ಶುಲ್ಕ ಕಟ್ಟಿದರೂ ಇಲ್ಲರೀ ತ್ಯಾಜ್ಯ ವಿಲೇವಾರಿ


Team Udayavani, Apr 27, 2022, 1:21 PM IST

12waste

ರಾಯಚೂರು: ಕೆಲಸಕ್ಕೆ ಕರಿಬೇಡಿ ಊಟಕ್ಕೆ ಮರಿಬೇಡಿ ಎನ್ನುವಂತಾಗಿದೆ ರಾಯಚೂರು ನಗರಸಭೆ ವರಸೆ.

ನಗರದ ಹೊರವಲಯದ ಸಾಕಷ್ಟು ಬಡಾವಣೆಗಳಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡದಿದ್ದರೂ ಪ್ರತಿ ವರ್ಷ ಶುಲ್ಕ ಮಾತ್ರ ಪಾವತಿಸಬೇಕಿದೆ. ಇಷ್ಟು ದಿನ ಆಸ್ತಿ ಕರದ ಜತೆಗೆ ಈ ಶುಲ್ಕ ಪಾವತಿಸುತ್ತಿದ್ದ ಕಾರಣ ಜನರಿಗೆ ಅದು ತಿಳಿಯುತ್ತಿರಲಿಲ್ಲ. ಆದರೆ, ಈಗ ಘನತ್ಯಾಜ್ಯ ವಿಲೇವಾರಿ ಶುಲ್ಕವೂ ಪ್ರತ್ಯೇಕವಾಗಿ ಪಾವತಿಸಬೇಕಿದೆ. ಅದಕ್ಕೆ ಪ್ರತ್ಯೇಕ ಚಲನ್‌ ಪಡೆದು ಭರ್ತಿ ಮಾಡಬೇಕಿದೆ.

ತಿಂಗಳಿಗೆ 10 ರೂ.ನಂತೆ ವರ್ಷಕ್ಕೆ 120 ರೂ. ಪಾವತಿಸಬೇಕಿದ್ದು, ಸ್ಥಳದ ಅಳತೆ ಆಧರಿಸಿ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಉದಾಹರಣೆಗೆ 30×40 ಅಳತೆಯ ಸ್ಥಳವಿದ್ದರೆ ಆಸ್ತಿ ತೆರಿಗೆ ಜತೆಗೆ ಘನತ್ಯಾಜ್ಯ ವಿಲೇವಾರಿ ಶುಲ್ಕ 120 ರೂ. ಪಾವತಿಸಬೇಕು. ನಿವೇಶನ ಅಳತೆ 40×60 ಇದ್ದಲ್ಲಿ 180 ರೂ. ವಾಣಿಜ್ಯ ವಕಯಗಳಾದರೆ ಈ ಶುಲ್ಕ ಇನ್ನೂ ಹೆಚ್ಚಾಗುತ್ತದೆ. ಇಷ್ಟು ದಿನ ಆಸ್ತಿ ತೆರಿಗೆ ಪಾವತಿಸುತ್ತಿದ್ದ ಜನರಿಗೆ ಈ ಬಗ್ಗೆ ಗೊತ್ತಿರಲಿಲ್ಲ. ಈಚೆಗೆ ನಗರಸಭೆ ಶೇ.3ರಷ್ಟು ತೆರಿಗೆ ಹೆಚ್ಚಳ ಮಾಡಿದೆ.

ಈ ತಿಂಗಳು ಕೊನೆವರೆಗೆ ಶೇ.5ರಷ್ಟು ರಿಯಾಯಿತಿ ಇರುವ ಕಾರಣ ಜನ ಹೆಚ್ಚಾಗಿ ತೆರಿಗೆ ಪಾವತಿಗೆ ಬರುತ್ತಿದ್ದು, ಈಗ ಜನರಿಗೆ ಬಿಸಿ ಮುಟ್ಟುತ್ತಿದೆ. ಆದರೆ, ನಮ್ಮ ಬಡಾವಣೆಯಲ್ಲಿ ತ್ಯಾಜ್ಯ ವಿಲೇವಾರಿಗೆ ವಾಹನಗಳೇ ಬರುವುದಿಲ್ಲ. ತಿಂಗಳುಗಳು ಕಳೆದೂ ಕಸ ತೆರವು ಮಾಡುವುದಿಲ್ಲ. ಸಂಬಂಧಿಸಿದ ವಾರ್ಡ್‌ ಸದಸ್ಯರಿಗೆ, ಅಧಿಕಾರಿಗಳಿಗೆ ತಿಳಿಸಿದರೂ ಕೇಳ್ಳೋರಿಲ್ಲ. ಇನ್ನೂ ಕಸ ವಿಲೇವಾರಿ ವಾಹನಗಳು ನಗರದ ಕೆಲ ಬಡಾವಣೆಗಳಲ್ಲಿ ಮಾತ್ರ ಓಡಾಡುತ್ತಿದ್ದು, ಹೊರವಲಯದ ಬಡಾವಣೆಗಳತ್ತ ಮುಖ ಮಾಡುವುದಿಲ್ಲ. ಇನ್ನೂ ಪೌರ ಕಾರ್ಮಿಕರು ಎಲ್ಲಿರುತ್ತಾರೋ, ಯಾವಾಗ ಕಸ ಗುಡಿಸುತ್ತಾರೋ ತಿಳಿಯುವುದಿಲ್ಲ.

ಕಂಡಕಂಡಲ್ಲಿ ಕಸ ತುಂಬಿರುತ್ತದೆ. ಚರಂಡಿಗಳಿಂದ ಕಸ ಹೊರಗೆ ತೆಗೆದರೂ ಅದನ್ನು ಗಾಡಿಗಳಿಗೆ ತುಂಬಿಕೊಂಡು ಹೋಗಲು ವಾರಗಟ್ಟಲೇ ಕಾಲಕ್ಷೇಪ ಮಾಡುತ್ತಾರೆ. ಸುತ್ತಲಿನ ನಿವಾಸಿಗಳು ದುರ್ನಾತದಲ್ಲೇ ಕಾಲ ಕಳೆಯುವಂತಾಗುತ್ತದೆ. ಆದರೆ, ನಗರಸಭೆ ಸೌಲಭ್ಯ ಸರಿಯಾಗಿ ಕಲ್ಪಿಸದಿದ್ದರೂ ಶುಲ್ಕ ಮಾತ್ರ ಸರಿಯಾಗಿ ಕಟ್ಟಿಸಿಕೊಳ್ಳುತ್ತದೆ ಎಂದು ದೂರುತ್ತಾರೆ ಸಾರ್ವಜನಿಕರು.

ಘನತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಶುಲ್ಕ ಪಡೆಯುತ್ತಿಲ್ಲ. ಇಷ್ಟು ದಿನ ಆಸ್ತಿ ತೆರಿಗೆ ಜತೆಗೆ ಪಡೆಯಲಾಗುತ್ತಿತ್ತು. ಈಗ ಪ್ರತ್ಯೇಕ ಚಲನ್‌ ನೀಡಲಾಗುತ್ತಿದೆ. ಸಮರ್ಪಕ ತ್ಯಾಜ್ಯ ವಿಲೇವಾರಿ ದೃಷ್ಟಿಯಿಂದಲೇ 29 ವಾಹನಗಳನ್ನು ಖರೀದಿಸಿದ್ದು, ಶೀಘ್ರದಲ್ಲೇ ಸೇವೆ ಲಭ್ಯವಾಗಲಿದೆ. -ಕೆ.ಮುನಿಸ್ವಾಮಿ, ನಗರಸಭೆ ಪೌರಾಯುಕ್ತ

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.