೀರು ಪೂರೈಸಲು ಅಗತ್ಯವಿರುವ ಹೆಚ್ಚುವರಿ ನೀರನ್ನು ಅಲ್ಲೀಪುರ ಕುಡಿಯುವ ನೀರಿನ ಕೆರೆಯಲ್ಲಿ ಸಂಗ್ರಹ ಮಾಡಲು ಅನುಕೂಲವಾಗಲಿದೆ ಎಂದು ನಗರ ಶಾಸಕ ಜಿ. ಸೋಮಶೇಖರರೆಡ್ಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಕುಡತಿನಿಯ ಕೆಪಿಸಿಎಲ್‌ನಿಂದ ಕುಡತಿನಿ ಪಟ್ಟಣ, ಹರಗಿನಡೋಣಿ, ಜಾನೆಕುಂಟೆ, ಜಾನೆಕುಂಟೆ ತಾಂಡ, ಬೆಳಗಲ್ಲು, ಬೆಳಗಲ್ಲು ತಾಂಡ ಮತ್ತು ವೇಣಿವೀರಾಪುರ ಗ್ರಾಮಗಳಿಗೆ ಪೈಪ್‌ಲೈನ್‌ ಅಳವಡಿಸಲು ಮತ್ತು ಅಲ್ಲೀಪುರ ಕೆರೆಯಲ್ಲಿ ನೀರನ್ನು ಸಂಗ್ರಹ ಮಾಡಲು ಅಂದಾಜು 130.7 ಕೋಟಿ ರೂಪಾಯಿಗೂ ಹೆಚ್ಚಿನ ವೆಚ್ಚದ ಡಿಪಿಆರ್‌ ಸಿದ್ಧವಾಗುತ್ತಿದೆ. ಇಂಧನ ಇಲಾಖೆಯ ಮಟ್ಟದಲ್ಲಿ ಹಲವು ಸುತ್ತಿನ ಮಾತುಕತೆಗಳ ನಂತರ ಸರ್ಕಾರದ ಮಟ್ಟದಲ್ಲಿ ಒಪ್ಪಿಗೆ ಸಿಕ್ಕು, ಯೋಜನೆ ಖಂಡಿತವಾಗಿಯೂ ಜಾರಿ ಆಗಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಯೋಜನೆಗೆ ಅಗತ್ಯವಿರುವ ಹಣವನ್ನು ಜಿಲ್ಲಾ ಖನಿಜ ನಿಧಿ (ಡಿಎಂಎಫ್‌)ಯಿಂದ ಮತ್ತು ಇನ್ನಿತರೆ ಮೂಲಗಳಿಂದ ಪಡೆಯಲು ಅವಕಾಶವಿರುತ್ತದೆ. ಕಾರಣ ಸರ್ಕಾರದ ಹಂತದಲ್ಲಿ ಯೋಜನೆಗೆ ಒಪ್ಪಿಗೆ ಸಿಕ್ಕಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಂಡು ದಶಕಗಳ ಕಾಲದಿಂದಲೂ ಕುಡಿಯುವ ನೀರಿಗಾಗಿ ಪರದಾಡುತ್ತಿರುವ-ಹೋರಾಡುತ್ತಿರುವ ಹರಗಿನಡೋಣಿ, ಜಾನೆಕುಂಟೆ, ಜಾನೆಕುಂಟೆ ತಾಂಡ, ಬೆಳಗಲ್ಲು, ಬೆಳಗಲ್ಲು ತಾಂಡ ಮತ್ತು ವೇಣಿವೀರಾಪುರ ಗ್ರಾಮಗಳ ಜನರ ಬೇಡಿಕೆ ಈಡೇರಿದಂತೆ ಆಗಲಿದೆ.

ಟಾಪ್ ನ್ಯೂಸ್

1-murthy-aliya

UK 78 ಸಂಸದರ ರಾಜೀನಾಮೆ: ಪಿಎಂ ರಿಷಿ ಸುನಕ್‌ಗೆ ಹಿನ್ನಡೆ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

ಪ್ರಹ್ಲಾದ ಜೋಶಿ

Bellary; ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ: ಪ್ರಹ್ಲಾದ ಜೋಶಿ

1-adasas

Ballari: 55 ಕೆಜಿ ಗಾಂಜಾ ಸಹಿತ ಐವರ ಬಂಧನ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-murthy-aliya

UK 78 ಸಂಸದರ ರಾಜೀನಾಮೆ: ಪಿಎಂ ರಿಷಿ ಸುನಕ್‌ಗೆ ಹಿನ್ನಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.