ಪ್ರಕೃತಿ ಸಂರಕ್ಷಣೆಗೆ ಬೇಕಿದೆ ಪ್ರತಿಜ್ಞೆ: ಡಾ| ಹೆಗ್ಗಡೆ

ಪಶ್ಚಿಮ ಘಟ್ಟ ಸಂರಕ್ಷಣೆ, ನೇತ್ರಾವತಿ ನದಿ ಪ್ರಾಮುಖ್ಯತೆ - ವಿಚಾರ ಸಂಕಿರಣ

Team Udayavani, Apr 27, 2022, 5:10 AM IST

ಪ್ರಕೃತಿ ಸಂರಕ್ಷಣೆಗೆ ಬೇಕಿದೆ ಪ್ರತಿಜ್ಞೆ: ಡಾ| ಹೆಗ್ಗಡೆ

ಬೆಳ್ತಂಗಡಿ: ವೈಜ್ಞಾನಿಕ ಪ್ರಗತಿಯ ಹೆಸರಿನಲ್ಲಿ ಮನುಷ್ಯನು ಪ್ರಕೃತಿಯ ಮೊದಲ ಶತ್ರುವಾಗಿ ಪರಿಣಮಿಸಿದ್ದರಿಂದ ನೈಸರ್ಗಿಕ ಅಸಮ ತೋಲನಕ್ಕೆ ಕಾರಣವಾಗಿದೆ. ಭವಿಷ್ಯದ ಪೀಳಿಗೆಯನ್ನು ಗಮನದಲ್ಲಿರಿಸಿ ಕೊಂಡು ಅರಣ್ಯ ಸಂರಕ್ಷಣೆಯೆಡೆಗೆ ಪ್ರತಿಜ್ಞೆ ಮಾಡುವ ಸಂಕಲ್ಪವಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಕರ್ನಾಟಕ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ, ಅರಣ್ಯ ಇಲಾಖೆ ಮತ್ತು ಶ್ರೀ ಧ.ಮಂ. ಕಾಲೇಜಿನ ಆಶ್ರಯದಲ್ಲಿ ಉಜಿರೆಯ ಶ್ರೀ ಸಿದ್ಧವನ ಗುರುಕುಲದಲ್ಲಿ ಮಂಗಳವಾರ ನಡೆದ “ಪಶ್ಚಿಮ ಘಟ್ಟಗಳ ಸಂರಕ್ಷಣೆ, ಮಹತ್ವ, ನೇತ್ರಾವತಿ ಮತ್ತು ಇತರ ಉಪನದಿಗಳ ಪವಿತ್ರತೆ-ಪ್ರಾಮುಖ್ಯತೆ’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂದು ಹಿರಿಯರು ಪ್ರಕೃತಿ ಸಂರಕ್ಷ ಣೆಯ ಉದ್ದೇಶದಿಂದ ಮರಗಿಡಗಳಲ್ಲಿ ದೇವರು, ಧರ್ಮ ಸಂಬಂಧಿತ ನಂಬಿಕೆಯನ್ನಿರಿಸಿ ಆರಾಧಿಸಿದ್ದರು. ನಾವು ಆಶ್ರಯಿಸಿರುವ ಭೂಮಿ ಪ್ರಕೃತಿ ಅಥವಾ ದೇವರು ನೀಡಿರುವಂತಹದು. ವಿದೇಶಗಳಲ್ಲಿ ಅರಣ್ಯವನ್ನು ಉಳಿಸಿ ಕೊಳ್ಳುವ ಪ್ರಜ್ಞೆ ಇದ್ದು, ಆ ಕಾರಣಕ್ಕಾಗಿಯೇ ವ್ಯಾಪಕ ಮಳೆಕಾಡುಗಳು ಅಲ್ಲಿವೆ. ನಮ್ಮಲ್ಲಿಯೂ ವೈವಿಧ್ಯಮಯ ನೈಸರ್ಗಿಕ ಸಂಪನ್ಮೂಲ ಇದೆಯಾದರೂ ಅಭಿವೃದ್ಧಿ, ವಾಣಿಜ್ಯಿಕ ಲಾಭದ ಉದ್ದೇಶಗಳಿಗಾಗಿ ನಿಸರ್ಗಕ್ಕೆ ಧಕ್ಕೆಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

54 ಸಾವಿರ ಗಿಡ ನಾಟಿ
ವನ್ಯಜೀವಿಗಳು ಇಂದು ಆಹಾರ ಅರಸುತ್ತಾ ನಾಡಿಗೆ ಬಂದು ಮನು ಷ್ಯನ ಹಾವಳಿಗೆ ತುತ್ತಾಗುತ್ತಿವೆ. ಮಾತು ಬರುತ್ತಿದ್ದರೆ ಅವುಗಳೂ ಸಂಘಟಿತ ವಾಗುತ್ತಿದ್ದವು. ಆದರೆ ಮನುಷ್ಯನ ಹಾವಳಿಯ ವಿರುದ್ಧ ಧ್ವನಿ ಎತ್ತಲಾಗದಂತ ಪರಿಸ್ಥಿತಿ ಅವುಗಳದು. ಅವುಗಳ ಆಹಾರಕ್ರಮಕ್ಕೆ ಅನುಗುಣವಾಗಿ ಧರ್ಮಸ್ಥಳ ಕ್ಷೇತ್ರವು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಅರಣ್ಯ ಭಾಗದಲ್ಲಿ 54,000 ಹಣ್ಣಿನ ಗಿಡಗಳನ್ನು ನಾಟಿ ಮಾಡಿದೆ. ಈ ಯೋಜನೆ ಮುಂದುವರಿಯಲಿದೆ ಎಂದು ಡಾ| ಹೆಗ್ಗಡೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಮಾತ ನಾಡಿ, ನಮ್ಮ ಹೃದಯಕ್ಕೆ ಹತ್ತಿರವಾಗುವ ಕಾಲಕ್ಕೆ ಅಗತ್ಯವಿರುವ ಯೋಜನೆಗಳಿಗೆ ಆದ್ಯತೆ ನೀಡಬೇಕು. ಪಂಚಭೂತಗಳಿಂದ ಸೃಷ್ಟಿಯಾದ ಈ ಶರೀರ ಪಂಚಭೂತ ಗಳೊಂದಿಗೆ ಸಮನ್ವಯದಿಂದ ಬದುಕಿದಾಗಿ ಜೀವನಕ್ಕೊಂದು ಅರ್ಥ ಬರುತ್ತದೆ ಎಂದರು.
ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪ ಅವರು ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಅಗತ್ಯವನ್ನು ತಿಳಿಸಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‌ ಎಸ್‌. ನಟಾಲ್ಕರ್‌, ಉಜಿರೆ ಎಸ್‌ಡಿಎಂ ಕಾಲೇಜು ಪ್ರಾಂಶುಪಾಲರಾದ ಡಾ| ಪಿ.ಎನ್‌. ಉದಯಚಂದ್ರ, ಡಿಎಫ್‌ಒ ದಿನೇಶ್‌ ಕುಮಾರ್‌ ಉಪಸ್ಥಿತರಿದ್ದರು.ಪ್ರಾಧ್ಯಾಪಕ ಡಾ| ಕುಮಾರ್‌ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಜಲಮೂಲ ಸ್ವಚ್ಛವಾಗಿರಿಸೋಣ
ಅರಣ್ಯ ಸಂರಕ್ಷಣೆ ನಮ್ಮದೇ ಹೊಣೆ; ಅರಣ್ಯ ಇಲಾಖೆ, ಸರಕಾರ ನಮ್ಮ ಪ್ರತಿನಿಧಿಗಳು. ಧರ್ಮಸ್ಥಳದಲ್ಲಿ 40 ವರ್ಷಗಳಿಂದ ಅಡುಗೆ ಮತ್ತಿತರ ಉದ್ದೇಶಗಳಿಗೆ ಉರುವಲು, ಮರದ ಉತ್ಪನ್ನ ಬಳಸದೆ ಪರ್ಯಾಯ ಸಂಪನ್ಮೂಲಗಳನ್ನು ಬಳಸಲಾಗುತ್ತಿದೆ. ಕಿಟಕಿ-ಬಾಗಿಲುಗಳಿಗೆ ಮರದ ಬದಲು ಫೈಬರ್‌ ಉತ್ಪನ್ನವನ್ನು ಬಳಸಲಾಗುತ್ತಿದೆ. ಅರಣ್ಯವಾಸಿಗಳನ್ನು ಸ್ಥಳಾಂತರಿಸುವ ಮುನ್ನ ಜೀವನ ಭದ್ರತೆಗೆ ಬೇಕಾದ ಪರಿಹಾರ ನೀಡಬೇಕು. ನದಿಗಳಲ್ಲಿ ಮುಳುಗುವುದರಿಂದ ಪವಿತ್ರವಾಗುತ್ತೇವೆ ಎಂದುಕೊಳ್ಳುವ ನಾವು ಇದೇ ವೇಳೆ ಜಲಮೂಲಗಳನ್ನು ಸ್ವಚ್ಛವಾಗಿರಿಸಬೇಕು. ಅದಕ್ಕಾಗಿ ಕ್ಷೇತ್ರದಿಂದ 500 ಕೆರೆಗಳ ಪುನಶ್ಚೇತನ ಮಾಡಲಾಗಿದೆ ಎಂದು ಡಾ| ಹೆಗ್ಗಡೆ ತಿಳಿಸಿದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.