ಕಾನೂನು ಸುವ್ಯವಸ್ಥೆ ಹಾಳುಗೆಡವುದೇ ರಾಣಾ ದಂಪತಿ ಉದ್ದೇಶ
ರಾಜಕಾರಣಿ ದಂಪತಿ ವಿರುದ್ಧ ನ್ಯಾಯಾಲಯಕ್ಕೆ ಮುಂಬೈ ಪೊಲೀಸರ ವರದಿ
Team Udayavani, Apr 29, 2022, 9:00 PM IST
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಮನೆ ಮುಂದೆ ಹನುಮಾನ್ ಚಾಲೀಸ ಪಠಿಸುವುದಾಗಿ ಸವಾಲು ಹಾಕಿದ್ದ ಸಂಸದೆ ನವನೀತ ರಾಣಾ ಮತ್ತು ಅವರ ಪತಿ ರವಿ ರಾಣಾ ಅವರ ಉದ್ದೇಶ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದಾಗಿತ್ತು ಎಂದು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ರೀತಿ ಮಾಡಿ, ಮಹಾರಾಷ್ಟ್ರ ಸರ್ಕಾರವನ್ನು ವಿಸರ್ಜನೆ ಮಾಡಲು ರಾಜ್ಯಪಾಲರು ಆದೇಶಿಸುವಂತೆ ಮಾಡುವುದು ಅವರ ಉದ್ದೇಶವಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಉಳ್ಳಾಲ: ತಾಯಿಗೆ ಬೈದ ವಿಚಾರ; ಯುವಕನಿಗೆ ತಲವಾರಿನಿಂದ ಹಲ್ಲೆ
ರಾಣಾ ದಂಪತಿ ಏ. 20-23ರವರೆಗೆ ನಡೆಸಿದ ಸುದ್ದಿಗೋಷ್ಠಿಗಳಲ್ಲಿ ಸಿಎಂ ಅವರನ್ನು ಅತಿಯಾಗಿ ಟೀಕಿಸಿದ್ದು, ನ್ಯಾಯಯುತ ಟೀಕೆಯ ಮಿತಿ ಮೀರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ದಂಪತಿಯ ಜಾಮೀನು ಅರ್ಜಿ ವಿಚಾರಣೆ ಶನಿವಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!