ಒಬಿಸಿ ಮೀಸಲಾತಿಯಲ್ಲಿ 4 ಉಪ ವಿಭಾಗ?


Team Udayavani, May 1, 2022, 8:15 AM IST

ಒಬಿಸಿ ಮೀಸಲಾತಿಯಲ್ಲಿ 4 ಉಪ ವಿಭಾಗ?

ಹೊಸದಿಲ್ಲಿ: ತೀರಾ ಸೂಕ್ಷ್ಯ ಎನಿಸಿರುವ ಒಬಿಸಿ ಮೀಸಲಾತಿಯಲ್ಲಿ ಸುಧಾರಣೆ ತರಲು ಚಿಂತನೆ ನಡೆಸಿರುವ ಕೇಂದ್ರ ಸರಕಾರ, ಮೀಸಲಿನಲ್ಲಿ ಬದಲಾವಣೆ ಮಾಡಿದರೆ ಮುಂದೆ ಉಂಟಾಗಬಹುದಾದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಶುರು ಮಾಡಿದೆ.

2017ರಲ್ಲಿ ರಚಿಸಲಾಗಿದ್ದ ನ್ಯಾ| ಜಿ.ರೋಹಣಿ ನೇತೃತ್ವದ ಆಯೋಗವು ಒಬಿಸಿಯೊಳಗಿನ ಉಪ ವಿಭಾಗದ ಕುರಿತಂತೆ ಪರಿಶೀಲನೆ ನಡೆಸಿದ್ದು, ಕೇಂದ್ರ ಸರಕಾರಕ್ಕೆ  ತನ್ನ ವರದಿ ನೀಡಿದೆ. ಇದರಲ್ಲಿ ಒಬಿಸಿಯೊಳಗೆ ಬರುವ 2,633 ಜಾತಿ-ಉಪಜಾತಿಗಳನ್ನು 4 ಭಾಗಗಳಾಗಿ (1,2,3 ಮತ್ತು 4) ವಿಂಗಡಿಸಿ ಇವುಗಳಿಗೆ ಬೇರೆ ಬೇರೆ ರೀತಿಯ ಮೀಸಲಾತಿ ನೀಡಲು ಶಿಫಾರಸು ನೀಡಿದೆ.

ಹಾಗೆಯೇ ಕೆಟಗೆರಿ 1ರಲ್ಲಿರುವ ಜಾತಿಗಳಿಗೆ ಶೇ. 10ರಷ್ಟು ಮೀಸಲಾತಿ ನೀಡುವುದು, ಉಳಿದ 2,3 ಮತ್ತು 4 ಕೆಟಗೆರಿಗಳ ಜಾತಿಗಳಿಗೆ ಉಳಿದ ಶೇ.17ರಷ್ಟು ಮೀಸಲಾತಿಯನ್ನು ಹಂಚಿಕೆ ಮಾಡುವುದು ಇದರಲ್ಲಿ ಸೇರಿದೆ. ಈಗ ಇಡೀ ಒಬಿಸಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, 2,633 ಜಾತಿಗಳಲ್ಲಿ ಇದು ಹಂಚಿಹೋಗಿದೆ. ಇದಕ್ಕೆ ಬದಲಾಗಿ ಹೊಸ ಮಾದರಿಯಲ್ಲಿ ಉಪ ಕೆಟಗೆರಿಗಳನ್ನು ಮಾಡಿ, ಜಾತಿ ಮತ್ತು ಉಪಜಾತಿಗಳ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಟ್ಟರೆ ಎಲ್ಲರಿಗೂ ಸಮಾನವಾದ ಮೀಸಲು ನೀಡಿದಂತೆ ಆಗುತ್ತದೆ ಎಂಬುದು ನ್ಯಾ| ರೋಹಿಣಿ ಆಯೋಗದ ಅಭಿಪ್ರಾಯ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಆಯೋಗವು ಶಿಫಾರಸುಗಳ ಕುರಿತಂತೆ ವಿವರಣೆ ನೀಡಿದೆ. ಆದರೆ ಹೊಸ ಮೀಸಲು ನಿಯಮವನ್ನು ಜಾರಿಗೊಳಿಸಿದರೆ, ರಾಜಕೀಯವಾಗಿ ಆಗುವ ಅಡ್ಡಿಗಳ ಕುರಿತಂತೆ ಕೇಂದ್ರ ಸರಕಾರ ಚರ್ಚೆ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ. ಅಲ್ಲದೆ, 4 ಕೆಟಗೆರಿಗಳ ಆಧಾರದಲ್ಲಿ ಮೀಸಲಾತಿ ನೀಡಿದರೆ, ಮೊದಲ ಕೆಟಗೆರಿಗೆ ಶೇ. 10ರಷ್ಟು ಮೀಸಲು ಸಿಕ್ಕರೆ, 4ನೇ ಕೆಟಗೆರಿಯವರಿಗೆ ಶೇ. 2ರಷ್ಟು ಮೀಸಲಾತಿ ಸಿಗುತ್ತದೆ. ಆಗ ತೀವ್ರ ವಿರೋಧಗಳು ಉಂಟಾಗಬಹುದು ಎಂದು ಹೆಸರೇಳಲು ಇಚ್ಛಿಸದ ಕೇಂದ್ರದ ಸಚಿವರು ಹೇಳಿದ್ದಾರೆ ಎಂದು ಎಕಾನಾಮಿಕ್‌ ಟೈಮ್ಸ್‌ ವರದಿ ಮಾಡಿದೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.