ರಸ್ತೆಗಳಿಗೆ ರಂಗೋಲಿ; ಕಾಂಗ್ರೆಸ್ ಪ್ರತಿಭಟನೆ
ಮೂಲ ಸೌಲಭ್ಯ ಕಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟರ ವಿಫಲ-ಆರೋಪ
Team Udayavani, Apr 28, 2022, 10:36 AM IST
ಹುಬ್ಬಳ್ಳಿ: ಮೂಲ ಸೌಲಭ್ಯ ಕಲ್ಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ರಸ್ತೆಗಳಿಗೆ ರಂಗೋಲಿಯಿಂದ ಅಲಂಕಾರ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.
ಹಲವು ಸಮಸ್ಯೆಗಳ ಕುರಿತು ಸ್ಥಳೀಯರು ಶಾಸಕರು ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದೆ. ಹೋರಾಟಗಳನ್ನು ಕೂಡ ಮಾಡಲಾಲಾಗಿದೆ. ಆದರೆ ಜನರ ಸಮಸ್ಯೆಗಳಿಗೆ ಕಿವಿಗೊಡುವ ಕಾಳಜಿಯಿಲ್ಲದಂತಾಗಿದೆ. ಹೀಗಾಗಿ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ಗಮನ ಸೆಳೆಯುವ ನಿಟ್ಟಿನಲ್ಲಿ ರಂಗೋಲಿ ಬಿಡಿಸಿ ಪ್ರತಿಭಟಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ಅವರು ವಾರ್ಡ್ 58ರ ಪ್ರತಿಷ್ಠಿತ ಓಂ ಹೋಟೆಲ್ ಎದುರಿನ ಕೇಕ್ ಕಾರ್ನ್ ದಿಂದ ಸೈಂಟ್ ಮೈಕಲ್ ಸ್ಕೂಲ್ ಹತ್ತಿರದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಅದನ್ನು ಸರಿಪಡಿಸಬೇಕಾದ ಅಧಿಕಾರಿಗಳು ಇತ್ತ ಕಣ್ತೆರೆದು ನೋಡುತ್ತಿಲ್ಲ. ಜತೆಗೆ ಈ ಭಾಗದ ಶಾಸಕರು ಕಣ್ತೆರೆದು ನೋಡುತ್ತಿಲ್ಲ. ತಾವು ಓಡಾಡುವ ರಸ್ತೆಗಳನ್ನು ಹೈಟೆಕ್ ಮಾದರಿಯಲ್ಲಿ ಮಾಡಿಕೊಂಡಿದ್ದಾರೆ. ಜನರ ಸಾಮಾನ್ಯ ರಸ್ತೆಗಳ ದುಸ್ಥಿತಿ ಅವರಿಗೆ ಕಾಣುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ಸಂತೋಷ ಚಲವಾದಿ, ಹೂವಪ್ಪ ದಾಯಗೋಡಿ, ತೇಜರಾಜ್ ಜೈನ್, ಪ್ರೀತೇಶ ಪಾಲ್ಗೊಟ, ಸುರೇಶ, ಅಶೋಕ ನರಗುಂದ ಸೇರಿದಂತೆ ಸ್ಥಳೀಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ