ಚಿತ್ರರಂಗದ ಹಿರಿಯ ನಟಿ ಹರಿಣಿಗೆ ಆತ್ಮೀಯ ಅಭಿನಂದನೆ


Team Udayavani, Apr 30, 2022, 7:10 AM IST

ಚಿತ್ರರಂಗದ ಹಿರಿಯ ನಟಿ ಹರಿಣಿಗೆ ಆತ್ಮೀಯ ಅಭಿನಂದನೆ

ಮಣಿಪಾಲ: ಸ್ವಾತಂತ್ರ್ಯ ಹೋರಾಟಗಾರ, ತುಳು ಹೋರಾಟಗಾರ ಎಸ್‌.ಯು. ಪಣಿಯಾಡಿ ಅವರ ಪುತ್ರಿ, ಚಲನಚಿತ್ರ ರಂಗದ ಹಿರಿಯ ನಟಿ-ನಿರ್ಮಾಪಕಿ ಹರಿಣಿ ಅವರನ್ನು ಶುಕ್ರವಾರ ಮಣಿಪಾಲದ ಉದಯವಾಣಿ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಆಡಳಿತ ನಿರ್ದೇಶಕ ಮತ್ತು ಸಿಇಒ ವಿನೋದಕುಮಾರ್‌ ಅವರು ಶಾಲು, ಸ್ಮರಣಿಕೆ ನೀಡಿ ಸಮ್ಮಾನಿಸಿದರು. ಹರಿಣಿಯವರು ಕನ್ನಡ ಚಲನಚಿತ್ರದ ಯಶಸ್ವೀ ನಟಿಯಾಗಿರುವುದು ಮಾತ್ರವಲ್ಲದೆ, ಮಣಿಪಾಲದ ಪ್ರಸ್‌ ಸ್ಥಾಪನೆಗೆ ಕಾರಣರಾದ ಎಸ್‌.ಯು. ಪಣಿಯಾಡಿ ಅವರ ಪುತ್ರಿ ಎನ್ನುವುದು ಉಲ್ಲೇಖನೀಯ. ಪಣಿಯಾಡಿಯವರು ಸ್ವಾತಂತ್ರ್ಯ ಹೋರಾಟ ಮತ್ತು ತುಳು ಭಾಷೆ- ಸಂಸ್ಕೃತಿಗೆ ಕೊಟ್ಟ ಕೊಡುಗೆ ಗಮನಾರ್ಹವಾದುದು. ಹಿರಿಯ ನಟಿ ಹರಿಣಿಯವರನ್ನು ಸಮ್ಮಾನಿಸುವ ಅವಕಾಶ ಬಂದೊದಗಿರುವುದು ಅತೀ ಸಂತಸ ತಂದಿತ್ತಿದೆ ಎಂದು ವಿನೋದಕುಮಾರ್‌ ಹೇಳಿದರು.

ಉದಯವಾಣಿ ಪತ್ರಿಕೆಯಿಂದ ಸಂದರ್ಶನ ಮಾತ್ರವಲ್ಲದೆ, ಪ್ರೀತಿಯ ಕರೆ ನೀಡಿ ನನ್ನ ಮಾತೃಭಾಷೆಯಲ್ಲಿ ಮಾತನಾಡಲು ಅವಕಾಶ ಒದಗಿಸಿಕೊಟ್ಟಿರುವುದು ಬಹಳ ಸಂತೋಷ ತರುತ್ತಿದೆ. ನಿಮ್ಮೆಲ್ಲರ ನಡುವೆ ತುಸು ಹೊತ್ತು ಕಳೆದಿರುವುದು ನನಗೆ ಸಂತೃಪ್ತಿ ತಂದಿದೆ ಎಂದು ಹರಿಣಿ ಭಾವುಕರಾಗಿ ನುಡಿದರು.

ತುಳುಕೂಟದ ವತಿಯಿಂದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಕಾರ್ಯದರ್ಶಿ ಗಂಗಾಧರ ಕಿದಿಯೂರು ಅವರು ಹರಿಣಿಯವರನ್ನು ಸಮ್ಮಾನಿಸಿದರು. ತುಳು ಸಂಸ್ಕೃತಿಗೂ ಎಸ್‌.ಯು. ಪಣಿಯಾಡಿ ಅವರಿಗೂ ಅವಿನಾಭಾವ ಸಂಬಂಧವಿದ್ದು ತುಳುಕೂಟದಿಂದ 27 ವರ್ಷಗಳಿಂದ ಪ್ರತೀ ವರ್ಷ ಪಣಿಯಾಡಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜೀವನದಲ್ಲಿ ಏನಾದರೂ ಒಂದು ಮಹತ್ತರ ಸಾಧನೆ ಮಾಡಬೇಕೆನ್ನುವುದಕ್ಕೆ ಪಣಿಯಾಡಿಯವರ ಜೀವನವೇ ಉದಾಹರಣೆ. ತುಳುಕೂಟದ ದಶಮಾನೋತ್ಸವಕ್ಕೆ ಹರಿಣಿಯವರ ಸಹೋದರ, ಚಲನಚಿತ್ರರಂಗದ ನಟ ವಾದಿರಾಜರು ಬಂದಿದ್ದರು. ಮುಂದಿನ ವರ್ಷ ಹರಿಣಿಯವರೂ ಬರಬೇಕು ಎಂದು ಜಯಕರ ಶೆಟ್ಟಿ ಆಹ್ವಾನಿಸಿದರು.

“ಉದಯವಾಣಿ’ಯ ಸ್ಥಾಪಕ ಸಂಪಾದಕೀಯ ವಿಭಾಗದ ಮುಖ್ಯಸ್ಥ ಬನ್ನಂಜೆ ರಾಮಾಚಾರ್ಯರ ಪುತ್ರ ಸರ್ವಜ್ಞ ಉಪಸ್ಥಿತರಿದ್ದರು. ಉಪಸಂಪಾದಕಿ ರಾಧಿಕಾ ನಿರ್ವಹಿಸಿದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.