ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರದ ಒಪ್ಪಿಗೆ: ಸಿಎಂ
ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಸಮಯ ನಿಗದಿ
Team Udayavani, Apr 30, 2022, 7:01 PM IST
ನವದೆಹಲಿ: ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ಈ ಮೂಲಕ ರಾಗಿ ಬೆಳೆಗಾರರ ದೊಡ್ಡ ಸಂಕಷ್ಟ ಬಗೆಹರಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಸಿಜೆಗಳ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಐದಾರು ಜಿಲ್ಲೆಗಳಲ್ಲಿ ರಾಗಿ ಬೆಳೆದ ರೈತರಿಗೆ ಬೆಲೆ ಸಿಗಬೇಕೆಂಬ ಕಾರಣದಿಂದ ಮೊದಲು 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಯಿತು. ಪುನ: ಬೇಡಿಕೆ ಬಂದ ಹಿನ್ನೆಲೆಯಲ್ಲಿ 485 ಕೋಟಿ ರೂ.ಗಳನ್ನು ಮಂಜೂರು ಮಾಡಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಯಿತು. ರಾಗಿ ಹೆಚ್ಚು ಬೆಳೆದ್ದದ್ದರಿಂದ ಖರೀದಿಗೆ ರೈತರ ಒತ್ತಾಸೆಯ ಮೇರೆಗೆ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರಿಂದ ರಾಗಿ ಖರೀದಿಯನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು.
ಸಮಯ ನಿಗದಿ
ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಸಮಯ ನಿಗದಿ ಮಾಡಲಾಗಿದೆ. ನ್ಯಾಯಮೂರ್ತಿಗಳ ಹುದ್ದೆ ಖಾಲಿಯಾಗುವ ಆರು ತಿಂಗಳು ಮುನ್ನವೇ ಭರ್ತಿ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿ ಆರು ತಿಂಗಳೊಳಗೆ ಮುಗಿಯಬೇಕು. ರಾಜ್ಯ ಮಟ್ಟದಲ್ಲಿ, ಕೇಂದ್ರ ಮಟ್ಟದಲ್ಲಿ ಹಾಗೂ ಸವೋಚ್ಛ ನ್ಯಾಯಾಲಯದಲ್ಲಿ ಎಷ್ಟು ದಿನಗಳು ಎನ್ನುವುದನ್ನು ಈಗಾಗಲೇ ಇರುವ ತೀರ್ಪಿನಂತೆ ಮಾಡಬೇಕು. ಕೆಳಹಂತದ ಅಧಿಕಾರಿಗಳನ್ನು ತುಂಬುವ ಕೆಲಸವೂ ಆಗಬೇಕು ಎಂಬ ಪ್ರಮುಖ ನಿರ್ಣಯಗಳು ಸಮ್ಮೇಳನದಲ್ಲಿ ಆಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ