ಗೊಂದಲ-ವಿವಾದ ಸೃಷ್ಟಿಸಿದ ಬುಲ್ಡೋಜರ್‌!

ನಗರಸಭೆಯಿಂದ ಸಚ್ಛತಾ ಕಾರ್ಯಕ್ಕೆ ಜೆಸಿಬಿ ಬಳಕೆ

Team Udayavani, Apr 28, 2022, 5:06 PM IST

bulldozer

ಚಿಕ್ಕಮಗಳೂರು: ಕೆಲ ರಾಜ್ಯಗಳಲ್ಲಿ ಸರ್ಕಾರಿ ಜಾಗ ಒತ್ತುವರಿ ತೆರವು ಸೇರಿದಂತೆ ಹಲವು ಅಕ್ರಮ ತಡೆಗೆ ಬುಲ್ಡೋಜರ್‌ ಮಾದರಿ ಅನುಸರಿಸಲಾಗುತ್ತಿದ್ದು, ರಾಜ್ಯದಲ್ಲೂ ಬುಲ್ಡೋಜರ್‌ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆದಿವೆ. ಈ ಮಧ್ಯೆ ಚಿಕ್ಕಮಗಳೂರಿನಲ್ಲಿ ಬುಲ್ಡೋಜರ್‌ ಕಾರ್ಯಾಚರಣೆಯೊಂದು ಭಾರೀ ಸದ್ದು ಮಾಡಿದ್ದು, ಸ್ವಚ್ಛತಾ ಕಾರ್ಯಕ್ಕೆ ಬುಲ್ಡೋಜರ್‌ ಬಳಕೆಯಾಗಿದ್ದು ಬೇರೆ ಬೇರೆ ಸ್ವರೂಪ ಪಡೆದು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿ ಚರ್ಚೆಗೆ ಗ್ರಾಸವಾಗಿದೆ.

ಆಗಿದ್ದೇನು?

ನಗರಸಭೆಯಿಂದ ಸ್ವಚ್ಛತಾ ಕಾರ್ಯಕ್ಕಾಗಿ ಬುಲ್ಡೋಜರ್‌ ಬಳಸಲಾಗಿತ್ತು. ಇದರ ವಿಡಿಯೋ ಹರಿಬಿಟ್ಟು, ‘ಬುಲ್ಡೋಜರ್‌ ಕಾರ್ಯಾಚರಣೆಗಿಳಿದ ಹಿಂದೂ ಕಾರ್ಯಕರ್ತರು’ ಎಂಬ ತಲೆಬರಹ ಬರೆದು ವೈರಲ್‌ ಆಗಿರುವುದು ಗೊಂದಲ ಸೃಷ್ಟಿಸಿದೆ. ಅಂಗಡಿ ಎದುರು ಜೆಸಿಬಿ ನಿಲ್ಲಿಸಿಕೊಂಡು ಕೆಲವರು ಅಂಗಡಿ ಮುಂಭಾಗದಲ್ಲಿರುವ ವಸ್ತುಗಳ ತೆರವಿಗೆ ಸೂಚನೆ ನೀಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಬುಲ್ಡೋಜರ್‌ ಕಾರ್ಯಾಚರಣೆ ನಡೆಸಲು ಅಧಿಕಾರ ನೀಡಿದವರು ಯಾರು? ಎಂಬಿತ್ಯಾದಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರಸಭೆಯಿಂದ ಕಾರ್ಯಾಚರಣೆ

ಜಾಲತಾಣದಲ್ಲಿ ವಿಡಿಯೂ ವೈರಲ್‌ ಆಗುತ್ತಿದ್ದಂತೆ ಪರಿಶೀಲಿಸಿದಾಗ ಇದರ ಅಸಲಿಯತ್ತು ಬೆಳಕಿಗೆ ಬಂದಿದೆ. ಅಂಗಡಿ ಮುಂದೆ ಜೆಸಿಬಿ ನಿಲ್ಲಿಸಿಕೊಂಡು ಅಂಗಡಿ ಮುಂಭಾಗದ ಸಾಮಾನು ಸರಂಜಾಮುಗಳನ್ನು ತೆರವು ಮಾಡುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡುತ್ತಿರುವವರು ಯಾವುದೇ ಸಂಘಟನೆಗಳ ಕಾರ್ಯಕರ್ತರಲ್ಲ. ವಿಡಿಯೋದಲ್ಲಿರುವ ವ್ಯಕ್ತಿಗಳು ನಗರಸಭೆ ಅಧ್ಯಕ್ಷ, ಪೌರಾಯುಕ್ತ ಹಾಗೂ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಂಬುದು ತಿಳಿದು ಬಂದಿದೆ.

ಮಂಗಳವಾರ ನಗರಸಭೆ 32ನೇ ವಾರ್ಡ್‌ ನಲ್ಲಿ ಸ್ವಚ್ಛತಾ ಕಾರ್ಯ ನಡೆಸುವ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು ಮತ್ತು ಸಿಬ್ಬಂದಿ ಅಂಗಡಿ ಮುಂಭಾಗದ ಫುಟ್‌ಪಾತ್‌ ಮೇಲೆ ಸರಕುಗಳನ್ನು ಇಟ್ಟು ಮಾರಾಟ ಮಾಡದಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಅದೇ ವಾರ್ಡ್‌ನ ಚರಂಡಿ ಸ್ವಚ್ಛಗೊಳಿಸಲು ಜೆಸಿಬಿ ಯಂತ್ರ ತೆಗೆದುಕೊಂಡು ಹೋಗಿದ್ದು, ಅಂಗಡಿ ಮುಂಭಾಗದಲ್ಲಿ ನಿಲ್ಲಿಸಿದ್ದು, ಇಷ್ಟೆಲ್ಲ ಗೊಂದಲಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಲ್ಲದೇ ಅದಕ್ಕೆ ಚಿಕ್ಕಮಗಳೂರಿನಲ್ಲಿ ಬುಲ್ಡೋಜರ್‌ ಕಾರ್ಯಾಚರಣೆಗಿಳಿದ ಹಿಂದೂ ಕಾರ್ಯಕರ್ತರು ತಲೆಬರಹ ನೀಡಿದ್ದು ನಗರಸಭೆ ಸಿಬ್ಬಂದಿ ಯನ್ನೇ ತಪ್ಪಾಗಿ ಅರ್ಥೈಸಿಕೊಂಡಿರುವುದು ಗೊಂದಲವನ್ನು ಹೆಚ್ಚಿಸಿದೆ.

ನಗರಸಭೆ ಅಧ್ಯಕ್ಷ-ಪೌರಾಯುಕ್ತರ ವಿರುದ್ಧವೂ ಆಕ್ರೋಶ

ನಗರಸಭೆ ಜಾಗ ಒತ್ತುವರಿ ತೆರವಿಗೆ ಅಧಿಕಾರಿಗಳು ಮಾಲೀಕರಿಗೆ ನೋಟಿಸ್‌ ನೀಡಬೇಕು ಆ ಬಳಿಕ ತೆರವುಗೊಳಿಸಬೇಕೆಂಬ ಕಾನೂನು ಇದೆ. ಆದರೆ ನಗರಸಭೆ ಸಿಬ್ಬಂದಿ ಕಾನೂನು ಗಾಳಿಗೆ ತೂರಿದ್ದಾರೆ. ಅಂಗಡಿ ಮುಂದೇ ಜೆಸಿಬಿ ನಿಲ್ಲಿಸಿಕೊಂಡು ಜಾಗ ತೆರವು ಮಾಡಿದ ರೀತಿ ಸರಿಯಿಲ್ಲ. ಜೆಸಿಬಿ ಯಂತ್ರ ತೋರಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿ ಸಲಾಗುತ್ತಿದೆ ಎಂದು ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಗೌರಿ ಕಾಲುವೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ್ದೇವೆ. ವಿಡಿಯೋದಲ್ಲಿರುವವರು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ. ಅಂಗಡಿಯೊಂದರ ಮುಂದೆ ರಸ್ತೆ ಪಕ್ಕದ ಜಾಗದಲ್ಲಿ ಅಂಗಡಿ ವಸ್ತುಗಳನ್ನು ಜೋಡಿಸಿಟ್ಟಿದ್ದರು. ಅದನ್ನು ತೆರವು ಮಾಡಲು ಸೂಚನೆ ನೀಡಿದ್ಧೇವೆ. ಚರಂಡಿ ತ್ಯಾಜ್ಯ ತೆಗೆಯಲು ಜೆಸಿಬಿ ಕೊಂಡೊಯ್ದಿದ್ದು ನಗರಸಭೆಯಿಂದ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಿಲ್ಲ. ಸರ್ಕಾರಿ ಜಾಗ ಒತ್ತುವರಿ ಮಾಡಿದವರಿಗೆ ನೋಟಿಸ್‌ ನೀಡಿ ತೆರವು ಮಾಡಲಾಗುತ್ತಿದೆ. ಯಾರೋ ಕಿಡಿಗೇಡಿಗಳು ತಿರುಚಿ ಹಾಕಿರುವ ವಿಡಿಯೋ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರಿಂದ ಈ ಗೊಂದಲ ಸೃಷ್ಟಿಯಾಗಿದೆ.  -ವರಸಿದ್ಧಿ ವೇಣುಗೋಪಾಲ್‌, ನಗರಸಭೆ ಅಧ್ಯಕ್ಷ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.