ಪುತ್ತೂರು : ಕೋಮು ಪ್ರಚೋದಕ ಸಂದೇಶ ರವಾನೆ : ಗೃಹರಕ್ಷಕ ಸಿಬಂದಿ ಅಮಾನತು
Team Udayavani, Apr 26, 2022, 7:57 PM IST
ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಸಂದೇಶ ರವಾನಿಸಿದ ಕಾರಣಕ್ಕಾಗಿ ಗೃಹರಕ್ಷಕ ದಳದ ಸಿಬಂದಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಪುತ್ತೂರು ನಗರದ ಸಾಲ್ಮರ ನಿವಾಸಿ ಸಲಾಮುದ್ದೀನ್ ನೌಷದ್ ಕೋಮು ಸಾಮರಸ್ಯಕ್ಕೆ ಧಕ್ಕೆ ತರಬಹುದಾದ ಅವಹೇಳನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿದ್ದ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಶಾಸಕ ಸಂಜೀವ ಮಠಂದೂರು ಗೃಹರಕ್ಷಕ ದಳದ ಕಮಾಂಡೆಂಡ್ ಮುರಳಿ ಮೋಹನ್ ಚೂಂತಾರ್ ಅವರ ಗಮನಕ್ಕೆ ತಂದು ಕ್ರಮಕ್ಕೆ ಸೂಚನೆ ನೀಡಿದ್ದರು. ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿರುವ ಕಮಾಂಡೆಂಟ್ ಅವರು ಸಿಬಂದಿಯನ್ನು ಸೇವೆಯಿಂದ ಅಮಾನತಿನಲ್ಲಿ ಇರಿಸಿದ್ದಾರೆ.
ಇದನ್ನೂ ಓದಿ : ಮಗನ ಶವವನ್ನು ಬೈಕ್ ನಲ್ಲೇ 90K.M ಸಾಗಿಸಿದ ತಂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ