ಕಾರ್ಮಿಕ ನಾಯಕ ಎಸ್.ಎಸ್ ಪ್ರಕಾಶಂ ನಿಧನ
Team Udayavani, Apr 30, 2022, 11:07 AM IST
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಎಸ್.ಎಸ್. ಪ್ರಕಾಶಂ ಶನಿವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಕಾಶಂ ಅವರು ಪಕ್ಷದ ನಿಷ್ಠವಂತ ನಾಯಕ ಹಾಗೂ ಕಾರ್ಯಕರ್ತರಾಗಿದ್ದು, ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ಕಾರ್ಮಿಕರ ಪರ ಕಾಳಜಿ ಹೊಂದಿದ್ದ ಪ್ರಕಾಶಂ ಅವರು ಉತ್ತಮ ಸಂಘಟಕರರೂ ಹೌದು. ಅವರ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:200 ಉಗ್ರರನ್ನು ಎದುರಿಸಲಾಗದ ಹತ್ತು ಲಕ್ಷ ಸೇನಾ ಪಡೆಗಳು ಏನು ಮಾಡುತ್ತಿದೆ?: ಮೆಹಬೂಬಾ ಮುಫ್ತಿ
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವನ್ನು ಕುಟುಂಬ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕರೂ, ಕೆಪಿಸಿಸಿ INTUC ವಿಭಾಗದ ಅಧ್ಯಕ್ಷರಾದ ಶ್ರೀ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ತಿಳಿದು ಅಪಾರ ನೋವುಂಟಾಯಿತು. ಪಕ್ಷಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಪದಗಳಲ್ಲಿ ಹಿಡಿದಿಡಲಾಗದು. ಶ್ರೀಯುತರ ಕುಟುಂಬವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/d9WSIzgyze
— DK Shivakumar (@DKShivakumar) April 30, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ