ತುಳಜಾಪುರ ಗ್ರಾಮದಲ್ಲಿ ಕುಡಿವ ನೀರಿಗಾಗಿ ನಿರಶನ
Team Udayavani, Apr 28, 2022, 1:27 PM IST
ಔರಾದ: ಸಮರ್ಪಕ ಕುಡಿವ ನೀರು ಸರಬರಾಜು ಹಾಗೂ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ತಾಲೂಕಿನ ತುಳಜಾಪುರ ಗ್ರಾಮಸ್ಥರು ಎಕಲಾರ ಗ್ರಾಪಂ ಕಚೇರಿಯಲ್ಲಿ ಪಿಡಿಒಗೆ ಘೇರಾವ ಹಾಕಿ ಪ್ರತಿಭಟಿಸಿದರು.
ತುಳಜಾಪುರ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರಿಲ್ಲದೆ ಜನ ಪರದಾಡುತ್ತಿದ್ದಾರೆಂದು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರು ಪ್ರಯೋಜನವಾಗಿಲ್ಲ. ಹೀಗಾಗಿ ಇಂದು ಕಚೇರಿಗೆ ಬಂದು ಪ್ರತಿಭಟನೆ ನಡೆಸಿ ಘೇರಾವ್ ಹಾಕಲಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ತಾಪಂ ಸಹಾಯಕ ನಿರ್ದೇಶಕ ಸುದೇಶ ಕೊಡೆ ಭೇಟಿ ನೀಡಿ, ಗ್ರಾಮದಲ್ಲಿ ನೂತನ ಕೊಳವೆ ಬಾವಿ ಕೊರೆಯುವ ಕಾರ್ಯ ಮಾಡಲಾಗುವುದು. ಸದ್ಯ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಕುಡಿಯಲು ತೆಗೆದುಕೊಂಡು ಬನ್ನಿ. ಅದರಂತೆ ಮೂರು ಟ್ಯಾಂಕ್ ನೀರು ಸರಬರಾಜು ಮಾಡಲಾಗಿದ್ದು, ಶೀಘ್ರ ನೀರಿನ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಚಂದ್ರಕಾಂತ ಸಿಂಧೆ, ವೀರಶಟ್ಟಿ ಸಿಂಧೆ, ಸಂತೋಷ ಕಾಂಬಳೆ, ಪ್ರತ್ವಿ, ಶಾಂತಾಬಾಯಿ, ಸರುಬಾಯಿ, ಉತ್ತಮಬಾಯಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ