ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆ


Team Udayavani, May 1, 2022, 6:40 AM IST

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆ

ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3 ಬಿಗೆ ಸೇರಿದವರಿಗೆ ಹಲವಾರು ಯೋಜನೆಗಳಿದ್ದು, ಫ‌ಲಾನುಭವಿಗಳು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಚೈತನ್ಯ ಸಹಾಯಧನ
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂ., ಪಟ್ಟಣದವರಿಗೆ 1.20 ಲ.ರೂ.ಗಳ ಒಳಗಿರಬೇಕು. ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸೇವಾ ವಲಯ ಮತ್ತು ಸಾರಿಗೆ ವಲಯಕ್ಕೆ ಇದನ್ನು ನೀಡಲಾಗುತ್ತದೆ.

ಅರ್ಜಿದಾರರ ವಯಸ್ಸು 18ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಕೆವೈಸಿ ಬಗ್ಗೆ ಆಧಾರ್‌ ಕಾರ್ಡ್‌, ಚುನಾವಣೆ ಗುರುತಿನ ಚೀಟಿ, ಪಾನ್‌ ಕಾರ್ಡ್‌ ದಾಖಲೆಗಳನ್ನು ಸಲ್ಲಿಸಬೇಕು. ಈ ಹಿಂದೆ ನಿಗಮದ ಯೋಜನೆಗಳಲ್ಲಿ
ಸೌಲಭ್ಯ ಪಡೆದಿರಬಾರದು.

ಸ್ವಯಂ ಉದ್ಯೋಗ
ಘಟಕ ವೆಚ್ಚ 50 ಸಾವಿರ ರೂ.ಗಳಿಗೆ ಶೇ. 30ರಷ್ಟು ಗರಿಷ್ಠ 10 ಸಾವಿರ ರೂ.ಗಳ ಸಹಾಯಧನ ಉಳಿಕೆ ಶೇ. 70ರಷ್ಟು 40 ಸಾವಿರ ರೂ.ಗಳನ್ನು ಶೇ.4ರ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ಘಟಕ ವೆಚ್ಚ 50,001 ರೂ.ನಿಂದ 1 ಲ.ರೂ. ವರೆಗೆ ಶೇ. 20ರಷ್ಟು ಗರಿಷ್ಠ 20 ಸಾವಿರ ರೂ.ಗಳ ಸಹಾಯಧನ ಉಳಿಕೆ ಶೇ. 80ರಷ್ಟು 80 ಸಾವಿರ ರೂ.ಗಳನ್ನು ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಘಟಕ ವೆಚ್ಚ 1,001,001 ರೂ.ನಿಂದ 2 ಲ.ರೂ. ವರೆಗೆ ಶೇ. 15ರಷ್ಟು ಕನಿಷ್ಠ 20 ಸಾವಿರ ರೂ.ಗಳ ಗರಿಷ್ಠ 30 ಸಾವಿರ ರೂ.ಗಳ ಸಹಾಯಧನ ಉಳಿಕೆ ಶೇ. 85ರಷ್ಟು 1,70,000ರೂ.ಗಳನ್ನು ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ – 1, 2ಎ, 3ಎ ಮತ್ತು 3 ಬಿಗೆ ಸೇರಿದವರಾಗಿರಬೇಕು. ವಾರ್ಷಿಕ ವರಮಾನ ಗ್ರಾಮಾಂತರದವರಿಗೆ 98 ಸಾವಿರ ರೂ., ಪಟ್ಟಣದವರಿಗೆ 1.20 ಲ.ರೂ. ಒಳಗಿರಬೇಕು. ವಯಸ್ಸು 18ರಿಂದ 55. ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ ಹಾಗೂ ಸೇವಾ ವಲಯ ಚಟುವಟಿಕೆಗಳಿಗೆ ಸಾಲ ಸೌಲಭ್ಯ ಒದಗಿಸಲಾಗುವುದು.

ಕೌಶಲ, ವೃತ್ತಿ ಕಸುಬು
ಘಟಕ ವೆಚ್ಚ 50 ಸಾವಿರ ರೂ.ಗಳಿಗೆ ಶೇ. 30ರಷ್ಟು ಗರಿಷ್ಠ 10 ಸಾವಿರ ರೂ.ಗಳ ಸಹಾಯಧನ ಉಳಿಕೆ ಶೇ. 70ರಷ್ಟು 40 ಸಾವಿರ ರೂ.ಗಳನ್ನು ಶೇ. 2ರ ಬಡ್ಡಿ ದರದಲ್ಲಿ ಸಾಲ, ಘಟಕ ವೆಚ್ಚ 50,001ರಿಂದ 1ಲ.ರೂ. ವರೆಗೆ ಶೇ. 20ರಷ್ಟು ಗರಿಷ್ಠ 20 ಸಾವಿರ ರೂ.ಗಳ ಸಹಾಯಧನ ಉಳಿಕೆ ಶೇ. 80ರಷ್ಟು 80 ಸಾವಿರ ರೂ.ಗಳನ್ನು ಶೇ. 2ರ ಬಡ್ಡಿದರದಲ್ಲಿ ಸಾಲ, ಘಟಕ ವೆಚ್ಚ 1,00,001 ರೂ.ಗಳಿಂದ 2 ಲ.ರೂ. ವರೆಗೆ ಶೇ. 15ರಷ್ಟು 20 ಸಾವಿರ ರೂ.ಗಳು ಗರಿಷ್ಠ 30 ಸಾವಿರ ರೂ.ಗಳ ಸಹಾಯಧನ ಉಳಿಕೆ ಶೇ. 85ರಷ್ಟು 1.7 ಲ.ರೂ.ಗಳನ್ನು ಶೇ. 2ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.

ವಿದೇಶಿ ವಿ.ವಿ.ಗಳಲ್ಲಿ
ಉನ್ನತ ವ್ಯಾಸಂಗ‌
ವಿದೇಶಿ ವಿ.ವಿ.ಗಳಲ್ಲಿ ಪಿಎಚ್‌.ಡಿ., ಪೋಸ್ಟ್‌ ಡಾಕ್ಟ್ರಲ್‌ ಮತ್ತು ಮಾಸ್ಟರ್‌ ಡಿಗ್ರಿ ವ್ಯಾಸಂಗಕ್ಕೆ ಪ್ರವೇಶ ಹೊಂದಿದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿಯವರು ಅರ್ಹರು. ವಾರ್ಷಿಕ ಗರಿಷ್ಠ 3.50 ಲ.ರೂ.ಗಳಂತೆ 3 ವರ್ಷದ ಅವಧಿಗೆ ಗರಿಷ್ಠ 10 ಲ.ರೂ.ಗಳು. ಕುಟುಂಬದ ವಾರ್ಷಿಕ ಆದಾಯ 8 ಲ.ರೂ. ಮಿತಿಯಲ್ಲಿರಬೇಕು. ಅರ್ಹತ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ವ್ಯಾಸಂಗಕ್ಕೆ ಪ್ರವೇಶ ಪಡೆದ ಬಗ್ಗೆ ವಿದೇಶಿ ವಿ.ವಿ.ಗಳ ಪ್ರವೇಶ ಪತ್ರ, ವೀಸಾ, ಪಾಸ್‌ಪೋರ್ಟ್‌, ವಿಮಾನ ಟಿಕೆಟ್‌ನ ಪ್ರತಿ ಒದಗಿಸಬೇಕು. ಸಾಲದ ಭದ್ರತೆಗೆ ವಿದ್ಯಾರ್ಥಿಯ ತಂದೆ ಅಥವಾ ಜಾಮೀನುದಾರರು ಹೊಂದಿರುವ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.

ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ಆರ್ಥಿಕ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತೇಜಿಸಲು ನಿಗಮದ ವತಿಯಿಂದ ಫ‌ಲಾನುಭವಿಗಳಿಗೆ ಹಲವಾರು ರೀತಿಯ ಯೋಜನೆಗಳನ್ನು ಕಲ್ಪಿಸಲಾಗಿದೆ. ಇದರ ಪ್ರಯೋಜನ ಪಡೆದು ಅದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಿದೆ.
– ಮಂಜು ಡಿ., ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ, ದ.ಕ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.