ಕೆರೆ-ಹಳ್ಳಿಗಳಿಗೆ ನೀರು ಹರಿಸಲು ರೈತರ ಮನವಿ
Team Udayavani, Apr 26, 2022, 5:52 PM IST
ಆಲಮಟ್ಟಿ: ಜಾನುವಾರು ಮತ್ತು ವನ್ಯ ಜೀವಿಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಬಲದಂಡೆ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತರು ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಸೋಮವಾರ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿಗೆ ಬಾಗಲಕೋಟೆ ಜಿಲ್ಲೆಯ ಸುತಗುಂಡಾರ, ಡೊಮನಾಳ, ಬೊಮ್ಮಣಗಿ, ಹಂಡರಗಲ್ಲ, ತುರುಡಗಿ ಹಾಗೂ ಕೂಡಲಸಂಗಮದಿಂದ ಆಗಮಿಸಿದ್ದ ರೈತರು ಆಲಮಟ್ಟಿ ಬಲದಂಡೆ ಕಾಲುವೆ ಮೂಲಕ ಹಳ್ಳಗಳಿಗೆ ನೀರು ಹರಿಸುವುದರಿಂದ ಬೇಸಿಗೆಯ ಬಿರು ಬಿಸಿಲಿಗೆ ಜನ ಜಾನುವಾರುಗಳು ಹಾಗೂ ವನ್ಯ ಜೀವಿಗಳು ನೀರಿಗಾಗಿ ಪರಿತಪಿಸುವಂತಾಗಿದೆ. ಆದ್ದರಿಂದ ಆಲಮಟ್ಟಿ ಬಲದಂಡೆ ಕಾಲುವೆ ಮೂಲಕ ಕೆರೆ ಹಳ್ಳಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯ ಅಭಿಯಂತರರ ಪರವಾಗಿ ಮನವಿ ಸ್ವೀಕರಿಸಿದ ಕಾರ್ಯಪಾಲಕ ಅಭಿಯಂತರ ಬಿ.ಎಸ್. ಪಾಟೀಲ ಅವರು ತಮ್ಮ ಮನವಿ ಹಿರಿಯ ಅಧಿಕಾರಿಗಳಿಗೆ ತಲುಪಿಸಲಾಗುವುದು ಎಂದರು.
ಮಂಜುನಾಥ ಬೂದಿಹಾಳ, ಶ್ರೀಶೈಲ ಬಿದರಕುಂದಿ, ಪರಸಪ್ಪ ಚಲವಾದಿ, ಬಿ.ಎಸ್.ನಾಗೋಡ, ಎಂ.ಎಂ.ಪಾಟೀಲ, ಪರಶು ಹಬ್ಬದ, ಎಸ್.ಎಸ್.ರೊಟ್ಟಿ, ಜಿ.ವೈ. ಮೇಟಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ