ಕಚ್ಚಾ ಕಾಗದ, ಮುದ್ರಣ ಸಾಮಗ್ರಿ ಬೆಲೆಯೇರಿಕೆ ಖಂಡಿಸಿ ಪ್ರತಿಭಟನೆ
Team Udayavani, Apr 28, 2022, 10:03 PM IST
ಬೆಂಗಳೂರು: ಹೆಚ್ಚಾಗುತ್ತಿರುವ ಕಚ್ಚಾ ಕಾಗದ ಹಾಗೂ ಮುದ್ರಣ ಸಾಮಗ್ರಿಗಳ ಬೆಲೆ ಹೆಚ್ಚುತ್ತಿರುವುದರಿಂದ ಮುದ್ರಣಕ್ಕೆ ಎದುರಾಗಿರುವ ಸಮಸ್ಯೆಯನ್ನು ರಾಜ್ಯ ಸರಕಾರ ಮಧ್ಯ ಪ್ರವೇಶಿಸಿ ಪರಿಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪಠ್ಯ ಪುಸ್ತಕ ಮುದ್ರಕರ ಸಂಘದ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಂಘದ ಅಧ್ಯಕ್ಷ ಸತ್ಯ ಕುಮಾರ್ ಮಾತನಾಡಿ, ಒಂದು ಟನ್ ಕಾಗದದ ಬೆಲೆ ಸುಮಾರು 60,000ದಿಂದ 90,000ಕ್ಕೆ ಏರಿಕೆಯಾಗಿದೆ. ಮುದ್ರಣದ ಮೂಲ ಸಾಮಗ್ರಿಗಳಾದ ಶಾಯಿ, ಪ್ಲೇಟ್, ಕೆಮಿಕಲ್ಸ್ ಸಹಿತ ಎಲ್ಲ ಸಾಮಗ್ರಿಗಳ ಬೆಲೆ ದುಬಾರಿಯಾಗಿದೆ. ಪಠ್ಯಪುಸ್ತಕ, ಪತ್ರಿಕೆ, ಲೇಖನ ಸಾಮಗ್ರಿಗಳನ್ನು ಮುದ್ರಿಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ರಾಜ್ಯ ಸರಕಾರ ಮುದ್ರಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಕಾಗದ ಸರಬರಾಜು ಮಾಡುವ ಮಿಲ್ಗಳಿಗೆ ಸ್ಪಷ್ಟವಾದ ಸೂಚನೆ ನೀಡಿ, ಸ್ಥಳೀಯ ಮುದ್ರಕರ ಬೇಡಿಕೆಗೆ ಅನುಗುಣವಾಗಿ ಅಗತ್ಯ ಕಾಗದಗಳನ್ನು ಪೂರೈಸಲು ಆದೇಶ ನೀಡಬೇಕು ಮುಖ್ಯಮಂತ್ರಿಗೆ ಮನವಿ ಮಾಡಿದರು.
ಪತ್ರಿಕೆಗಳು ದೈನಂದಿನ ಮುದ್ರಣಕ್ಕೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಇದೇ ರೀತಿ ಬೆಲೆ ಏರಿಕೆಯಾದರೆ ಪತ್ರಿಕೆಗಳನ್ನು ಸ್ಥಗಿತಗೊಳಿಸಬೇಕಾದೀತು. ಪ್ರಸ್ತುತ ಮುಂಗಡ ಪಾವತಿಸಿದರೂ ಮುದ್ರಣದ ಕಾಗದ ದೊರೆಯದ ಪರಿಸ್ಥಿತಿ ಇದೆ. ಈ ಬಗ್ಗೆ ಕೇಂದ್ರ ಸರಕಾರ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ತುರ್ತಾಗಿ ಸಭೆ ನಡೆಸಬೇಕಾಗಿದೆ ಎಂದರು.
ಸಂಘದ ಉಪಾಧ್ಯಕ್ಷ ಗೋಪಾಕೃಷ್ಣ, ಖಜಾಂಚಿ ನಾಗಸುಂದರ್, ವಿ. ಶ್ರೀನಿವಾಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ