ಅನ್ನ ಮೂಲದ ಆರ್ಥಿಕತೆ ಮುನ್ನೆಲೆಗೆ ಬಂದಾಗ ನೆಮ್ಮದಿ; ಬರಗೂರು

ಕೂಲಿ ಕಾರ್ಮಿಕರು ಮಾತ್ರ ಬರಿಗಾಲಿನಿಂದ ನಡೆ ನಡೆದು ಸತ್ತರು.

Team Udayavani, Apr 29, 2022, 5:57 PM IST

ಅನ್ನ ಮೂಲದ ಆರ್ಥಿಕತೆ ಮುನ್ನೆಲೆಗೆ ಬಂದಾಗ ನೆಮ್ಮದಿ; ಬರಗೂರು

ಧಾರವಾಡ: ಬಡವರ ತುತ್ತಿಗೆ ಕನ್ನ ಹಾಕುವ ಆರ್ಥಿಕತೆಗಿಂತ ಅನ್ನಮೂಲದ ಆರ್ಥಿಕತೆ ಮುನ್ನೆಲೆಗೆ ಬಂದಾಗ ಮಾತ್ರ ರೈತರ ಬದುಕು ನೆಮ್ಮದಿ ಕಾಣಲು ಸಾಧ್ಯವಿದೆ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ಹೇಳಿದರು.

ನಗರದ ಕಲಾಭವನ ಆವರಣದಲ್ಲಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಹಮ್ಮಿಕೊಂಡಿದ್ದ ಎರಡನೇ ರಾಜ್ಯಮಟ್ಟದ ರೈತ ಕೃಷಿ ಕಾರ್ಮಿಕರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಅನ್ನದಾತರ ಎಲ್ಲ ಸಂಕಷ್ಟಗಳಿಗೆ ಸರ್ಕಾರಗಳು ಮಾತ್ರ ಕಾರಣವಲ್ಲ. ಅವು ತರುವ ಬಂಡವಾಳಶಾಹಿಗಳ ಪರವಾದ ನೀತಿಗಳೂ ಕಾರಣವಾಗಿವೆ. ಹೀಗಾಗಿ ಇಂದಿನ ಆರ್ಥಿಕ ನೀತಿಗಳು ಗ್ರಾಮೀಣರು, ಬೆವರು ಸುರಿಸಿ ದುಡಿಯುವವರ ಪರವಾಗಿಲ್ಲ. ಉಳ್ಳವರ ಉದ್ಧಾರಕ್ಕಾಗಿರುವ ಈ ಆರ್ಥಿಕ ನೀತಿಗಳನ್ನು ತೊಲಗಿಸಲು ಪ್ರಬಲ ಹೋರಾಟಗಳನ್ನು ಕಟ್ಟಬೇಕು ಎಂದರು.

ಗ್ರಾಮೀಣ ಆರ್ಥಿಕ ಚಲನೆಗೆ ಕಾರಣವಾಗಿರುವ ನರೇಗಾ ಯೋಜನೆಯ ಅನುದಾನವನ್ನು ಪ್ರತಿವರ್ಷ ಕಡಿತ ಮಾಡಲಾಗುತ್ತಿದೆ. ದೇಶದ ಶೇ.69 ಕೂಲಿಕಾರ್ಮಿಕರು ಮಾಸಿಕ 5000 ರೂ. ಆದಾಯದಲ್ಲಿ ಬದುಕುತ್ತಿದ್ದಾರೆ ಎಂಬುದನ್ನು ಸರ್ಕಾರದ ಅಂಕಿ-ಅಂಶಗಳೇ ಹೇಳುತ್ತವೆ. ಪ್ರತಿಯೊಂದು ವಸ್ತುವಿನ ಬೆಲೆಯೇರಿಕೆಯಾಗಿರುವಾಗ ಈ ಆದಾಯದಲ್ಲಿ ಬದುಕಲು ಸಾಧ್ಯವೇ ಎಂದು ಪ್ರಶ್ನಿಸಿದರು. ಬೇಂದ್ರೆಯವರ ಕವಿತೆಯಲ್ಲಿ ಉಲ್ಲೇಖಿಸಿದಂತೆ
ಕುರುಡು ಕಾಂಚಾಣದ ಕುಣಿತ ಮಿತಿ ಮೀರಿದೆ.

ದೇಶದ ಶೇ.74 ಸಂಪತ್ತು ಕೇವಲ ಶೇ.1 ಜನರಲ್ಲಿ ಶೇಖರವಾಗಿದೆ. ಕೊರೊನಾ ಸಾಂಕ್ರಾಮಿಕದಂತಹ ವಿಪತ್ತಿನ ಕಾಲದಲ್ಲೂ ಬಂಡವಾಳಶಾಹಿಗರು 13 ಲಕ್ಷ ಕೋಟಿಗಳಷ್ಟು ಲಾಭ ಗಳಿಸಿದರು. ಆದರೆ ಕೂಲಿ ಕಾರ್ಮಿಕರು ಮಾತ್ರ ಬರಿಗಾಲಿನಿಂದ ನಡೆ ನಡೆದು ಸತ್ತರು. ಹೀಗಾಗಿ ರೈತ ಕೂಲಿ ಕಾರ್ಮಿಕರು ಒಂದಾಗಿ ಹೋರಾಡಿ ಈ ಬಂಡವಾಳವಾದವನ್ನು ಸೋಲಿಸಬೇಕಿದೆ ಎಂದರು.

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಸತ್ಯವಾನ್‌ ಮಾತನಾಡಿ, ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ 13 ತಿಂಗಳು ಕಾಲ ರೈತರು ದೆಹಲಿಯ ಗಡಿಗಳಲ್ಲಿ ನಡೆಸಿದ ಅವಿರತ ಹೋರಾಟದ ಫಲವಾಗಿ ಮೋದಿ ಸರ್ಕಾರದ ವಿರುದ್ಧ ಜಯ ದೊರೆಯಿತು. ಪ್ರಭುತ್ವ ಎಷ್ಟೇ ಬಲಿಷ್ಟವಾಗಿರಲಿ ಸಂಘಟಿತ ಹೋರಾಟದಿಂದ ಅದನ್ನು ಮಣಿಸಲು ಸಾಧ್ಯ ಎಂಬುದನ್ನು ನಮ್ಮ ದೇಶದ ರೈತರು ಜಗತ್ತಿಗೆ ತೋರಿಸಿಕೊಟ್ಟರು. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ವಿಶ್ವಗುರುವಾಗಿಸಬೇಕೆಂದು ಬಯಸುತ್ತಾರೆ. ಆದರೆ ನಮ್ಮ ರೈತರು ಹೋರಾಟದ ಕಣದಲ್ಲಿ ವಿಶ್ವಗುರುವಾಗಿ ಮಾದರಿಯಾದರು ಎಂದರು.

ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಉಮಾ ಮಾತನಾಡಿದರು. ಹೋರಾಟಗಾರ ಎಸ್‌.ಆರ್‌. ಹಿರೇಮಠ ಅವರು ರೈತ ಹೋರಾಟದ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು. ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಚ್‌.ವಿ. ದಿವಾಕರ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯ ಅಧ್ಯಕ್ಷ ಟಿ.ಎಸ್‌. ಸುನೀತಕುಮಾರ ಅಧ್ಯಕ್ಷತೆ ವಹಿಸಿದ್ದರು.

ರಾಷ್ಟ್ರೀಯ ಕಾರ್ಯದರ್ಶಿ ಶಂಕರ್‌ ಘೋಷ್‌, ಅಮರನಾಥ್‌, ವಿ.ಶಶಿಧರ್‌ ಇನ್ನಿತರರಿದ್ದರು. ಬಹಿರಂಗ ಸಭೆಗೂ ಮುನ್ನ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ನಗರದಲ್ಲಿ ಬೃಹತ್‌ ರ್ಯಾಲಿ ನಡೆಸಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಈ ನೆಲದ ಕವಿ ವರಕವಿ ಬೇಂದ್ರೆಯವರು ರೈತನನ್ನು ಭೂಮಿ ತಾಯಿಯ ಚೊಚ್ಚಲ ಮಗನೆಂದರು. ಕುವೆಂಪು ಅವರು ನೇಗಿಲಯೋಗಿಯಾಗಿ ಕರೆದರು. ಆದರೆ ಇದು ಬೇರೆಯದೇ ಯೋಗಿಗಳ ಕಾಲವಾಗಿದ್ದು, ಸತ್ಯಕ್ಕೆ ಸಾಕ್ಷಿ ಕೇಳುವ ಕಾಲವಾಗಿದೆ.
ನಾಡೋಜ ಬರಗೂರು ರಾಮಚಂದ್ರಪ್ಪ,
ಹಿರಿಯ ಸಾಹಿತಿ

ಇಡೀ ಜಗತ್ತಿನ ರೈತರು ಭಾರತದ ರೈತರ ಹೋರಾಟದಿಂದ ಸ್ಪೂರ್ತಿ ಪಡೆದಿದ್ದಾರೆ. ಇದು ಭಗತ್‌ ಸಿಂಗ್‌ರಂತಹ ಮಹಾನ್‌ ಕ್ರಾಂತಿಕಾರಿಗಳಿಂದ ಸ್ಪೂರ್ತಿ ಪಡೆದ ಎಲ್ಲ ದಮನಿತ ರೈತರ ಹೋರಾಟದ ಫಲ. ರಾಜ್ಯ ಸರ್ಕಾರಗಳೂ ಈ ಕಾನೂನುಗಳನ್ನು ವಾಪಸ್‌ ಪಡೆಯಬೇಕು. ಅಲ್ಲಿಯವರೆಗೆ ರೈತರು ಹೋರಾಟ ಮುಂದುವರಿಸಬೇಕು.
ಸತ್ಯವಾನ್‌, ರಾಷ್ಟ್ರೀಯ ಅಧ್ಯಕ್ಷ,
ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.